AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಪ್ರಧಾನಿ ನರಸಿಂಹ ರಾವ್​ಗೆ ಭಾರತ ರತ್ನ ನೀಡಲು ತೆಲಂಗಾಣ ಆಗ್ರಹ

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ನೇತೃತ್ವದ ತೆಲಂಗಾಣ ಸರಕಾರವು ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಿ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಿ ವಿ ನರಸಿಂಹರಾವ್ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಮರಣೋತ್ತರವಾಗಿ ನೀಡಬೇಕೆಂದು ಕೋರಿದೆ. ಈ ಕುರಿತು ತೆಲಂಗಾಣ ರಾಜ್ಯದ ವಿಧಾನಸಭೆಯಲ್ಲಿ ಇಂದು ನಿರ್ಣಯವೊಂದನ್ನು ಪ್ರಸ್ತಾಪಿಸಿ ನಂತರ ಅಂಗೀಕರಿಸಲಾಯಿತು. ಆದರೆ, ಎ ಐ ಎಮ್ ಐ ಎಮ್ ಪಕ್ಷದ ಸದಸ್ಯರು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರ ನೇತೃತ್ವದಲ್ಲಿ ಪ್ರಸ್ತಾಪವನ್ನು ವಿರೋದಿಸಿದ್ದೂ […]

ದಿವಂಗತ ಪ್ರಧಾನಿ ನರಸಿಂಹ ರಾವ್​ಗೆ ಭಾರತ ರತ್ನ ನೀಡಲು ತೆಲಂಗಾಣ ಆಗ್ರಹ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 08, 2020 | 7:13 PM

Share

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ನೇತೃತ್ವದ ತೆಲಂಗಾಣ ಸರಕಾರವು ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಿ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಿ ವಿ ನರಸಿಂಹರಾವ್ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಮರಣೋತ್ತರವಾಗಿ ನೀಡಬೇಕೆಂದು ಕೋರಿದೆ.

ಈ ಕುರಿತು ತೆಲಂಗಾಣ ರಾಜ್ಯದ ವಿಧಾನಸಭೆಯಲ್ಲಿ ಇಂದು ನಿರ್ಣಯವೊಂದನ್ನು ಪ್ರಸ್ತಾಪಿಸಿ ನಂತರ ಅಂಗೀಕರಿಸಲಾಯಿತು. ಆದರೆ, ಎ ಐ ಎಮ್ ಐ ಎಮ್ ಪಕ್ಷದ ಸದಸ್ಯರು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರ ನೇತೃತ್ವದಲ್ಲಿ ಪ್ರಸ್ತಾಪವನ್ನು ವಿರೋದಿಸಿದ್ದೂ ಅಲ್ಲದೆ ಕಲಾಪ ಬಹಿಷ್ಕರಿಸಿ ಸದನದಿಂದ ಹೊರನಡೆದರು. ಆಮೇಲೆ ಮಾಧ್ಯಮ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ ಒವೈಸಿ,‘‘ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಿ ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕೋರುವ ಚರ್ಚೆ ಮತ್ತು ಪ್ರಸ್ತಾವನೆಯನ್ನು ವಿರೋಧಿಸಿ ನಾವು ಕಲಾಪವನ್ನು ಬಹಿಷ್ಕರಿಸಿದ್ದೇವೆ. ಒಬ್ಬ ಪ್ರಧಾನ ಮಂತ್ರಿಯಾಗಿ ಅವರು ಅವರು ಬಾಬ್ರಿ ಮಸೀದಿ ಧ್ವಂಸ ಮಾಡುವುದನ್ನು ತಡೆಯುವಲ್ಲಿ ವಿಫಲರಾದರು. ಅವರ ಮತೀಯ ರಾಜಕಾರಣ ಎಲ್ಲರಿಗೂ ಗೊತ್ತಿರುವ ವಿಷಯವೇ,’’ ಎಂದು ಹೇಳಿದರು.

ದಕ್ಷಿಣ ಭಾರತ ಮೂಲದ ಮೊದಲ ಪ್ರಧಾನಿ ಮಂತ್ರಿ ಎಂಬ ಹೆಗ್ಗಳಿಕೆಯ ರಾವ್ ಅವರು, 1991 ರಿಂದ 1996ರವರೆಗೆ ರಾಷ್ಟ್ರದ ಒಂಭತ್ತನೇ ಪ್ರಧಾನಿಯಾಗಿ ಒಂದು ಅಲ್ಪಮತದ ಕಾಂಗ್ರೆಸ್ ಸರಕಾರವನ್ನು ಯಶಸ್ವೀಯಾಗಿ ಪೂರ್ಣಾವಧಿವರೆಗೆ ನಡೆಸಿದರು. ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದ ಡಾ. ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ ಆರ್ಥಿಕ ಉದಾರೀಕರಣದಿಂದ ಭಾರತ ವಿದೇಶಿ ಮೂಲದ ಕಂಪನಿಗಳಿಗೆ ಬಾಗಿಲು ತೆರೆಯಿತು. ನಂತರದ್ದೆಲ್ಲ ಈಗ ಇತಿಹಾಸ.

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ