AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಕಿಶನ್ ರೆಡ್ಡಿಯನ್ನು ವಶಕ್ಕೆ ಪಡೆದ ಪೊಲೀಸ್; ನಾನೇನು ಭಯೋತ್ಪಾದಕನೇ? ಎಂದು ಪ್ರಶ್ನಿಸಿದ ಕೇಂದ್ರ ಸಚಿವ

ಹೈದರಾಬಾದ್‌ನ ಬಟಸಿಂಗಾರಂನಲ್ಲಿರುವ ತೆಲಂಗಾಣ ಸರ್ಕಾರದ ಎರಡು ಮಲಗುವ ಕೋಣೆಗಳ ವಸತಿ ನಿವೇಶನಕ್ಕೆ ಭೇಟಿ ನೀಡುವ ಯೋಜನೆಯನ್ನು ರೆಡ್ಡಿ ಘೋಷಿಸಿದ್ದರು. ಎರಡು ಬೆಡ್‌ರೂಮ್‌ಗಳ ನಿವೇಶನಕ್ಕೆ ಭೇಟಿ ನೀಡುವ ಬಿಜೆಪಿ ನಾಯಕರನ್ನು ಪೊಲೀಸ್ ಗೃಹಬಂಧನ ಮಾಡಿದ್ದನ್ನು ಈ ಹಿಂದೆ ಕಿಶನ್ ರೆಡ್ಡಿ ಖಂಡಿಸಿದ್ದರು.

ತೆಲಂಗಾಣದಲ್ಲಿ ಕಿಶನ್ ರೆಡ್ಡಿಯನ್ನು ವಶಕ್ಕೆ ಪಡೆದ ಪೊಲೀಸ್; ನಾನೇನು ಭಯೋತ್ಪಾದಕನೇ? ಎಂದು ಪ್ರಶ್ನಿಸಿದ ಕೇಂದ್ರ ಸಚಿವ
ಕಿಶನ್ ರೆಡ್ಡಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 20, 2023 | 6:17 PM

Share

ಹೈದರಾಬಾದ್ ಜುಲೈ 20: ಕೇಂದ್ರ ಸಚಿವ ಮತ್ತು ತೆಲಂಗಾಣ (Telangana) ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ (G Kishan Reddy) ಅವರನ್ನು ಶಂಶಾಬಾದ್‌ನಲ್ಲಿ ಪೊಲೀಸರು ತಡೆದು, ಮುನ್ನೆಚ್ಚರಿಕೆಯಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.ಭಾರತ್ ರಾಷ್ಟ್ರ ಸಮಿತಿ (BRS) ಸರ್ಕಾರದ ಬಡವರಿಗೆ ವಸತಿ ಯೋಜನೆಯ ಸ್ಥಳವನ್ನು ಪರಿಶೀಲಿಸಲು ರೆಡ್ಡಿ ಶಂಶಾಬಾದ್ ವಿಮಾನ ನಿಲ್ದಾಣದಿಂದ ಬಟಸಿಂಗಾರಂಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಘಟನೆ ನಡೆದ ಕೂಡಲೇ ಪಕ್ಷದ ಇತರ ಮುಖಂಡರೊಂದಿಗೆ ಔಟರ್ ರಿಂಗ್ ರಸ್ತೆಯಲ್ಲೇ ಕುಳಿತು ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿದರು.

ರಾಚಕೊಂಡ ಪೊಲೀಸ್ ಕಮಿಷನರ್ ಡಿಎಸ್ ಚೌಹಾಣ್ ಕೇಂದ್ರ ಸಚಿವರು ಮತ್ತು ಇತರ ಮುಖಂಡರ ಮನವೊಲಿಸಿ ಅಲ್ಲಿಂದ ತೆರವು ಮಾಡಲು ಯತ್ನಿಸಿದಾಗ ಕಿಶನ್ ರೆಡ್ಡಿ ಅವರು , ನಾನೇನು ಅಪರಾಧಿಯೇ? ನಾನು ಭಯೋತ್ಪಾದಕನೇ? ಭಾರತದಲ್ಲಿ ಎಲ್ಲಿ ಬೇಕಾದರೂ ಹೋಗಲು ನನಗೆ ಹಕ್ಕು ಇದೆ ಎಂದು ಹೇಳಿದ್ದಾರೆ. ನಂತರ ಪೊಲೀಸರು ಕಿಶನ್ ರೆಡ್ಡಿ ಅವರನ್ನು ವಾಹನವಿದ್ದೆಡೆಗೆ ಎತ್ತಿಕೊಂಡು ಹೋಗಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಹೈದರಾಬಾದ್‌ನ ಬಟಸಿಂಗಾರಂನಲ್ಲಿರುವ ತೆಲಂಗಾಣ ಸರ್ಕಾರದ ಎರಡು ಮಲಗುವ ಕೋಣೆಗಳ ವಸತಿ ನಿವೇಶನಕ್ಕೆ ಭೇಟಿ ನೀಡುವ ಯೋಜನೆಯನ್ನು ರೆಡ್ಡಿ ಘೋಷಿಸಿದ್ದರು. ಎರಡು ಬೆಡ್‌ರೂಮ್‌ಗಳ ನಿವೇಶನಕ್ಕೆ ಭೇಟಿ ನೀಡುವ ಬಿಜೆಪಿ ನಾಯಕರನ್ನು ಪೊಲೀಸ್ ಗೃಹಬಂಧನ ಮಾಡಿದ್ದನ್ನು ಈ ಹಿಂದೆ ಕಿಶನ್ ರೆಡ್ಡಿ ಖಂಡಿಸಿದ್ದರು.

ತೆಲಂಗಾಣದ ಬಿಆರ್‌ಎಸ್ ಸರ್ಕಾರ ಡಬಲ್ ಬೆಡ್ ರೂಂ ಮನೆಗಳನ್ನು ನಿರ್ಮಿಸದೆ ಮತ್ತು ಪೂರ್ಣಗೊಂಡ ಮನೆಗಳನ್ನು ವಿತರಿಸದೆ ಜನರನ್ನು ವಂಚಿಸುತ್ತಿದೆ ಎಂದು ರೆಡ್ಡಿ ಆರೋಪಿಸಿದರು.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್

ಇಂದು ಕೇಂದ್ರ ಸಚಿವನಾಗಿ ನಾನು ಬ್ಯಾಟಸಿಂಗಾರಂಗೆ ಭೇಟಿ ನೀಡಿ ಅಲ್ಲಿನ ಡಬಲ್ ಬೆಡ್‌ರೂಮ್ ಮನೆಗಳನ್ನು ಪರಿಶೀಲಿಸಲು ಬಯಸಿದ್ದೆ. ಆದರೆ, ಡಿ.ಕೆ.ಅರುಣ, ಈಟಾಳ ರಾಜೇಂದರ್, ರಾಮಚಂದರ್ ರಾವ್ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರನ್ನು ಬಂಧಿಸಲಾಯಿತು. ನಾವು ಕಲ್ವಕುಂಟ್ಲ ತುರ್ತು ಪರಿಸ್ಥಿತಿಯಲ್ಲಿದ್ದೇವೆಯೇ? ಮಹಾನ್ ಚಳವಳಿಯಿಂದ ಗೆದ್ದ ತೆಲಂಗಾಣ ಈಗ ಕಲ್ವಕುಂಟ್ಲ ಕುಟುಂಬದ ಹಿಡಿತದಲ್ಲಿದೆ,” ಎಂದು ಅವರು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Thu, 20 July 23

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ