AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು.

ಕರಾಟೆ ಬೆಲ್ಟ್​ನಿಂದ ತಾಯಿಯ ಕತ್ತು ಹಿಸುಕಿ ಕೊಂದ ಮಗಳು; ಪೊಲೀಸರಿಗೆ ಫೋನ್​ ಮಾಡಿ ಸುಳ್ಳು ಹೇಳಿ, ಸಿಕ್ಕಿಬಿದ್ದಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2021 | 2:40 PM

Share

ಥಾಣೆ: 15ವರ್ಷದ ಬಾಲಕಿಯೊಬ್ಬಳು ತನ್ನ ತಾಯಿಯ ಕುತ್ತಿಗೆಯನ್ನು ಕರಾಟೆ ಬೆಲ್ಟ್​​ನಿಂದ ಹಿಸುಕಿ ಕೊಂದ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತಾಯಿಯನ್ನು ಹತ್ಯೆ ಮಾಡಿದ್ದಲ್ಲದೆ, ಅದೊಂದು ಆಕಸ್ಮಿಕ ಸಾವೆಂಬಂತೆ ಬಿಂಬಿಸಲೂ ಪ್ರಯತ್ನ ಮಾಡಿದ್ದಾಳೆ. ಅಷ್ಟಕ್ಕೂ ಆ ಬಾಲಕಿ ಅಮ್ಮನನ್ನು ಕೊಂದಿದ್ದು, ಆಕೆಯ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನವಿ ಮುಂಬೈನ ಏರೋಲಿ ಎಂಬಲ್ಲಿ ಜು.30ರಂದು ನಡೆದ ಘಟನೆ ಈಗ ಬೆಳಕಿಗೆ ಬಂದಿದೆ.

ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಮಗಳಿಗೆ ಅದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳಿಸಿದ್ದರು.

ಜು.30ರಂದು ಪೊಲೀಸ್​ ಠಾಣೆಗೆ ಕರೆ ಮಾಡಿದ ಬಾಲಕಿ, ನನ್ನ ತಾಯಿ ಏಕಾಏಕಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿತ್ತು. ಅದರಲ್ಲಿ ಮಹಿಳೆ ಸಹಜವಾಗಿ ಸತ್ತಿಲ್ಲ..ಆಕೆಯ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್​​ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

Published On - 2:40 pm, Tue, 10 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ