AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ತೆರೆದ ವ್ಯಾನ್​ನಿಂದ ಮುಗ್ಗರಿಸಿ ಬಿದ್ದ ಸಚಿವ ಕೆಟಿಆರ್, ಅದೃಷ್ಟ ವಶಾತ್ ಅಪಾಯದಿಂದ ಪಾರು

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೆಯೇ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಕಾರ್ಯಾಧ್ಯಕ್ಷ ಹಾಗೂ ಸಚಿವರಾಗಿರುವ ಕೆಟಿ ರಾಮರಾವ್​ ರೋಡ್​ ಶೋ ವೇಳೆ ತೆರೆದ ವಾಹನದಿಂದ ಮುಗ್ಗರಿಸಿ ಬಿದ್ದಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ತೆರೆದ ವ್ಯಾನ್​ನಿಂದ ಮುಗ್ಗರಿಸಿ ಬಿದ್ದ ಸಚಿವ ಕೆಟಿಆರ್, ಅದೃಷ್ಟ ವಶಾತ್ ಅಪಾಯದಿಂದ ಪಾರು
ಕೆಟಿಆರ್​Image Credit source: Newsdrum
ನಯನಾ ರಾಜೀವ್
|

Updated on:Nov 10, 2023 | 9:07 AM

Share

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೆಯೇ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಕಾರ್ಯಾಧ್ಯಕ್ಷ ಹಾಗೂ ಸಚಿವರಾಗಿರುವ ಕೆಟಿ ರಾಮರಾವ್​ ರೋಡ್​ ಶೋ ವೇಳೆ ತೆರೆದ ವಾಹನದಿಂದ ಮುಗ್ಗರಿಸಿ ಬಿದ್ದಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಗುರುವಾರ ನಿಜಾಮಾಬಾದ್ ಜಿಲ್ಲೆಯ ಅರ್ಮುರ್ ಪಟ್ಟಣದಲ್ಲಿ ರೋಡ್​ ಶೋ ಮಾಡುತ್ತಿದ್ದ ಸಮಯದಲ್ಲಿ ಕೆಟಿಆರ್​ ಇದ್ದ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದ ಕಾರಣ, ಸಚಿವರು ವಾಹನದಿಂದ ಮುಗ್ಗುರಿಸಿದರು. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಬಿಆರ್​ಎಸ್​ ರಾಜ್ಯಸಭಾ ಸಂಸದ ಕೆಆರ್​ ಸುರೇಶ್​ ರೆಡ್ಡಿ ಕೂಡ ವ್ಯಾನ್​ನಲ್ಲಿ ನಿಂತಿದ್ದರು, ಉಭಯ ನಾಯಕರು ಪಕ್ಷ ಅಭ್ಯರ್ಥಿ ಹಾಗೂ ಶಾಸಕ ಜೀವನ್ ರೆಡ್ಡಿ ಅವರೊಂದಿಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದರು.

ಮತ್ತಷ್ಟು ಓದಿ: ತೆಲಂಗಾಣ ಚುನಾವಣಾ ಪ್ರಚಾರದಲ್ಲೂ ಗಮನ ಸೆಳೆದ MLA ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ

ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಾನ್​ನ ರೇಲಿಂಗ್ ಮುರಿದು ಬಿದ್ದ ನಂತರ ಮಧ್ಯದಲ್ಲಿ ನಿಂತಿದ್ದ ರಾಮ್​ರಾವ್ ಮುಂದೆ ವಾಹನದ ಮೇಲೆ ಹಾಕಿದ್ದ ಸ್ಪೀಕರ್ ಮೇಲೆ ಬಿದ್ದಿದ್ದಾರೆ.

ಶಾಸಕರು, ಸಂಸದರು ವಾಹನದಿಂದ ಬಿದ್ದಿದ್ದಾರೆ ಆದರೆ ವ್ಯಾನ್​ನ ಜತೆಯೇ ಬರುತ್ತಿದ್ದ ಪೊಲೀಸರು ಅವರನ್ನು ಹಿಡಿದುಕೊಂಡಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ರೆಡ್ಡಿ ಹಾಗೂ ರಾಮರಾವ್​ ಅವರನ್ನು ತಕ್ಷಣವೇ ಕಾರಿನಲ್ಲಿ ಕರೆದೊಯ್ಯಲಾಯಿತು.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ , ವ್ಯಾನ್​ನ ಮುಂದಿದ್ದ ವಾಹನದ ಚಾಲಕ ತನ್ನ ಮುಂದೆ ಯಾರೋ ಅಡ್ಡ ಬಂದಿದ್ದಕ್ಕಾಗಿ ಬ್ರೇಕ್ ಹಾಕಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ, ಬಳಿಕ ಜೀವನ್​ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕೆಟಿಆರ್​ ಎಂದೇ ಖ್ಯಾತರಾಗಿರುವ ರಾಮರಾವ್ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಅವರು ಕ್ಷೇಮವಾಗಿದ್ದಾರೆ. ಬಳಿಕ ಅವರು ಕೊಡಂಗಲ್​ಗೆ ರೋಡ್​ ಶೋನಲ್ಲಿ ಭಾಗವಹಿಸಲು ತೆರಳಿದ್ದರು. ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:00 am, Fri, 10 November 23

Follow Us
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!