AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ತೆರೆದ ವ್ಯಾನ್​ನಿಂದ ಮುಗ್ಗರಿಸಿ ಬಿದ್ದ ಸಚಿವ ಕೆಟಿಆರ್, ಅದೃಷ್ಟ ವಶಾತ್ ಅಪಾಯದಿಂದ ಪಾರು

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೆಯೇ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಕಾರ್ಯಾಧ್ಯಕ್ಷ ಹಾಗೂ ಸಚಿವರಾಗಿರುವ ಕೆಟಿ ರಾಮರಾವ್​ ರೋಡ್​ ಶೋ ವೇಳೆ ತೆರೆದ ವಾಹನದಿಂದ ಮುಗ್ಗರಿಸಿ ಬಿದ್ದಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ತೆರೆದ ವ್ಯಾನ್​ನಿಂದ ಮುಗ್ಗರಿಸಿ ಬಿದ್ದ ಸಚಿವ ಕೆಟಿಆರ್, ಅದೃಷ್ಟ ವಶಾತ್ ಅಪಾಯದಿಂದ ಪಾರು
ಕೆಟಿಆರ್​Image Credit source: Newsdrum
ನಯನಾ ರಾಜೀವ್
|

Updated on:Nov 10, 2023 | 9:07 AM

Share

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೆಯೇ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಕಾರ್ಯಾಧ್ಯಕ್ಷ ಹಾಗೂ ಸಚಿವರಾಗಿರುವ ಕೆಟಿ ರಾಮರಾವ್​ ರೋಡ್​ ಶೋ ವೇಳೆ ತೆರೆದ ವಾಹನದಿಂದ ಮುಗ್ಗರಿಸಿ ಬಿದ್ದಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಗುರುವಾರ ನಿಜಾಮಾಬಾದ್ ಜಿಲ್ಲೆಯ ಅರ್ಮುರ್ ಪಟ್ಟಣದಲ್ಲಿ ರೋಡ್​ ಶೋ ಮಾಡುತ್ತಿದ್ದ ಸಮಯದಲ್ಲಿ ಕೆಟಿಆರ್​ ಇದ್ದ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದ ಕಾರಣ, ಸಚಿವರು ವಾಹನದಿಂದ ಮುಗ್ಗುರಿಸಿದರು. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಬಿಆರ್​ಎಸ್​ ರಾಜ್ಯಸಭಾ ಸಂಸದ ಕೆಆರ್​ ಸುರೇಶ್​ ರೆಡ್ಡಿ ಕೂಡ ವ್ಯಾನ್​ನಲ್ಲಿ ನಿಂತಿದ್ದರು, ಉಭಯ ನಾಯಕರು ಪಕ್ಷ ಅಭ್ಯರ್ಥಿ ಹಾಗೂ ಶಾಸಕ ಜೀವನ್ ರೆಡ್ಡಿ ಅವರೊಂದಿಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದರು.

ಮತ್ತಷ್ಟು ಓದಿ: ತೆಲಂಗಾಣ ಚುನಾವಣಾ ಪ್ರಚಾರದಲ್ಲೂ ಗಮನ ಸೆಳೆದ MLA ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ

ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಾನ್​ನ ರೇಲಿಂಗ್ ಮುರಿದು ಬಿದ್ದ ನಂತರ ಮಧ್ಯದಲ್ಲಿ ನಿಂತಿದ್ದ ರಾಮ್​ರಾವ್ ಮುಂದೆ ವಾಹನದ ಮೇಲೆ ಹಾಕಿದ್ದ ಸ್ಪೀಕರ್ ಮೇಲೆ ಬಿದ್ದಿದ್ದಾರೆ.

ಶಾಸಕರು, ಸಂಸದರು ವಾಹನದಿಂದ ಬಿದ್ದಿದ್ದಾರೆ ಆದರೆ ವ್ಯಾನ್​ನ ಜತೆಯೇ ಬರುತ್ತಿದ್ದ ಪೊಲೀಸರು ಅವರನ್ನು ಹಿಡಿದುಕೊಂಡಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ರೆಡ್ಡಿ ಹಾಗೂ ರಾಮರಾವ್​ ಅವರನ್ನು ತಕ್ಷಣವೇ ಕಾರಿನಲ್ಲಿ ಕರೆದೊಯ್ಯಲಾಯಿತು.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ , ವ್ಯಾನ್​ನ ಮುಂದಿದ್ದ ವಾಹನದ ಚಾಲಕ ತನ್ನ ಮುಂದೆ ಯಾರೋ ಅಡ್ಡ ಬಂದಿದ್ದಕ್ಕಾಗಿ ಬ್ರೇಕ್ ಹಾಕಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ, ಬಳಿಕ ಜೀವನ್​ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕೆಟಿಆರ್​ ಎಂದೇ ಖ್ಯಾತರಾಗಿರುವ ರಾಮರಾವ್ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಅವರು ಕ್ಷೇಮವಾಗಿದ್ದಾರೆ. ಬಳಿಕ ಅವರು ಕೊಡಂಗಲ್​ಗೆ ರೋಡ್​ ಶೋನಲ್ಲಿ ಭಾಗವಹಿಸಲು ತೆರಳಿದ್ದರು. ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:00 am, Fri, 10 November 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್