AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: MP LADS ನಿಧಿಯನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡ ತೆಲಂಗಾಣ ಬಿಜೆಪಿ ಸಂಸದ

ತೆಲಂಗಾಣ ಬಿಜೆಪಿ ಸಂಸದ ಸೋಯಮ್ ಬಾಪು ರಾವ್ ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಹಣವನ್ನು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಳಸುವ ಬದಲು ತಮ್ಮದೇ ಸ್ವಂತ ಕಾರಣಗಳಿಗಾಗಿ ಬಳಸಿದ್ದಾರೆಂದು ಒಪ್ಪಿಕೊಂಡಿದ್ದಾರೆ.

Telangana: MP LADS ನಿಧಿಯನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡ ತೆಲಂಗಾಣ ಬಿಜೆಪಿ ಸಂಸದ
ಸೋಯಮ್ ಬಾಪು ರಾವ್
ಅಕ್ಷಯ್​ ಪಲ್ಲಮಜಲು​​
|

Updated on: Jun 19, 2023 | 1:28 PM

Share

ಅದಿಲಾಬಾದ್: ತೆಲಂಗಾಣ (Telangana) ಬಿಜೆಪಿ ಸಂಸದ ಸೋಯಮ್ ಬಾಪು ರಾವ್  (Soyam Bapu Rao) ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಹಣವನ್ನು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಳಸುವ ಬದಲು ತಮ್ಮದೇ ಸ್ವಂತ ಕಾರಣಗಳಿಗಾಗಿ ಬಳಸಿದ್ದಾರೆಂದು ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಆದಿಲಾಬಾದ್‌ನಲ್ಲಿ ಬಿಜೆಪಿ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಸಭೆಯಲ್ಲಿ ಸಂಸದರು ತಮ್ಮ ಸ್ವಂತ ಉದ್ದೇಶಕ್ಕೆ ಹಣವನ್ನು ಬಳಸಿಕೊಂಡಿರುವುದನ್ನು ಬಹಿರಂಗಪಡಿಸಿದಾಗ ಬಿಜೆಪಿ ನಾಯಕರು ಒಂದು ಬಾರಿ ತಬ್ಬಿಬ್ಬಾಗಿದ್ದಾರೆ.

ಕೇಂದ್ರದಿಂದ ಸಂಸದರ ಎಲ್​​​ಎಡಿಎಸ್​ ನಿಧಿಗೆ ಎರಡನೇ ಬಾರಿಗೆ ಬಂದಿರುವ 2.5 ಕೋಟಿ ರೂ.ವನ್ನು ಎಂಪಿಟಿಸಿ ಮತ್ತು ಕೌನ್ಸಿಲರ್‌ಗಳಿಗೆ ಒಂದಿಷ್ಟು ಹಣ ನೀಡಿದ್ದೇವೆ. ಆ ಜಾಗದಲ್ಲಿ ನನಗೆ ಮನೆ ಇಲ್ಲದ ಕಾರಣ ಸ್ವಲ್ಪ ಹಣವನ್ನು ಮನೆ ನಿರ್ಮಾಣಕ್ಕೆ ಮತ್ತು ಸ್ವಲ್ಪ ಹಣವನ್ನು ನನ್ನ ಮಗನ ಮದುವೆಗೆ ಬಳಸಿದ್ದೇನೆ. ಇದು ಸತ್ಯ. ಆದರೆ ನಾನು LADSನ ಒಂದು ಭಾಗವನ್ನು ಮಾತ್ರ ಬಳಸಿದ್ದೇನೆ. ಈ ಹಿಂದೆ ಅನೇಕ ಸಂಸದರು ತಮ್ಮ ಸ್ವಂತ ಕಾರಣಗಳಿಗಾಗಿ ಒಟ್ಟು ಹಣವನ್ನು ಬಳಸಿದ್ದಾರೆ, ಇದನ್ನು ನೀವು ಗಮನಿಸಬೇಕು. ಇಂದು ನಮ್ಮ ಪಕ್ಷದ ಕೆಲವು ನಾಯಕರು ಈ ಬಗ್ಗೆ ಹಲವು ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ, ಆದರೆ ಈ ಹಿಂದಿನ ಸಂಸದರು ಎಷ್ಟು ಬಳಸಿಕೊಂಡಿದ್ದಾರೆ ಎಂದು ತಿಳಿಸುತ್ತಿಲ್ಲ.

ಇದನ್ನೂ ಓದಿ:Telangana: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ತೆಲಂಗಾಣ ವಿಶ್ವವಿದ್ಯಾಲಯದ ಉಪಕುಲಪತಿ ರವೀಂದರ್ ಗುಪ್ತಾ

ಇಂದು ಭಾರತದ ಯಾವುದೇ ಸಂಸದರು 5 ಕೋಟಿ ರೂ. ಪಡೆಯಲು ಸಾಧ್ಯವಿಲ್ಲ. ಬಂಡಿ ಸಂಜಯ್​​ಗೆ ಈ ನಿಧಿ ಸಿಕ್ಕಿಲ್ಲ. ಅರವಿಂದನಿಗೂ ಇಷ್ಟು ನಿಧಿ ಸಿಗುವುದಿಲ್ಲ. ಆದರೆ ನಾನು ನಿಮಗಾಗಿ ಏನು ಮಾಡಿದ್ದೇನೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನಿನ್ನೆಯಷ್ಟೇ ನನಗೆ ದೆಹಲಿಯಿಂದ ಕರೆ ಬಂದಿತ್ತು. ನನ್ನ ಪಿಎ ಕರೆ ಮಾಡಿ ಸರ್ ನಿಮ್ಮ ಖಾತೆಗೆ ಹಣ ಬರುತ್ತಿದೆ ಎಂದರು. ಎಂಪಿಟಿಸಿ ಮತ್ತು ಕೌನ್ಸಿಲರ್‌ಗಳಿಗೆ 5 ಕೋಟಿ ನೀಡಲು ನಿರ್ಧರಿಸಿದ್ದೇವೆ. ನನ್ನ ವೈಯಕ್ತಿಕ ಕಾರಣಗಳಿಗಾಗಿ ನಾನು ಇನ್ನೂ ಹಣವನ್ನು ಬಳಸಬಹುದು ಆದರೆ ನಾವು ಅದನ್ನೂ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ