AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Aug 10, 2021 | 2:40 PM

ಥಾಣೆ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ್ದಲ್ಲದೆ, ಅದೊಂದು ಆಕಸ್ಮಿಕ ಸಾವೆಂಬಂತೆ ಬಿಂಬಿಸಲೂ ಪ್ರಯತ್ನ ಮಾಡಿದ್ದಾಳೆ. ಅಷ್ಟಕ್ಕೂ ಆ ಬಾಲಕಿ ಅಮ್ಮನನ್ನು ಕೊಂದಿದ್ದು, ಆಕೆಯ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನವಿ ಮುಂಬೈನ ಏರೋಲಿ ಎಂಬಲ್ಲಿ ಜು.30ರಂದು ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಮಗಳಿಗೆ ಅದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

Published On - 2:40 pm, Tue, 10 August 21

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ