AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಬಿಆರ್​ಎಸ್​ ಟಿಕೆಟ್ ನೀಡಲಿಲ್ಲ ಎಂದು ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಉಪ ಮುಖ್ಯಮಂತ್ರಿ

ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ(BRS)ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಘಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ತೆಲಂಗಾಣ ಚುನಾವಣೆ: ಬಿಆರ್​ಎಸ್​ ಟಿಕೆಟ್ ನೀಡಲಿಲ್ಲ ಎಂದು ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಉಪ ಮುಖ್ಯಮಂತ್ರಿ
ರಾಜಯ್ಯImage Credit source: ABP Live
ನಯನಾ ರಾಜೀವ್
|

Updated on:Aug 23, 2023 | 12:34 PM

Share

ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ(BRS)ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಘಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲವಾದರೂ, ಮುಂಬರುವ ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲೇ ಬಿಆರ್‌ಎಸ್ ಪಕ್ಷವು ಆಗಸ್ಟ್ 21 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲೈಂಗಿಕ ಕಿರುಕುಳದ ಕಾರಣ ಟಿಕೆಟ್ ರದ್ದು

ವರದಿಗಳ ಪ್ರಕಾರ, ತಾಟಿಕೊಂಡ ರಾಜಯ್ಯ ಅವರ ಸ್ವಂತ ಪಕ್ಷದ ಗ್ರಾಮ ಸರಪಂಚರಿಂದ ಲೈಂಗಿಕ ಕಿರುಕುಳದ ಆರೋಪವಿದೆ. ಈ ಆರೋಪಗಳಿಂದಾಗಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದೆ. ಕದಿಯಂ ಶ್ರೀಹರಿಯವರಿಗೆ ಪಕ್ಷವು ಘನಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಮತ್ತಷ್ಟು ಓದಿ: ತೆಲಂಗಾಣದಲ್ಲಿ ಹಿಂದುತ್ವದ ಮೇಲೆ ಚುನಾವಣೆ: ಬಿಜೆಪಿ ಶಾಸಕ ಯತ್ನಾಳ್

ಸಿಎಂ ಕೆಸಿಆರ್ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ

ಸದ್ಯ ತೆಲಂಗಾಣದಲ್ಲಿ ಬಿಆರ್ ಎಸ್ ಪಕ್ಷ ಅಧಿಕಾರದಲ್ಲಿದೆ. ಸಿಎಂ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಮುಂಬರುವ ಚುನಾವಣೆಯಲ್ಲಿ 95 ರಿಂದ 105 ಸ್ಥಾನಗಳನ್ನು ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಆರ್ ಎಸ್ ಪಟ್ಟಿಯ ಪ್ರಕಾರ ಸಿಎಂ ಕೆಸಿಆರ್ ಗಜ್ವೆಲ್ ಮತ್ತು ಕಾಮರೆಡ್ಡಿಯಿಂದ ಸ್ಪರ್ಧಿಸಲಿದ್ದಾರೆ.

ರಾಜಯ್ಯ ಅವರು ಅಳುತ್ತಿರುವ ವಿಡಿಯೋ

ಸೋಮವಾರ (ಆ.21) ಸುದ್ದಿಗಾರರೊಂದಿಗೆ ಮಾತನಾಡಿದ ಬಿಆರ್ ಎಸ್ ಮುಖ್ಯಸ್ಥ ಕೆ.ಕೆ. ಚಂದ್ರಶೇಖರ್ ರಾವ್ ಅವರು ನಮ್ಮ ಅಂದಾಜಿನ ಪ್ರಕಾರ ನಾವು 95 ರಿಂದ 105 ಸ್ಥಾನಗಳನ್ನು ಗೆಲ್ಲುತ್ತೇವೆ. ಕೇವಲ ಶಾಸಕರು ಮಾತ್ರವಲ್ಲ, ಸಂಸದ ಸ್ಥಾನಗಳೂ ಸಹ. ನಾವು 17 (ಲೋಕಸಭಾ) ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಅಸಾದುದ್ದೀನ್ ಓವೈಸಿಯವರ ಪಕ್ಷವಾದ ಎಐಎಂಐಎಂ ಜೊತೆ ನಮ್ಮ ಸ್ನೇಹ ಮುಂದುವರಿಯಲಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:31 pm, Wed, 23 August 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ