AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಕಿಶನ್ ರೆಡ್ಡಿಯನ್ನು ವಶಕ್ಕೆ ಪಡೆದ ಪೊಲೀಸ್; ನಾನೇನು ಭಯೋತ್ಪಾದಕನೇ? ಎಂದು ಪ್ರಶ್ನಿಸಿದ ಕೇಂದ್ರ ಸಚಿವ

ಹೈದರಾಬಾದ್‌ನ ಬಟಸಿಂಗಾರಂನಲ್ಲಿರುವ ತೆಲಂಗಾಣ ಸರ್ಕಾರದ ಎರಡು ಮಲಗುವ ಕೋಣೆಗಳ ವಸತಿ ನಿವೇಶನಕ್ಕೆ ಭೇಟಿ ನೀಡುವ ಯೋಜನೆಯನ್ನು ರೆಡ್ಡಿ ಘೋಷಿಸಿದ್ದರು. ಎರಡು ಬೆಡ್‌ರೂಮ್‌ಗಳ ನಿವೇಶನಕ್ಕೆ ಭೇಟಿ ನೀಡುವ ಬಿಜೆಪಿ ನಾಯಕರನ್ನು ಪೊಲೀಸ್ ಗೃಹಬಂಧನ ಮಾಡಿದ್ದನ್ನು ಈ ಹಿಂದೆ ಕಿಶನ್ ರೆಡ್ಡಿ ಖಂಡಿಸಿದ್ದರು.

ತೆಲಂಗಾಣದಲ್ಲಿ ಕಿಶನ್ ರೆಡ್ಡಿಯನ್ನು ವಶಕ್ಕೆ ಪಡೆದ ಪೊಲೀಸ್; ನಾನೇನು ಭಯೋತ್ಪಾದಕನೇ? ಎಂದು ಪ್ರಶ್ನಿಸಿದ ಕೇಂದ್ರ ಸಚಿವ
ಕಿಶನ್ ರೆಡ್ಡಿ
ರಶ್ಮಿ ಕಲ್ಲಕಟ್ಟ
|

Updated on:Jul 20, 2023 | 6:17 PM

Share

ಹೈದರಾಬಾದ್ ಜುಲೈ 20: ಕೇಂದ್ರ ಸಚಿವ ಮತ್ತು ತೆಲಂಗಾಣ (Telangana) ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ (G Kishan Reddy) ಅವರನ್ನು ಶಂಶಾಬಾದ್‌ನಲ್ಲಿ ಪೊಲೀಸರು ತಡೆದು, ಮುನ್ನೆಚ್ಚರಿಕೆಯಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.ಭಾರತ್ ರಾಷ್ಟ್ರ ಸಮಿತಿ (BRS) ಸರ್ಕಾರದ ಬಡವರಿಗೆ ವಸತಿ ಯೋಜನೆಯ ಸ್ಥಳವನ್ನು ಪರಿಶೀಲಿಸಲು ರೆಡ್ಡಿ ಶಂಶಾಬಾದ್ ವಿಮಾನ ನಿಲ್ದಾಣದಿಂದ ಬಟಸಿಂಗಾರಂಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಘಟನೆ ನಡೆದ ಕೂಡಲೇ ಪಕ್ಷದ ಇತರ ಮುಖಂಡರೊಂದಿಗೆ ಔಟರ್ ರಿಂಗ್ ರಸ್ತೆಯಲ್ಲೇ ಕುಳಿತು ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದರು.

ರಾಚಕೊಂಡ ಪೊಲೀಸ್ ಕಮಿಷನರ್ ಡಿಎಸ್ ಚೌಹಾಣ್ ಕೇಂದ್ರ ಸಚಿವರು ಮತ್ತು ಇತರ ಮುಖಂಡರ ಮನವೊಲಿಸಿ ಅಲ್ಲಿಂದ ತೆರವು ಮಾಡಲು ಯತ್ನಿಸಿದಾಗ ಕಿಶನ್ ರೆಡ್ಡಿ ಅವರು , ನಾನೇನು ಅಪರಾಧಿಯೇ? ನಾನು ಭಯೋತ್ಪಾದಕನೇ? ಭಾರತದಲ್ಲಿ ಎಲ್ಲಿ ಬೇಕಾದರೂ ಹೋಗಲು ನನಗೆ ಹಕ್ಕು ಇದೆ ಎಂದು ಹೇಳಿದ್ದಾರೆ. ನಂತರ ಪೊಲೀಸರು ಕಿಶನ್ ರೆಡ್ಡಿ ಅವರನ್ನು ವಾಹನವಿದ್ದೆಡೆಗೆ ಎತ್ತಿಕೊಂಡು ಹೋಗಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಹೈದರಾಬಾದ್‌ನ ಬಟಸಿಂಗಾರಂನಲ್ಲಿರುವ ತೆಲಂಗಾಣ ಸರ್ಕಾರದ ಎರಡು ಮಲಗುವ ಕೋಣೆಗಳ ವಸತಿ ನಿವೇಶನಕ್ಕೆ ಭೇಟಿ ನೀಡುವ ಯೋಜನೆಯನ್ನು ರೆಡ್ಡಿ ಘೋಷಿಸಿದ್ದರು. ಎರಡು ಬೆಡ್‌ರೂಮ್‌ಗಳ ನಿವೇಶನಕ್ಕೆ ಭೇಟಿ ನೀಡುವ ಬಿಜೆಪಿ ನಾಯಕರನ್ನು ಪೊಲೀಸ್ ಗೃಹಬಂಧನ ಮಾಡಿದ್ದನ್ನು ಈ ಹಿಂದೆ ಕಿಶನ್ ರೆಡ್ಡಿ ಖಂಡಿಸಿದ್ದರು.

ತೆಲಂಗಾಣದ ಬಿಆರ್‌ಎಸ್ ಸರ್ಕಾರ ಡಬಲ್ ಬೆಡ್ ರೂಂ ಮನೆಗಳನ್ನು ನಿರ್ಮಿಸದೆ ಮತ್ತು ಪೂರ್ಣಗೊಂಡ ಮನೆಗಳನ್ನು ವಿತರಿಸದೆ ಜನರನ್ನು ವಂಚಿಸುತ್ತಿದೆ ಎಂದು ರೆಡ್ಡಿ ಆರೋಪಿಸಿದರು.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್

ಇಂದು ಕೇಂದ್ರ ಸಚಿವನಾಗಿ ನಾನು ಬ್ಯಾಟಸಿಂಗಾರಂಗೆ ಭೇಟಿ ನೀಡಿ ಅಲ್ಲಿನ ಡಬಲ್ ಬೆಡ್‌ರೂಮ್ ಮನೆಗಳನ್ನು ಪರಿಶೀಲಿಸಲು ಬಯಸಿದ್ದೆ. ಆದರೆ, ಡಿ.ಕೆ.ಅರುಣ, ಈಟಾಳ ರಾಜೇಂದರ್, ರಾಮಚಂದರ್ ರಾವ್ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರನ್ನು ಬಂಧಿಸಲಾಯಿತು. ನಾವು ಕಲ್ವಕುಂಟ್ಲ ತುರ್ತು ಪರಿಸ್ಥಿತಿಯಲ್ಲಿದ್ದೇವೆಯೇ? ಮಹಾನ್ ಚಳವಳಿಯಿಂದ ಗೆದ್ದ ತೆಲಂಗಾಣ ಈಗ ಕಲ್ವಕುಂಟ್ಲ ಕುಟುಂಬದ ಹಿಡಿತದಲ್ಲಿದೆ,” ಎಂದು ಅವರು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Thu, 20 July 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ