AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸಿಆರ್‌ಗೆ ಸವಾಲು; ದೇವಸ್ಥಾನದಲ್ಲಿ ಒದ್ದೆ ಬಟ್ಟೆಯಲ್ಲಿ ಪ್ರತಿಜ್ಞೆ ಮಾಡಿದ ತೆಲಂಗಾಣ ಬಿಜೆಪಿ ಮುಖ್ಯಸ್ಥ

ತಮ್ಮ ಶಾಸಕರನ್ನು ಖರೀದಿಸುವ ಯತ್ನ ನಡೆದಿದೆ ಎಂಬ ಆರೋಪ ಸಾಬೀತುಪಡಿಸಲು ಒದ್ದೆ ಬಟ್ಟೆಯಲ್ಲೇ ದೇವರ ಮುಂದೆ ಪ್ರತಿಜ್ಞೆ ಮಾಡಿ ಎಂದು ಬಿಜೆಪಿ ನಾಯಕ ಕೆಸಿಆರ್‌ಗೆ ಸವಾಲು ಹಾಕಿದ್ದಾರೆ.

ಕೆಸಿಆರ್‌ಗೆ ಸವಾಲು; ದೇವಸ್ಥಾನದಲ್ಲಿ ಒದ್ದೆ ಬಟ್ಟೆಯಲ್ಲಿ ಪ್ರತಿಜ್ಞೆ ಮಾಡಿದ ತೆಲಂಗಾಣ ಬಿಜೆಪಿ ಮುಖ್ಯಸ್ಥ
ಬಂಡಿ ಸಂಜಯ್ ಪ್ರತಿಜ್ಞೆ
TV9 Web
| Edited By: |

Updated on: Oct 28, 2022 | 10:00 PM

Share

ಹೈದರಾಬಾದ್: ರಾಜ್ಯದ ತೆಲಂಗಾಣ ರಾಷ್ಟ್ರ ಸಮಿತಿ (TRS) ಸರ್ಕಾರವನ್ನು ಉರುಳಿಸಲು ರಾಜ್ಯ ಬಿಜೆಪಿ ಮುಖ್ಯಸ್ಥನಾಗಿ ಶಾಸಕರಿಗೆ ಲಂಚ ನೀಡುವ ಯಾವುದೇ ಪ್ರಯತ್ನದಲ್ಲಿ ತಾನು ಭಾಗಿಯಾಗಿಲ್ಲ ಎಂದು ತೆಲಂಗಾಣದ ಬಿಜೆಪಿ ಮುಖಂಡರೊಬ್ಬರು ಒದ್ದೆ ಬಟ್ಟೆಯಲ್ಲಿ ದೇವಸ್ಥಾನದಲ್ಲಿ  ಪ್ರತಿಜ್ಞೆ ಮಾಡಿದ್ದಾರೆ. ತೆಲಂಗಾಣದ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್‌ (Bandi Sanjay) ತಮ್ಮ ಮೈಮೇಲೆ ನೀರು ಸುರಿದುಕೊಂಡು ದೇವಸ್ಥಾನದ ಅರ್ಚಕರ ಮುಂದೆ ಹೇಳಿಕೆ ನೀಡಿದ್ದಲ್ಲದೆ, ಇದೇ ರೀತಿ ಮಾಡಿ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್‌ (KCR) ಅವರಿಗಾಗಿ ಕಾದು ಕುಳಿತಿದ್ದರು. ಮುಖ್ಯಮಂತ್ರಿ ಕೆಸಿಆರ್ ಅವರು ನವೀಕರಿಸಿ ಹೊಸ ದೇವಾಲಯವಾಗಿ ನಿರ್ಮಿಸಿ ಹೆಮ್ಮೆಯ ವಿಷಯವಾಗಿ ಪ್ರದರ್ಶಿಸಿದ್ದ ಯಾದಾದ್ರಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಈ ಪ್ರತಿಜ್ಞೆ ನಡೆದಿದೆ. ಈ ದೇವಸ್ಥಾನವು ಮುನುಗೋಡಿಗೆ ಅತ್ಯಂತ ಸಮೀಪದಲ್ಲಿದ್ದು, ಗುರುವಾರ ಪ್ರಮುಖ ಉಪಚುನಾವಣೆಗಳು ನಡೆಯಲಿವೆ. ತಮ್ಮ ಶಾಸಕರನ್ನು ಖರೀದಿಸುವ ಯತ್ನ ನಡೆದಿದೆ ಎಂಬ ಆರೋಪ ಸಾಬೀತುಪಡಿಸಲು ಒದ್ದೆ ಬಟ್ಟೆಯಲ್ಲೇ ದೇವರ ಮುಂದೆ ಪ್ರತಿಜ್ಞೆ ಮಾಡಿ ಎಂದು ಬಿಜೆಪಿ ನಾಯಕ ಕೆಸಿಆರ್‌ಗೆ ಸವಾಲು ಹಾಕಿದ್ದಾರೆ.

ರೋಹಿತ್ ರೆಡ್ಡಿ ಎಂಬುವರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ನಾಲ್ವರು ಟಿಆರ್‌ಎಸ್ ಶಾಸಕರಿಗೆ ಲಂಚ ನೀಡುವ ಕೃತ್ಯದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ತೆಲಂಗಾಣ ಪೊಲೀಸರು ಬುಧವಾರ ಹೇಳಿದ್ದಾರೆ. ಪೊಲೀಸರು ದಾಖಲಿಸಿರುವ ಪ್ರಕರಣದ ದೂರುದಾರ ರೋಹಿತ್ ರೆಡ್ಡಿ ಅವರು ಬಿಜೆಪಿಗೆ ಬರಲು ತನಗೆ ₹ 100 ಕೋಟಿ ವರೆಗೆ ಆಫರ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

7

ಲಂಚ ನೀಡಿದ ಆರೋಪ ಹೊತ್ತಿರುವ ಮೂವರು ಆರೋಪಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಧೀಶರು ಬಿಡುಗಡೆಗೊಳಿಸಿದ್ದು, ಆರೋಪಿಗಳನ್ನು ವಿಚಾರಣೆಗೊಳಪಡಿಸುವ ಮುನ್ನ ಸೆಕ್ಷನ್ 41ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಬೇಕು ಎಂದು ಹೇಳಿದ್ದಾರೆ. ಇದೀಗ ಸೈಬರಾಬಾದ್ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ಬಿಜೆಪಿಯ ಪ್ರಮುಖ ನಾಯಕರನ್ನು ಉಲ್ಲೇಖಿಸಿ ಆರೋಪಿಗಳು ಮತ್ತು ಶಾಸಕರ ನಡುವಿನ ಆಡಿಯೋ ಸಂಭಾಷಣೆಗಳು ಬಹಿರಂಗಗೊಂಡಿವೆ.

ಯಾದಾದ್ರಿ ದೇವಸ್ಥಾನದಲ್ಲಿ ಕೆಸಿಆರ್ ತಮ್ಮ “ಒದ್ದೆ ಬಟ್ಟೆಯ ಪ್ರತಿಜ್ಞೆ” ತೆಗೆದುಕೊಳ್ಳದಿದ್ದಕ್ಕಾಗಿ ಕೆಸಿಆರ್ ವಿರುದ್ಧ ವಾಗ್ದಾಳಿ ನಡೆಸಿದ ಬಂಡಿ ಸಂಜಯ್, ಶಾಸಕರ ಖರೀದಿ ಆರೋಪಗಳನ್ನು ಮುಖ್ಯಮಂತ್ರಿ “ಸ್ಕ್ರಿಪ್ಟ್, ನಿರ್ದೇಶನ ಮತ್ತು ನಿರ್ಮಾಣ” ಮಾಡಿದ್ದಾರೆ.”ಸೋರಿಕೆಯಾದ” ಆಡಿಯೋ ಟೇಪ್‌ಗಳನ್ನು ತಿರುಚಲಾಗಿದೆ ಎಂದು ಅವರು ಹೇಳಿದರು.

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ