AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ತೆರೆದ ವ್ಯಾನ್​ನಿಂದ ಮುಗ್ಗರಿಸಿ ಬಿದ್ದ ಸಚಿವ ಕೆಟಿಆರ್, ಅದೃಷ್ಟ ವಶಾತ್ ಅಪಾಯದಿಂದ ಪಾರು

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೆಯೇ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಕಾರ್ಯಾಧ್ಯಕ್ಷ ಹಾಗೂ ಸಚಿವರಾಗಿರುವ ಕೆಟಿ ರಾಮರಾವ್​ ರೋಡ್​ ಶೋ ವೇಳೆ ತೆರೆದ ವಾಹನದಿಂದ ಮುಗ್ಗರಿಸಿ ಬಿದ್ದಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ತೆಲಂಗಾಣ: ಚುನಾವಣಾ ಪ್ರಚಾರದ ವೇಳೆ ತೆರೆದ ವ್ಯಾನ್​ನಿಂದ ಮುಗ್ಗರಿಸಿ ಬಿದ್ದ ಸಚಿವ ಕೆಟಿಆರ್, ಅದೃಷ್ಟ ವಶಾತ್ ಅಪಾಯದಿಂದ ಪಾರು
ಕೆಟಿಆರ್​Image Credit source: Newsdrum
ನಯನಾ ರಾಜೀವ್
|

Updated on:Nov 10, 2023 | 9:07 AM

Share

ತೆಲಂಗಾಣ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೆಯೇ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಕಾರ್ಯಾಧ್ಯಕ್ಷ ಹಾಗೂ ಸಚಿವರಾಗಿರುವ ಕೆಟಿ ರಾಮರಾವ್​ ರೋಡ್​ ಶೋ ವೇಳೆ ತೆರೆದ ವಾಹನದಿಂದ ಮುಗ್ಗರಿಸಿ ಬಿದ್ದಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಗುರುವಾರ ನಿಜಾಮಾಬಾದ್ ಜಿಲ್ಲೆಯ ಅರ್ಮುರ್ ಪಟ್ಟಣದಲ್ಲಿ ರೋಡ್​ ಶೋ ಮಾಡುತ್ತಿದ್ದ ಸಮಯದಲ್ಲಿ ಕೆಟಿಆರ್​ ಇದ್ದ ವಾಹನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದ ಕಾರಣ, ಸಚಿವರು ವಾಹನದಿಂದ ಮುಗ್ಗುರಿಸಿದರು. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಬಿಆರ್​ಎಸ್​ ರಾಜ್ಯಸಭಾ ಸಂಸದ ಕೆಆರ್​ ಸುರೇಶ್​ ರೆಡ್ಡಿ ಕೂಡ ವ್ಯಾನ್​ನಲ್ಲಿ ನಿಂತಿದ್ದರು, ಉಭಯ ನಾಯಕರು ಪಕ್ಷ ಅಭ್ಯರ್ಥಿ ಹಾಗೂ ಶಾಸಕ ಜೀವನ್ ರೆಡ್ಡಿ ಅವರೊಂದಿಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದರು.

ಮತ್ತಷ್ಟು ಓದಿ: ತೆಲಂಗಾಣ ಚುನಾವಣಾ ಪ್ರಚಾರದಲ್ಲೂ ಗಮನ ಸೆಳೆದ MLA ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ

ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಾನ್​ನ ರೇಲಿಂಗ್ ಮುರಿದು ಬಿದ್ದ ನಂತರ ಮಧ್ಯದಲ್ಲಿ ನಿಂತಿದ್ದ ರಾಮ್​ರಾವ್ ಮುಂದೆ ವಾಹನದ ಮೇಲೆ ಹಾಕಿದ್ದ ಸ್ಪೀಕರ್ ಮೇಲೆ ಬಿದ್ದಿದ್ದಾರೆ.

ಶಾಸಕರು, ಸಂಸದರು ವಾಹನದಿಂದ ಬಿದ್ದಿದ್ದಾರೆ ಆದರೆ ವ್ಯಾನ್​ನ ಜತೆಯೇ ಬರುತ್ತಿದ್ದ ಪೊಲೀಸರು ಅವರನ್ನು ಹಿಡಿದುಕೊಂಡಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ರೆಡ್ಡಿ ಹಾಗೂ ರಾಮರಾವ್​ ಅವರನ್ನು ತಕ್ಷಣವೇ ಕಾರಿನಲ್ಲಿ ಕರೆದೊಯ್ಯಲಾಯಿತು.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ , ವ್ಯಾನ್​ನ ಮುಂದಿದ್ದ ವಾಹನದ ಚಾಲಕ ತನ್ನ ಮುಂದೆ ಯಾರೋ ಅಡ್ಡ ಬಂದಿದ್ದಕ್ಕಾಗಿ ಬ್ರೇಕ್ ಹಾಕಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ, ಬಳಿಕ ಜೀವನ್​ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕೆಟಿಆರ್​ ಎಂದೇ ಖ್ಯಾತರಾಗಿರುವ ರಾಮರಾವ್ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಅವರು ಕ್ಷೇಮವಾಗಿದ್ದಾರೆ. ಬಳಿಕ ಅವರು ಕೊಡಂಗಲ್​ಗೆ ರೋಡ್​ ಶೋನಲ್ಲಿ ಭಾಗವಹಿಸಲು ತೆರಳಿದ್ದರು. ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:00 am, Fri, 10 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!