AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: MP LADS ನಿಧಿಯನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡ ತೆಲಂಗಾಣ ಬಿಜೆಪಿ ಸಂಸದ

ತೆಲಂಗಾಣ ಬಿಜೆಪಿ ಸಂಸದ ಸೋಯಮ್ ಬಾಪು ರಾವ್ ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಹಣವನ್ನು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಳಸುವ ಬದಲು ತಮ್ಮದೇ ಸ್ವಂತ ಕಾರಣಗಳಿಗಾಗಿ ಬಳಸಿದ್ದಾರೆಂದು ಒಪ್ಪಿಕೊಂಡಿದ್ದಾರೆ.

Telangana: MP LADS ನಿಧಿಯನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡ ತೆಲಂಗಾಣ ಬಿಜೆಪಿ ಸಂಸದ
ಸೋಯಮ್ ಬಾಪು ರಾವ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 19, 2023 | 1:28 PM

ಅದಿಲಾಬಾದ್: ತೆಲಂಗಾಣ (Telangana) ಬಿಜೆಪಿ ಸಂಸದ ಸೋಯಮ್ ಬಾಪು ರಾವ್  (Soyam Bapu Rao) ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಹಣವನ್ನು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಳಸುವ ಬದಲು ತಮ್ಮದೇ ಸ್ವಂತ ಕಾರಣಗಳಿಗಾಗಿ ಬಳಸಿದ್ದಾರೆಂದು ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಆದಿಲಾಬಾದ್‌ನಲ್ಲಿ ಬಿಜೆಪಿ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಸಭೆಯಲ್ಲಿ ಸಂಸದರು ತಮ್ಮ ಸ್ವಂತ ಉದ್ದೇಶಕ್ಕೆ ಹಣವನ್ನು ಬಳಸಿಕೊಂಡಿರುವುದನ್ನು ಬಹಿರಂಗಪಡಿಸಿದಾಗ ಬಿಜೆಪಿ ನಾಯಕರು ಒಂದು ಬಾರಿ ತಬ್ಬಿಬ್ಬಾಗಿದ್ದಾರೆ.

ಕೇಂದ್ರದಿಂದ ಸಂಸದರ ಎಲ್​​​ಎಡಿಎಸ್​ ನಿಧಿಗೆ ಎರಡನೇ ಬಾರಿಗೆ ಬಂದಿರುವ 2.5 ಕೋಟಿ ರೂ.ವನ್ನು ಎಂಪಿಟಿಸಿ ಮತ್ತು ಕೌನ್ಸಿಲರ್‌ಗಳಿಗೆ ಒಂದಿಷ್ಟು ಹಣ ನೀಡಿದ್ದೇವೆ. ಆ ಜಾಗದಲ್ಲಿ ನನಗೆ ಮನೆ ಇಲ್ಲದ ಕಾರಣ ಸ್ವಲ್ಪ ಹಣವನ್ನು ಮನೆ ನಿರ್ಮಾಣಕ್ಕೆ ಮತ್ತು ಸ್ವಲ್ಪ ಹಣವನ್ನು ನನ್ನ ಮಗನ ಮದುವೆಗೆ ಬಳಸಿದ್ದೇನೆ. ಇದು ಸತ್ಯ. ಆದರೆ ನಾನು LADSನ ಒಂದು ಭಾಗವನ್ನು ಮಾತ್ರ ಬಳಸಿದ್ದೇನೆ. ಈ ಹಿಂದೆ ಅನೇಕ ಸಂಸದರು ತಮ್ಮ ಸ್ವಂತ ಕಾರಣಗಳಿಗಾಗಿ ಒಟ್ಟು ಹಣವನ್ನು ಬಳಸಿದ್ದಾರೆ, ಇದನ್ನು ನೀವು ಗಮನಿಸಬೇಕು. ಇಂದು ನಮ್ಮ ಪಕ್ಷದ ಕೆಲವು ನಾಯಕರು ಈ ಬಗ್ಗೆ ಹಲವು ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ, ಆದರೆ ಈ ಹಿಂದಿನ ಸಂಸದರು ಎಷ್ಟು ಬಳಸಿಕೊಂಡಿದ್ದಾರೆ ಎಂದು ತಿಳಿಸುತ್ತಿಲ್ಲ.

ಇದನ್ನೂ ಓದಿ:Telangana: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ತೆಲಂಗಾಣ ವಿಶ್ವವಿದ್ಯಾಲಯದ ಉಪಕುಲಪತಿ ರವೀಂದರ್ ಗುಪ್ತಾ

ಇಂದು ಭಾರತದ ಯಾವುದೇ ಸಂಸದರು 5 ಕೋಟಿ ರೂ. ಪಡೆಯಲು ಸಾಧ್ಯವಿಲ್ಲ. ಬಂಡಿ ಸಂಜಯ್​​ಗೆ ಈ ನಿಧಿ ಸಿಕ್ಕಿಲ್ಲ. ಅರವಿಂದನಿಗೂ ಇಷ್ಟು ನಿಧಿ ಸಿಗುವುದಿಲ್ಲ. ಆದರೆ ನಾನು ನಿಮಗಾಗಿ ಏನು ಮಾಡಿದ್ದೇನೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನಿನ್ನೆಯಷ್ಟೇ ನನಗೆ ದೆಹಲಿಯಿಂದ ಕರೆ ಬಂದಿತ್ತು. ನನ್ನ ಪಿಎ ಕರೆ ಮಾಡಿ ಸರ್ ನಿಮ್ಮ ಖಾತೆಗೆ ಹಣ ಬರುತ್ತಿದೆ ಎಂದರು. ಎಂಪಿಟಿಸಿ ಮತ್ತು ಕೌನ್ಸಿಲರ್‌ಗಳಿಗೆ 5 ಕೋಟಿ ನೀಡಲು ನಿರ್ಧರಿಸಿದ್ದೇವೆ. ನನ್ನ ವೈಯಕ್ತಿಕ ಕಾರಣಗಳಿಗಾಗಿ ನಾನು ಇನ್ನೂ ಹಣವನ್ನು ಬಳಸಬಹುದು ಆದರೆ ನಾವು ಅದನ್ನೂ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ