AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejashwi Yadav: ಬಿಜೆಪಿಯವರನ್ನೂ ಇದೇ ಪ್ರಶ್ನೆ ಕೇಳಿ; ಉದ್ಯೋಗದ ಭರವಸೆ ಕುರಿತ ಪ್ರಶ್ನೆಗೆ ತೇಜಸ್ವಿ ಯಾದವ್ ಉತ್ತರ

ನಮ್ಮನ್ನು ಪ್ರಶ್ನಿಸುತ್ತಿರುವ ರೀತಿಯಲ್ಲೇ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಭರವಸೆ ನೀಡಿದ 2 ಕೋಟಿ ಉದ್ಯೋಗಗಳ ಭರವಸೆ ಏನಾಯಿತು? ಎಂದು ಬಿಜೆಪಿ ನಾಯಕರನ್ನು ಕೇಳಿ ಎಂದು ಡಿಸಿಎಂ ತೇಜಸ್ವಿ ಯಾದವ್ ಹೇಳಿದ್ದಾರೆ.

Tejashwi Yadav: ಬಿಜೆಪಿಯವರನ್ನೂ ಇದೇ ಪ್ರಶ್ನೆ ಕೇಳಿ; ಉದ್ಯೋಗದ ಭರವಸೆ ಕುರಿತ ಪ್ರಶ್ನೆಗೆ ತೇಜಸ್ವಿ ಯಾದವ್ ಉತ್ತರ
ತೇಜಸ್ವಿ ಯಾದವ್Image Credit source: NDTV
TV9 Web
| Edited By: |

Updated on: Aug 13, 2022 | 4:12 PM

Share

ಪಾಟ್ನಾ: 2020ರ ಬಿಹಾರ ಚುನಾವಣೆಯಲ್ಲಿ (Bihar Election) ಅಧಿಕಾರಕ್ಕೆ ಬಂದರೆ 10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ತೇಜಸ್ವಿ ಯಾದವ್ ಭರವಸೆ ನೀಡಿದ್ದರು. ಇದೀಗ ಉಪಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್ (Tejashwi Yadav) ಅವರು ಭರವಸೆ ನೀಡಿದ್ದನ್ನು ಪದೇ ಪದೇ ನೆನಪಿಸುತ್ತಿರುವ ಬಿಜೆಪಿಯ ಪ್ರಶ್ನೆಗೆ ಉತ್ತರಿಸಿದ ಕ್ಲಿಪ್ ಅನ್ನು ಪೋಸ್ಟ್ ಮಾಡಿಕೊಂಡಿದ್ದಾರೆ.

“ಹಿಂದೂ-ಮುಸ್ಲಿಂ ವಿಷಯಗಳ ಬದಲು ನಮ್ಮಲ್ಲಿ ಉದ್ಯೋಗದ ಬಗ್ಗೆ ಕೇಳುತ್ತಿರುವುದು ನಮ್ಮ ಯಶಸ್ಸಾಗಿದೆ. ಯಾವತ್ತೂ ಉದ್ಯೋಗದ ಬಗ್ಗೆ ಕೇಳದೆ, ಸದಾ ನಿದ್ದೆ ಮಾಡುತ್ತಿದ್ದ ಜನರಿಗೆ ಧನ್ಯವಾದಗಳು. ಮಾಧ್ಯಮಗಳೂ ಈಗ ಎಚ್ಚೆತ್ತುಕೊಂಡಿವೆ. ಇದು ನಮ್ಮ ಯಶಸ್ಸಲ್ಲವೇ?” ಎಂದು ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.

“ಬಿಜೆಪಿ ತನ್ನ ಭರವಸೆಯನ್ನು ಎಂದಿಗೂ ಈಡೇರಿಸುವುದಿಲ್ಲ. ಆದರೆ, ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ. ನೀವು 10 ಲಕ್ಷ ಯಾವಾಗ ಕೊಡುತ್ತೀರಿ?” ಎಂದು ನಿರ್ಭಯವಾಗಿ ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ನಿಮ್ಮ ಮುಂದೆ ಉತ್ತರಿಸಿಲ್ಲವೇ?” ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ10 ಲಕ್ಷ ಯುವಕರಿಗೆ ಉದ್ಯೋಗ; ತೇಜಸ್ವಿ ಯಾದವ್ ನೀಡಿದ ಭರವಸೆ ಬಗ್ಗೆ ನಿತೀಶ್ ಹೇಳಿದ್ದೇನು?

ನಮ್ಮನ್ನು ಪ್ರಶ್ನಿಸುತ್ತಿರುವ ರೀತಿಯಲ್ಲೇ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ ಭರವಸೆ ನೀಡಿದ 2 ಕೋಟಿ ಉದ್ಯೋಗಗಳ ಭರವಸೆ ಏನಾಯಿತು? ಎಂದು ಬಿಜೆಪಿ ನಾಯಕರನ್ನು ಕೇಳಿ. ಅವರು ಸುಮಾರು 2 ವರ್ಷಗಳ ಬಿಹಾರದಲ್ಲಿ ಕಾಲ ಅಧಿಕಾರದಲ್ಲಿದ್ದರು. ಬಿಜೆಪಿಯವರು ಭರವಸೆ ನೀಡಿದ 19 ಲಕ್ಷ ಉದ್ಯೋಗಗಳಲ್ಲಿ 19ನ್ನಾದರೂ ನೀಡಿದೆಯೇ? ಎಂದು ತೇಜಸ್ವಿ ಯಾದವ್ ಕೇಳಿದ್ದಾರೆ.

ತೇಜಸ್ವಿ ಯಾದವ್ ಅವರ 10 ಲಕ್ಷ ಉದ್ಯೋಗಗಳ ಭರವಸೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, “ನಾವು ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆ ಭರವಸೆಯನ್ನು ಖಂಡಿತವಾಗಿಯೂ ಈಡೇರಿಸಲು ಪ್ರಯತ್ನಿಸುತ್ತೇವೆ” ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದರು. ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ 2 ದಿನಗಳ ಹಿಂದಷ್ಟೇ ವಿರೋಧ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಹೊಸ ಸರ್ಕಾರ ರಚಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!