Tejasvi surya: ವಿಮಾನದ ಎಮೆರ್ಜೆನ್ಸಿ ಎಕ್ಸಿಟ್​ ಓಪನ್ ಮಾಡಿದ ಸಂಸದ ತೇಜಸ್ವಿ ಸೂರ್ಯ, ಇಂಡಿಗೋ ವಿಮಾನ 2 ತಾಸು ತಡ

ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರು ಡಿಸೆಂಬರ್ 10, 2022ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನವನ್ನು ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ.

Tejasvi surya: ವಿಮಾನದ ಎಮೆರ್ಜೆನ್ಸಿ ಎಕ್ಸಿಟ್​ ಓಪನ್ ಮಾಡಿದ ಸಂಸದ ತೇಜಸ್ವಿ ಸೂರ್ಯ, ಇಂಡಿಗೋ ವಿಮಾನ 2 ತಾಸು ತಡ
Tejasvi suryaImage Credit source: google image
Follow us
| Updated By: Digi Tech Desk

Updated on:Jan 17, 2023 | 3:42 PM

ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ (Tejasvi surya) ಅವರು ಡಿಸೆಂಬರ್ 10, 2022ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನವನ್ನು ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಈ ಪ್ರಕರಣ ತಡವಾಗಿ ಬೆಳಿಕಿಗೆ ಬಂದಿದೆ. ಇದರಿಂದ ವಿಮಾನಯಾನ 2 ತಾಸು ತಡವಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.   ಈ ಬಗ್ಗೆ ವಿಮಾನಯಾನ ಸಂಸ್ಥೆ ಇಂಡಿಗೋ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಲು ನಿರಾಕರಿಸಿದೆ.

ತಿರುವನಂತಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ತುರ್ತು ದ್ವಾರ ತೆರೆದು ಆತಂಕ ಸೃಷ್ಟಿಸಿದ್ದಾರೆ. ಇದು ಪ್ರಯಾಣಿಕರಲ್ಲಿ ತೀವ್ರ ಭಯ ಮತ್ತು ಆತಂಕ ಉಂಟುಮಾಡಿತು. ಈ ಘಟನೆಯು ಕಳೆದ ವರ್ಷ ಡಿಸೆಂಬರ್ 10ರಂದೇ ಸಂಭವಿಸಿದೆ ಎಂದು ವರದಿಯಾಗಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈಗ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

ಪ್ರಯಾಣಿಕರು ಇಂಡಿಗೋ 6E ವಿಮಾನದಲ್ಲಿ (6E-7339) ಪ್ರಯಾಣಿಸುತ್ತಿದ್ದರು. ಅದು ಚೆನ್ನೈನಿಂದ ಟೇಕ್ ಆಫ್ ಆಗಿತ್ತು. ತಿರುವನಂತಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತೇಜಸ್ವಿ ಸೂರ್ಯ ತುರ್ತು ಬಾಗಿಲು ತೆರೆದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಭಯ ಮೂಡಿಸಿದ್ದರು. ಅದಾದ ಒಂದು ತಿಂಗಳ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಜಿಡಿಸಿಎ) ಈ ಬಗ್ಗೆ ತನಿಖೆಗೆ ಆದೇಶಿಸಿದೆ.

“ಡಿಸೆಂಬರ್ 10 ರಂದು, ಇಂಡಿಗೋ 6E ಫ್ಲೈಟ್ 6E-7339 ಚೆನ್ನೈನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಭಯವನ್ನುಂಟುಮಾಡುವ ಮೂಲಕ ಪ್ರಯಾಣಿಕರೊಬ್ಬರು ತುರ್ತು ಬಾಗಿಲು ತೆರೆದಿದ್ದರು. DGCA ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ” ಎಂದು DGCA ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 17 January 23