AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasvi surya: ವಿಮಾನದ ಎಮೆರ್ಜೆನ್ಸಿ ಎಕ್ಸಿಟ್​ ಓಪನ್ ಮಾಡಿದ ಸಂಸದ ತೇಜಸ್ವಿ ಸೂರ್ಯ, ಇಂಡಿಗೋ ವಿಮಾನ 2 ತಾಸು ತಡ

ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರು ಡಿಸೆಂಬರ್ 10, 2022ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನವನ್ನು ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ.

Tejasvi surya: ವಿಮಾನದ ಎಮೆರ್ಜೆನ್ಸಿ ಎಕ್ಸಿಟ್​ ಓಪನ್ ಮಾಡಿದ ಸಂಸದ ತೇಜಸ್ವಿ ಸೂರ್ಯ, ಇಂಡಿಗೋ ವಿಮಾನ 2 ತಾಸು ತಡ
Tejasvi suryaImage Credit source: google image
TV9 Web
| Edited By: |

Updated on:Jan 17, 2023 | 3:42 PM

Share

ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ (Tejasvi surya) ಅವರು ಡಿಸೆಂಬರ್ 10, 2022ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನವನ್ನು ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಈ ಪ್ರಕರಣ ತಡವಾಗಿ ಬೆಳಿಕಿಗೆ ಬಂದಿದೆ. ಇದರಿಂದ ವಿಮಾನಯಾನ 2 ತಾಸು ತಡವಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.   ಈ ಬಗ್ಗೆ ವಿಮಾನಯಾನ ಸಂಸ್ಥೆ ಇಂಡಿಗೋ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಲು ನಿರಾಕರಿಸಿದೆ.

ತಿರುವನಂತಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ತುರ್ತು ದ್ವಾರ ತೆರೆದು ಆತಂಕ ಸೃಷ್ಟಿಸಿದ್ದಾರೆ. ಇದು ಪ್ರಯಾಣಿಕರಲ್ಲಿ ತೀವ್ರ ಭಯ ಮತ್ತು ಆತಂಕ ಉಂಟುಮಾಡಿತು. ಈ ಘಟನೆಯು ಕಳೆದ ವರ್ಷ ಡಿಸೆಂಬರ್ 10ರಂದೇ ಸಂಭವಿಸಿದೆ ಎಂದು ವರದಿಯಾಗಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈಗ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

ಪ್ರಯಾಣಿಕರು ಇಂಡಿಗೋ 6E ವಿಮಾನದಲ್ಲಿ (6E-7339) ಪ್ರಯಾಣಿಸುತ್ತಿದ್ದರು. ಅದು ಚೆನ್ನೈನಿಂದ ಟೇಕ್ ಆಫ್ ಆಗಿತ್ತು. ತಿರುವನಂತಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತೇಜಸ್ವಿ ಸೂರ್ಯ ತುರ್ತು ಬಾಗಿಲು ತೆರೆದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಭಯ ಮೂಡಿಸಿದ್ದರು. ಅದಾದ ಒಂದು ತಿಂಗಳ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಜಿಡಿಸಿಎ) ಈ ಬಗ್ಗೆ ತನಿಖೆಗೆ ಆದೇಶಿಸಿದೆ.

“ಡಿಸೆಂಬರ್ 10 ರಂದು, ಇಂಡಿಗೋ 6E ಫ್ಲೈಟ್ 6E-7339 ಚೆನ್ನೈನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಭಯವನ್ನುಂಟುಮಾಡುವ ಮೂಲಕ ಪ್ರಯಾಣಿಕರೊಬ್ಬರು ತುರ್ತು ಬಾಗಿಲು ತೆರೆದಿದ್ದರು. DGCA ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ” ಎಂದು DGCA ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 17 January 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!