AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ವಿಧಾನಸಭಾ ಚುನಾವಣೆ: ಕ್ಷೇತ್ರ ಉಸ್ತುವಾರಿಗಳನ್ನಾಗಿ ರಾಜ್ಯ ನಾಯಕರನ್ನು ನೇಮಿಸಿದ ಎಐಸಿಸಿ

ರಾಜ್ಯ ಸರ್ಕಾರದ ವಿರುದ್ಧ ತೆಲಂಗಾಣ ಕಾಂಗ್ರೆಸ್​ ಆಕ್ರೋಶ ಹೆಚ್ಚಿಸಿದೆ. ಅಭ್ಯರ್ಥಿಗಳ ಪರ ಈಗಾಗಲೇ ಪ್ರಮುಖ ನಾಯಕರು ತೆಲಂಗಾಣದಲ್ಲಿ ಪ್ರಚಾರ ಆರಂಭಿಸಿದ್ದಾರೆ. ಇದೀಗ ಕ್ಷೇತ್ರ ಉಸ್ತುವಾರಿಗಳನ್ನಾಗಿ ಕರ್ನಾಟಕದ 10 ಸಚಿವರು ಹಾಗೂ 48 ಶಾಸಕರನ್ನು ಎಐಸಿಸಿ ನೇಮಿಸಿದೆ.

ತೆಲಂಗಾಣ ವಿಧಾನಸಭಾ ಚುನಾವಣೆ: ಕ್ಷೇತ್ರ ಉಸ್ತುವಾರಿಗಳನ್ನಾಗಿ ರಾಜ್ಯ ನಾಯಕರನ್ನು ನೇಮಿಸಿದ ಎಐಸಿಸಿ
ಪ್ರಾತಿನಿಧಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on: Nov 04, 2023 | 9:32 PM

Share

ದೆಹಲಿ, ನವೆಂಬರ್​​​​ 04: ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections 2023) ಹಿನ್ನೆಲೆ ಕ್ಷೇತ್ರ ಉಸ್ತುವಾರಿಗಳನ್ನಾಗಿ ಕರ್ನಾಟಕದ 10 ಸಚಿವರು ಹಾಗೂ 48 ಶಾಸಕರನ್ನು ಎಐಸಿಸಿ ನೇಮಿಸಿದೆ. ಕ್ಲಸ್ಟರ್ ಉಸ್ತುವಾರಿಗಳಾಗಿ ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ಈಶ್ವರ ಖಂಡ್ರೆ, ಕೆ.ಹೆಚ್.ಮುನಿಯಪ್ಪ, ಜಮೀರ್ ಅಹ್ಮದ್ ಖಾನ್, ಕೃಷ್ಣ ಭೈರೇಗೌಡ, ಶರಣ ಪ್ರಕಾಶ್ ಪಾಟೀಲ್​ ಮತ್ತು ಬಿ.ನಾಗೇಂದ್ರ ಅವರಿಗೆ ತೆಲಂಗಾಣ ಚುನಾವಣಾ ಜವಾಬ್ದಾರಿ ನೀಡಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ತೆಲಂಗಾಣ ಕಾಂಗ್ರೆಸ್​ ಆಕ್ರೋಶ ಹೆಚ್ಚಿಸಿದೆ. ಅಭ್ಯರ್ಥಿಗಳ ಪರ ಈಗಾಗಲೇ ಪ್ರಮುಖ ನಾಯಕರು ತೆಲಂಗಾಣದಲ್ಲಿ ಪ್ರಚಾರ ಆರಂಭಿಸಿದ್ದಾರೆ. ವಿಜಯಭೇರಿ ಬಸ್ ಯಾತ್ರೆಯ ಮೊದಲ ಆವೃತ್ತಿಯಲ್ಲಿ ರಾಹುಲ್ ಗಾಂಧಿ ಪ್ರಚಾರದಲ್ಲಿ ಇತ್ತೀಚೆಗೆ ಪಾಲ್ಗೊಂಡಿದ್ದರು. ದೀಪಾವಳಿಯಿಂದ ಎರಡನೇ ಹಂತದ ಬಸ್ ಪ್ರಯಾಣವನ್ನು ಉನ್ನತ ನಾಯಕರು ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಹಂತದ ವಿಜಯಭೇರಿ ಬಸ್ ಯಾತ್ರೆಯನ್ನು ಆರಂಭಿಸಲಿದೆ.

ಇದನ್ನೂ ಓದಿ: DK Shivakumar: ಡಿಕೆ ಶಿವಕುಮಾರ್ ಸಾರಥ್ಯದಲ್ಲಿ ಕಾಂಗ್ರೆಸ್ ಎರಡನೇ ಹಂತದ ಬಸ್ ಯಾತ್ರೆ ಇಂದಿನಿಂದ ಆರಂಭ

ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಡಿಸೆಂಬರ್​ನಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಗ್ಗೆ ಸಂವಾದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿರುವ ರಾಹುಲ್ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆಯಿಂದ ನಾವು ಪಾಠ ಕಲಿತಿದ್ದೇವೆ, ಹೀಗಾಗಿ ಈ ನಾಲ್ಕು ರಾಜ್ಯಗಳಲ್ಲಿ ಗೆಲ್ಲೋದಾಗಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ರೈತರಿಗೆ ಐದು ಗಂಟೆ ವಿದ್ಯುತ್: ತೆಲಂಗಾಣ ಕಾಂಗ್ರೆಸ್​​ಗೆ ಹಿನ್ನಡೆಯಾದ ಡಿಕೆ ಶಿವಕುಮಾರ್ ಹೇಳಿಕೆ

ಕರ್ನಾಟಕ ರೀತಿಯಲ್ಲಿ ತೆಲಂಗಾಣವನ್ನು ಕಾಂಗ್ರೆಸ್​ ತೆಕ್ಕೆಗೆ ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭರ್ಜರಿ ಸಮಾವೇಶ ನಡೆಸಿದ್ದಾರೆ. ಖಮ್ಮಮ್​ನಲ್ಲಿ ನಡೆದ ಬೃಹತ್​ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್​ ಗಾಂಧಿ, BRS ಪಕ್ಷ ಬಿಜೆಪಿಯ ಬಿ ಟೀಂ ಎಂದು ವಾಗ್ದಾಳಿ ನಡೆಸಿದ್ದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಐದು ಗಂಟೆ ವಿದ್ಯುತ್ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾಗ ನೀಡಿದ ಹೇಳಿಕೆ ಇದೀಗ ಅಲ್ಲಿನ ಕಾಂಗ್ರೆಸ್ಸಿಗರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿತ್ತು. ಅವರ ಹೇಳಿಕೆಯು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಕಳವಳ ಉಂಟುಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ