AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಶಾ ಕೇಸ್ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಬಯಲು

ಹೈದರಾಬಾದ್: ದಿಶಾ ಮೇಲೆ ಕಾಮುಕರು ಎಸಗಿದ ಹೇಯಕೃತ್ಯ ಜನರ ಮನಸಲ್ಲಿ ಹಾಗೇ ಇದೆ. ಆದ್ರೆ, ಈ ಘಟನೆ ಮಾಸುವ ಮುನ್ನ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.. ‘ದಿಶಾ’ ಕೇಸ್ ಮಾಸುವ ಮೊದ್ಲೇ ಮತ್ತೊಂದು ಹೇಯ ಕೃತ್ಯ..! ನವೆಂಬರ್ 27ರಂದು ರಾತ್ರಿ ಕಾಮುಕರು ವಿಕೃತಿ ಮೆರೆದಿದ್ರು. ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ದಿಶಾ ಮೇಲೆ ಅತ್ಯಾಚಾರವೆಸಗಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ರು. ಆ ನರರಾಕ್ಷಸರಿಗೆ ಖಾಕಿ ಎನ್​ಕೌಂಟರ್ ಶಿಕ್ಷೆ ಕೊಟ್ಟಿತ್ತು. ಆದ್ರೀಗ ಆ ಘೋರ ಘಟನೆ […]

ದಿಶಾ ಕೇಸ್ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಬಯಲು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 14, 2019 | 7:53 AM

Share

ಹೈದರಾಬಾದ್: ದಿಶಾ ಮೇಲೆ ಕಾಮುಕರು ಎಸಗಿದ ಹೇಯಕೃತ್ಯ ಜನರ ಮನಸಲ್ಲಿ ಹಾಗೇ ಇದೆ. ಆದ್ರೆ, ಈ ಘಟನೆ ಮಾಸುವ ಮುನ್ನ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ..

‘ದಿಶಾ’ ಕೇಸ್ ಮಾಸುವ ಮೊದ್ಲೇ ಮತ್ತೊಂದು ಹೇಯ ಕೃತ್ಯ..! ನವೆಂಬರ್ 27ರಂದು ರಾತ್ರಿ ಕಾಮುಕರು ವಿಕೃತಿ ಮೆರೆದಿದ್ರು. ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ದಿಶಾ ಮೇಲೆ ಅತ್ಯಾಚಾರವೆಸಗಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ರು. ಆ ನರರಾಕ್ಷಸರಿಗೆ ಖಾಕಿ ಎನ್​ಕೌಂಟರ್ ಶಿಕ್ಷೆ ಕೊಟ್ಟಿತ್ತು. ಆದ್ರೀಗ ಆ ಘೋರ ಘಟನೆ ಮಾಸುವ ಮುನ್ನವೇ ಈಗ ಹೈದರಾಬಾದ್​ನಲ್ಲಿ ಮತ್ತೊಂದು ಅತ್ಯಾಚಾರ ಬೆಳಕಿಗೆ ಬಂದಿದೆ.

18 ವರ್ಷದ ಯುವತಿ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ಬೆಳಕಿಗೆ ಬರ್ತಿದ್ದಂತೆ ಆಟೋ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡು ಪೊಲಿಸ್ರು ಆ ಕ್ರೂರಿಗಾಗಿ ಹುಟುಕಾಟ ನಡೆಸಿದ್ದಾರೆ.

ಪಾಟ್ನಾದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಹೈದರಾಬಾದ್​ನಲ್ಲಿ ಆಟೋ ಚಾಲಕ ರಕ್ಕಸ ರೂಪ ತಾಳಿದ್ರೆ, ಇತ್ತ ಬಿಹಾರದ ಪಾಟ್ನಾದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಡಿಸೆಂಬರ್ 9ರಂದು ಅದೇ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯನ್ನ ಕರೆದೊಯ್ದು ರೇಪ್ ಮಾಡಿದ್ದಾರೆ. ಈ ವಿಚಾರವನ್ನು ವಿದ್ಯಾರ್ಥಿನಿ ಯಾರಿಗೂ ಹೇಳಿರಲಿಲ್ಲ. ಆದ್ರೆ, ಸಂತ್ರಸ್ತೆಯ ಸ್ನೇಹಿತೆ ಆಕೆಯ ಪೋಷಕರು ಹೇಳಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಈ ಸುದ್ದಿ ಗೊತ್ತಾಗ್ತಿದ್ದಂತೆ ವಿದ್ಯಾರ್ಥಿಗಳು ರೊಚ್ಚಿಗೆದ್ರು. ಪಾಟ್ನಾದ ಕಾರ್ಗಿಲ್ ಚೌಕ್ ಬಳಿ ಜಮಾಯಿಸಿ ಬಿಹಾರ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದ್ರು. ರಸ್ತೆಯಲ್ಲಿ ಟೈರ್​ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯುತ್ತಿದ್ದಂತೆ ಪೊಲೀಸ್ರು ಅಲರ್ಟ್ ಆದ್ರು.

ಸಿಟ್ಟಿಗೆದ್ದಿದ್ದ ವಿದ್ಯಾರ್ಥಿಗಳ ಮೇಲೆ ಜಲಫಿರಂಗಿ ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಿಸಿದ್ರು. ಒಟ್ನಲ್ಲಿ, ದಿಶಾ ಕೇಸ್ ಮರೆಯುವ ಮುನ್ನವೇ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ. ಹೈದಾರಾಬಾದ್ ಮತ್ತು ಪಾಟ್ನಾದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಅವರಿಗೆ ತಕ್ಷ ಶಿಕ್ಷೆ ಆಗಲಿ ಅಂತಾ ಜನ ಹೋರಾಟದ ಹಾದಿ ತುಳಿದಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ