AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ, ಬಂಗಾರದ ಅಕ್ರಮ ಸಾಗಾಟಕ್ಕೆ ವಿನ್ಯಾಗೊಳಿಸಲಾದ ಬಟ್ಟೆ, ಸಿಕ್ಕ ಚಿನ್ನ, ದುಡ್ಡು ಎಷ್ಟು ಗೊತ್ತೇ?

ಬಟ್ಟೆಯೊಳಗೆ 20 ಲಕ್ಷ ರೂ. ನಗದು ಹಾಗೂ 275 ಗ್ರಾಂ ಬಂಗಾರವನ್ನಿಟ್ಟುಕೊಂಡು ತೆರಳುತ್ತಿದ್ದ ವ್ಯಕ್ತಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ಆಂಧ್ರಪ್ರದೇಶದ ಜಗ್ಗಯ್ಯಪೇಟ ನಿವಾಸಿ ಎಂದು ಗುರುತಿಸಲಾಗಿದ್ದು, ಮೆಡಿಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಣ, ಬಂಗಾರದ ಅಕ್ರಮ ಸಾಗಾಟಕ್ಕೆ ವಿನ್ಯಾಗೊಳಿಸಲಾದ ಬಟ್ಟೆ, ಸಿಕ್ಕ ಚಿನ್ನ, ದುಡ್ಡು ಎಷ್ಟು ಗೊತ್ತೇ?
ನಯನಾ ರಾಜೀವ್
|

Updated on: May 03, 2024 | 8:38 AM

Share

ಅಕ್ರಮ ಹಣ ಸಾಗಾಟಕ್ಕೆಂದೇ ಈತ ಹೊಸ ವಿನ್ಯಾಸದ ಬಟ್ಟೆಯನ್ನು ಸಿದ್ಧಪಡಿಸಿದ್ದ 20 ಲಕ್ಷ ರೂ. ಗೂ 275 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡು ಹೋಗುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಪೊಲೀಸರು ಗುರುವಾರ ಆಂಧ್ರಪ್ರದೇಶದ ಖಮ್ಮಂ ಮೂಲದ ವ್ಯಕ್ತಿಯೊಬ್ಬರಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಆ ವ್ಯಕ್ತಿಯನ್ನು ಕೂಲಂಕಷವಾಗಿ ವಿಚಾರಣೆಗೊಳಪಡಿಸಿದ ನಂತರ, ಪೊಲೀಸರು 20 ಲಕ್ಷ ನಗದು ಮತ್ತು 275 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡರು, ವಿಶೇಷವಾಗಿ ಕಸ್ಟಮೈಸ್ ಮಾಡಿದ ಒಳಗಿನ ಉಡುಪನ್ನು ಅವನ ಬಟ್ಟೆಯ ಕೆಳಗೆ ಇಡಲಾಗಿತ್ತು. ಶಂಕಿತ ಆರೋಪಿಯನ್ನು ಆಂಧ್ರಪ್ರದೇಶದ ಜಗ್ಗಯ್ಯಪೇಟ ನಿವಾಸಿ ಎಂದು ಗುರುತಿಸಲಾಗಿದ್ದು, ಮೆಡಿಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ನಂತರ, ಮದುವೆಯಿರುವ ಹಿನ್ನೆಲೆಯಲ್ಲಿ ಅದನ್ನು ಸಂಗ್ರಹಿಸಿಟ್ಟಿದ್ದೇನೆ ಬೇರೆ ಉದ್ದೇಶವೇನೂ ಇಲ್ಲ ಎಂದು ಅವರು ಹೇಳಿದ್ದಾರೆ. ಆದರೆ, ಬಚ್ಚಿಟ್ಟ ಹಣ ಮತ್ತು ಚಿನ್ನದ ಪ್ರಮಾಣವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಹೆಚ್ಚಿನ ತನಿಖೆಗೆ ಮುಂದಾಗಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.76 ಕೋಟಿ ರೂ. ಮೌಲ್ಯದ 3 ಕೆಜಿ ಅಕ್ರಮ ಚಿನ್ನ ವಶ

ವಶಪಡಿಸಿಕೊಂಡ ನಗದು ಮತ್ತು ಚಿನ್ನವನ್ನು ಹೆಚ್ಚಿನ ಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯು ಪ್ರಯಾಣಿಕರೊಬ್ಬರ ಬಳಿ ಅವಚರ ಬಟ್ಟೆ, ನ್ಯೂಡಲ್ಸ್​ ಪ್ಯಾಕೇಟ್​ನಲ್ಲಿದ್ದ ವಜ್ರಗಳನ್ನು ವಶಪಡಿಸಿಕೊಂಡಿದ್ದರು.

ಏಪ್ರಿಲ್ 22 ರಂದು 4.44 ಕೋಟಿ ಮೌಲ್ಯದ 6.815 ಕೆಜಿಗೂ ಹೆಚ್ಚು ಚಿನ್ನ ಮತ್ತು 2.02 ಕೋಟಿ ಮೌಲ್ಯದ ವಜ್ರಗಳನ್ನು ವಶಪಡಿಸಿಕೊಂಡು ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿತ್ತು. ಮುಂಬೈನಿಂದ ಬ್ಯಾಂಕಾಕ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಹಿಡಿಯಲಾಯಿತು ಮತ್ತು ತನ್ನ ಟ್ರಾಲಿ ಬ್ಯಾಗ್‌ನಲ್ಲಿ ನೂಡಲ್ಸ್ ಪ್ಯಾಕೆಟ್‌ಗಳಲ್ಲಿ ಬಚ್ಚಿಟ್ಟು ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ