ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ
ಮಂಗ

Updated on: Apr 04, 2024 | 11:47 AM

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆಯಾಗಿದೆ. ನಂದಿಕೊಂಡ ಪುರಸಭೆಯ ವಾರ್ಡ್ ಸಂಖ್ಯೆ 1 ರ ನೀರಿನ ಟ್ಯಾಂಕ್‌ನಲ್ಲಿ ಮಂಗಗಳ ಶವಗಳು ತೇಲುತ್ತಿರುವುದು ಕಂಡುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನೀರಿನ ಟ್ಯಾಂಕಿನ ಮುಚ್ಚಳ ತೆರೆದಿದ್ದರಿಂದ ಮಂಗಗಳು ಒಳಗೆ ಸಿಲುಕಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟ್ಯಾಂಕ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ ನಂತರ ಪುರಸಭೆಯ ಸಿಬ್ಬಂದಿ ಸತ್ತ ಮಂಗಗಳನ್ನು ಟ್ಯಾಂಕ್‌ನಿಂದ ತೆಗೆದಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತೆಲಂಗಾಣ ಮಾಜಿ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಟಿ ರಾಮರಾವ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರೇವಂತ್ ರೆಡ್ಡಿ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕಿಂತ ರಾಜಕೀಯಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ತೆಲಂಗಾಣ ಮುನ್ಸಿಪಲ್ ಇಲಾಖೆಯಲ್ಲಿ ಎಂತಹ ನಾಚಿಕೆಗೇಡಿನ ಸ್ಥಿತಿ ನಿರ್ಮಾಣವಾಗಿದೆ. ಅನುಸರಿಸಬೇಕಾದ ಪ್ರಮಾಣಿತ ಪ್ರೋಟೋಕಾಲ್‌ಗಳಾದ ನೀರಿನ ಟ್ಯಾಂಕ್​ ಪದೇ ಪದೇ ಸ್ವಚ್ಛಗೊಳಿಸುವಿಕೆ ಮತ್ತು ದಿನನಿತ್ಯದ ನಿರ್ವಹಣೆಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us