AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ, ಬಂಗಾರದ ಅಕ್ರಮ ಸಾಗಾಟಕ್ಕೆ ವಿನ್ಯಾಗೊಳಿಸಲಾದ ಬಟ್ಟೆ, ಸಿಕ್ಕ ಚಿನ್ನ, ದುಡ್ಡು ಎಷ್ಟು ಗೊತ್ತೇ?

ಬಟ್ಟೆಯೊಳಗೆ 20 ಲಕ್ಷ ರೂ. ನಗದು ಹಾಗೂ 275 ಗ್ರಾಂ ಬಂಗಾರವನ್ನಿಟ್ಟುಕೊಂಡು ತೆರಳುತ್ತಿದ್ದ ವ್ಯಕ್ತಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ಆಂಧ್ರಪ್ರದೇಶದ ಜಗ್ಗಯ್ಯಪೇಟ ನಿವಾಸಿ ಎಂದು ಗುರುತಿಸಲಾಗಿದ್ದು, ಮೆಡಿಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಣ, ಬಂಗಾರದ ಅಕ್ರಮ ಸಾಗಾಟಕ್ಕೆ ವಿನ್ಯಾಗೊಳಿಸಲಾದ ಬಟ್ಟೆ, ಸಿಕ್ಕ ಚಿನ್ನ, ದುಡ್ಡು ಎಷ್ಟು ಗೊತ್ತೇ?
ನಯನಾ ರಾಜೀವ್
|

Updated on: May 03, 2024 | 8:38 AM

Share

ಅಕ್ರಮ ಹಣ ಸಾಗಾಟಕ್ಕೆಂದೇ ಈತ ಹೊಸ ವಿನ್ಯಾಸದ ಬಟ್ಟೆಯನ್ನು ಸಿದ್ಧಪಡಿಸಿದ್ದ 20 ಲಕ್ಷ ರೂ. ಗೂ 275 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡು ಹೋಗುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಪೊಲೀಸರು ಗುರುವಾರ ಆಂಧ್ರಪ್ರದೇಶದ ಖಮ್ಮಂ ಮೂಲದ ವ್ಯಕ್ತಿಯೊಬ್ಬರಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಆ ವ್ಯಕ್ತಿಯನ್ನು ಕೂಲಂಕಷವಾಗಿ ವಿಚಾರಣೆಗೊಳಪಡಿಸಿದ ನಂತರ, ಪೊಲೀಸರು 20 ಲಕ್ಷ ನಗದು ಮತ್ತು 275 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡರು, ವಿಶೇಷವಾಗಿ ಕಸ್ಟಮೈಸ್ ಮಾಡಿದ ಒಳಗಿನ ಉಡುಪನ್ನು ಅವನ ಬಟ್ಟೆಯ ಕೆಳಗೆ ಇಡಲಾಗಿತ್ತು. ಶಂಕಿತ ಆರೋಪಿಯನ್ನು ಆಂಧ್ರಪ್ರದೇಶದ ಜಗ್ಗಯ್ಯಪೇಟ ನಿವಾಸಿ ಎಂದು ಗುರುತಿಸಲಾಗಿದ್ದು, ಮೆಡಿಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ನಂತರ, ಮದುವೆಯಿರುವ ಹಿನ್ನೆಲೆಯಲ್ಲಿ ಅದನ್ನು ಸಂಗ್ರಹಿಸಿಟ್ಟಿದ್ದೇನೆ ಬೇರೆ ಉದ್ದೇಶವೇನೂ ಇಲ್ಲ ಎಂದು ಅವರು ಹೇಳಿದ್ದಾರೆ. ಆದರೆ, ಬಚ್ಚಿಟ್ಟ ಹಣ ಮತ್ತು ಚಿನ್ನದ ಪ್ರಮಾಣವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಹೆಚ್ಚಿನ ತನಿಖೆಗೆ ಮುಂದಾಗಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.76 ಕೋಟಿ ರೂ. ಮೌಲ್ಯದ 3 ಕೆಜಿ ಅಕ್ರಮ ಚಿನ್ನ ವಶ

ವಶಪಡಿಸಿಕೊಂಡ ನಗದು ಮತ್ತು ಚಿನ್ನವನ್ನು ಹೆಚ್ಚಿನ ಪರಿಶೀಲನೆಗಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯು ಪ್ರಯಾಣಿಕರೊಬ್ಬರ ಬಳಿ ಅವಚರ ಬಟ್ಟೆ, ನ್ಯೂಡಲ್ಸ್​ ಪ್ಯಾಕೇಟ್​ನಲ್ಲಿದ್ದ ವಜ್ರಗಳನ್ನು ವಶಪಡಿಸಿಕೊಂಡಿದ್ದರು.

ಏಪ್ರಿಲ್ 22 ರಂದು 4.44 ಕೋಟಿ ಮೌಲ್ಯದ 6.815 ಕೆಜಿಗೂ ಹೆಚ್ಚು ಚಿನ್ನ ಮತ್ತು 2.02 ಕೋಟಿ ಮೌಲ್ಯದ ವಜ್ರಗಳನ್ನು ವಶಪಡಿಸಿಕೊಂಡು ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿತ್ತು. ಮುಂಬೈನಿಂದ ಬ್ಯಾಂಕಾಕ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಹಿಡಿಯಲಾಯಿತು ಮತ್ತು ತನ್ನ ಟ್ರಾಲಿ ಬ್ಯಾಗ್‌ನಲ್ಲಿ ನೂಡಲ್ಸ್ ಪ್ಯಾಕೆಟ್‌ಗಳಲ್ಲಿ ಬಚ್ಚಿಟ್ಟು ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ