Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಚುನಾವಣೆ: ಬಿಆರ್​ಎಸ್​ ಟಿಕೆಟ್ ನೀಡಲಿಲ್ಲ ಎಂದು ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಉಪ ಮುಖ್ಯಮಂತ್ರಿ

ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ(BRS)ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಘಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ತೆಲಂಗಾಣ ಚುನಾವಣೆ: ಬಿಆರ್​ಎಸ್​ ಟಿಕೆಟ್ ನೀಡಲಿಲ್ಲ ಎಂದು ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಉಪ ಮುಖ್ಯಮಂತ್ರಿ
ರಾಜಯ್ಯImage Credit source: ABP Live
Follow us
ನಯನಾ ರಾಜೀವ್
|

Updated on:Aug 23, 2023 | 12:34 PM

ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ(BRS)ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಘಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲವಾದರೂ, ಮುಂಬರುವ ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲೇ ಬಿಆರ್‌ಎಸ್ ಪಕ್ಷವು ಆಗಸ್ಟ್ 21 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲೈಂಗಿಕ ಕಿರುಕುಳದ ಕಾರಣ ಟಿಕೆಟ್ ರದ್ದು

ವರದಿಗಳ ಪ್ರಕಾರ, ತಾಟಿಕೊಂಡ ರಾಜಯ್ಯ ಅವರ ಸ್ವಂತ ಪಕ್ಷದ ಗ್ರಾಮ ಸರಪಂಚರಿಂದ ಲೈಂಗಿಕ ಕಿರುಕುಳದ ಆರೋಪವಿದೆ. ಈ ಆರೋಪಗಳಿಂದಾಗಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದೆ. ಕದಿಯಂ ಶ್ರೀಹರಿಯವರಿಗೆ ಪಕ್ಷವು ಘನಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ಮತ್ತಷ್ಟು ಓದಿ: ತೆಲಂಗಾಣದಲ್ಲಿ ಹಿಂದುತ್ವದ ಮೇಲೆ ಚುನಾವಣೆ: ಬಿಜೆಪಿ ಶಾಸಕ ಯತ್ನಾಳ್

ಸಿಎಂ ಕೆಸಿಆರ್ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ

ಸದ್ಯ ತೆಲಂಗಾಣದಲ್ಲಿ ಬಿಆರ್ ಎಸ್ ಪಕ್ಷ ಅಧಿಕಾರದಲ್ಲಿದೆ. ಸಿಎಂ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಮುಂಬರುವ ಚುನಾವಣೆಯಲ್ಲಿ 95 ರಿಂದ 105 ಸ್ಥಾನಗಳನ್ನು ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಆರ್ ಎಸ್ ಪಟ್ಟಿಯ ಪ್ರಕಾರ ಸಿಎಂ ಕೆಸಿಆರ್ ಗಜ್ವೆಲ್ ಮತ್ತು ಕಾಮರೆಡ್ಡಿಯಿಂದ ಸ್ಪರ್ಧಿಸಲಿದ್ದಾರೆ.

ರಾಜಯ್ಯ ಅವರು ಅಳುತ್ತಿರುವ ವಿಡಿಯೋ

ಸೋಮವಾರ (ಆ.21) ಸುದ್ದಿಗಾರರೊಂದಿಗೆ ಮಾತನಾಡಿದ ಬಿಆರ್ ಎಸ್ ಮುಖ್ಯಸ್ಥ ಕೆ.ಕೆ. ಚಂದ್ರಶೇಖರ್ ರಾವ್ ಅವರು ನಮ್ಮ ಅಂದಾಜಿನ ಪ್ರಕಾರ ನಾವು 95 ರಿಂದ 105 ಸ್ಥಾನಗಳನ್ನು ಗೆಲ್ಲುತ್ತೇವೆ. ಕೇವಲ ಶಾಸಕರು ಮಾತ್ರವಲ್ಲ, ಸಂಸದ ಸ್ಥಾನಗಳೂ ಸಹ. ನಾವು 17 (ಲೋಕಸಭಾ) ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಅಸಾದುದ್ದೀನ್ ಓವೈಸಿಯವರ ಪಕ್ಷವಾದ ಎಐಎಂಐಎಂ ಜೊತೆ ನಮ್ಮ ಸ್ನೇಹ ಮುಂದುವರಿಯಲಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:31 pm, Wed, 23 August 23

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!