AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಶಾ ಕೇಸ್ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಬಯಲು

ಹೈದರಾಬಾದ್: ದಿಶಾ ಮೇಲೆ ಕಾಮುಕರು ಎಸಗಿದ ಹೇಯಕೃತ್ಯ ಜನರ ಮನಸಲ್ಲಿ ಹಾಗೇ ಇದೆ. ಆದ್ರೆ, ಈ ಘಟನೆ ಮಾಸುವ ಮುನ್ನ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.. ‘ದಿಶಾ’ ಕೇಸ್ ಮಾಸುವ ಮೊದ್ಲೇ ಮತ್ತೊಂದು ಹೇಯ ಕೃತ್ಯ..! ನವೆಂಬರ್ 27ರಂದು ರಾತ್ರಿ ಕಾಮುಕರು ವಿಕೃತಿ ಮೆರೆದಿದ್ರು. ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ದಿಶಾ ಮೇಲೆ ಅತ್ಯಾಚಾರವೆಸಗಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ರು. ಆ ನರರಾಕ್ಷಸರಿಗೆ ಖಾಕಿ ಎನ್​ಕೌಂಟರ್ ಶಿಕ್ಷೆ ಕೊಟ್ಟಿತ್ತು. ಆದ್ರೀಗ ಆ ಘೋರ ಘಟನೆ […]

ದಿಶಾ ಕೇಸ್ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಬಯಲು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Dec 14, 2019 | 7:53 AM

Share

ಹೈದರಾಬಾದ್: ದಿಶಾ ಮೇಲೆ ಕಾಮುಕರು ಎಸಗಿದ ಹೇಯಕೃತ್ಯ ಜನರ ಮನಸಲ್ಲಿ ಹಾಗೇ ಇದೆ. ಆದ್ರೆ, ಈ ಘಟನೆ ಮಾಸುವ ಮುನ್ನ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ..

‘ದಿಶಾ’ ಕೇಸ್ ಮಾಸುವ ಮೊದ್ಲೇ ಮತ್ತೊಂದು ಹೇಯ ಕೃತ್ಯ..! ನವೆಂಬರ್ 27ರಂದು ರಾತ್ರಿ ಕಾಮುಕರು ವಿಕೃತಿ ಮೆರೆದಿದ್ರು. ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ದಿಶಾ ಮೇಲೆ ಅತ್ಯಾಚಾರವೆಸಗಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ರು. ಆ ನರರಾಕ್ಷಸರಿಗೆ ಖಾಕಿ ಎನ್​ಕೌಂಟರ್ ಶಿಕ್ಷೆ ಕೊಟ್ಟಿತ್ತು. ಆದ್ರೀಗ ಆ ಘೋರ ಘಟನೆ ಮಾಸುವ ಮುನ್ನವೇ ಈಗ ಹೈದರಾಬಾದ್​ನಲ್ಲಿ ಮತ್ತೊಂದು ಅತ್ಯಾಚಾರ ಬೆಳಕಿಗೆ ಬಂದಿದೆ.

18 ವರ್ಷದ ಯುವತಿ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ಬೆಳಕಿಗೆ ಬರ್ತಿದ್ದಂತೆ ಆಟೋ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡು ಪೊಲಿಸ್ರು ಆ ಕ್ರೂರಿಗಾಗಿ ಹುಟುಕಾಟ ನಡೆಸಿದ್ದಾರೆ.

ಪಾಟ್ನಾದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಹೈದರಾಬಾದ್​ನಲ್ಲಿ ಆಟೋ ಚಾಲಕ ರಕ್ಕಸ ರೂಪ ತಾಳಿದ್ರೆ, ಇತ್ತ ಬಿಹಾರದ ಪಾಟ್ನಾದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಡಿಸೆಂಬರ್ 9ರಂದು ಅದೇ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯನ್ನ ಕರೆದೊಯ್ದು ರೇಪ್ ಮಾಡಿದ್ದಾರೆ. ಈ ವಿಚಾರವನ್ನು ವಿದ್ಯಾರ್ಥಿನಿ ಯಾರಿಗೂ ಹೇಳಿರಲಿಲ್ಲ. ಆದ್ರೆ, ಸಂತ್ರಸ್ತೆಯ ಸ್ನೇಹಿತೆ ಆಕೆಯ ಪೋಷಕರು ಹೇಳಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಈ ಸುದ್ದಿ ಗೊತ್ತಾಗ್ತಿದ್ದಂತೆ ವಿದ್ಯಾರ್ಥಿಗಳು ರೊಚ್ಚಿಗೆದ್ರು. ಪಾಟ್ನಾದ ಕಾರ್ಗಿಲ್ ಚೌಕ್ ಬಳಿ ಜಮಾಯಿಸಿ ಬಿಹಾರ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದ್ರು. ರಸ್ತೆಯಲ್ಲಿ ಟೈರ್​ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯುತ್ತಿದ್ದಂತೆ ಪೊಲೀಸ್ರು ಅಲರ್ಟ್ ಆದ್ರು.

ಸಿಟ್ಟಿಗೆದ್ದಿದ್ದ ವಿದ್ಯಾರ್ಥಿಗಳ ಮೇಲೆ ಜಲಫಿರಂಗಿ ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಿಸಿದ್ರು. ಒಟ್ನಲ್ಲಿ, ದಿಶಾ ಕೇಸ್ ಮರೆಯುವ ಮುನ್ನವೇ ಮತ್ತೆ ಅತ್ಯಾಚಾರಗಳು ನಡೆಯುತ್ತಿವೆ. ಹೈದಾರಾಬಾದ್ ಮತ್ತು ಪಾಟ್ನಾದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಅವರಿಗೆ ತಕ್ಷ ಶಿಕ್ಷೆ ಆಗಲಿ ಅಂತಾ ಜನ ಹೋರಾಟದ ಹಾದಿ ತುಳಿದಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?