AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ
ಮಂಗ
ನಯನಾ ರಾಜೀವ್
|

Updated on: Apr 04, 2024 | 11:47 AM

Share

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ಟ್ಯಾಂಕಿನ ಮುಚ್ಚಳ ತೆರೆದಿದ್ದರಿಂದ ಮಂಗಗಳು ಒಳಗೆ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟ್ಯಾಂಕ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ ನಂತರ ಪುರಸಭೆಯ ಸಿಬ್ಬಂದಿ ಸತ್ತ ಮಂಗಗಳನ್ನು ಟ್ಯಾಂಕ್‌ನಿಂದ ತೆಗೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತೆಲಂಗಾಣ ಮಾಜಿ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಟಿ ರಾಮರಾವ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರೇವಂತ್ ರೆಡ್ಡಿ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕಿಂತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ತೆಲಂಗಾಣ ಮುನ್ಸಿಪಲ್ ಇಲಾಖೆಯಲ್ಲಿ ಎಂತಹ ನಾಚಿಕೆಗೇಡಿನ ಸ್ಥಿತಿ ನಿರ್ಮಾಣವಾಗಿದೆ. ಅನುಸರಿಸಬೇಕಾದ ಪ್ರಮಾಣಿತ ಪ್ರೋಟೋಕಾಲ್‌ಗಳಾದ ನೀರಿನ ಟ್ಯಾಂಕ್​ ಪದೇ ಪದೇ ಸ್ವಚ್ಛಗೊಳಿಸುವಿಕೆ ಮತ್ತು ದಿನನಿತ್ಯದ ನಿರ್ವಹಣೆಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ