AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಡ್ರಗ್ಸ್​ ಕೇಸ್: ನಟಿ ರಕುಲ್ ಪ್ರೀತ್ ಸಿಂಗ್, ಟಿಆರ್​ಎಸ್ ಶಾಸಕ ರೋಹಿತ್ ರೆಡ್ಡಿಗೆ ಇಡಿ ನೋಟಿಸ್

2021ರ ಬೆಂಗಳೂರಿನ ಡ್ರಗ್ಸ್​ ಪ್ರಕರಣದಲ್ಲಿ ತೆಲಂಗಾಣದ ಟಿಆರ್​ಎಸ್ ಶಾಸಕ ಸೇರಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ.

ಬೆಂಗಳೂರು ಡ್ರಗ್ಸ್​ ಕೇಸ್: ನಟಿ ರಕುಲ್ ಪ್ರೀತ್ ಸಿಂಗ್, ಟಿಆರ್​ಎಸ್ ಶಾಸಕ ರೋಹಿತ್ ರೆಡ್ಡಿಗೆ ಇಡಿ ನೋಟಿಸ್
ನಟಿ ರಾಕುಲ್ ಪ್ರೀತ್​ ಸಿಂಗ್ ಮತ್ತು ಟಿಆರ್​ಎಸ್ ಶಾಸಕ ರೋಹಿತ್ ರೆಡ್ಡಿ
TV9 Web
| Edited By: |

Updated on:Dec 16, 2022 | 3:27 PM

Share

ಹೈದರಾಬಾದ್/ಬೆಂಗಳೂರು: ಬೆಂಗಳೂರಿನ ಗೋವಿಂದಪುರ ಠಾಣಾಯಲ್ಲಿ ದಾಖಲಾಗಿರುವ ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಬಿಆರ್‌ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಹಾಗೂ ನಟಿ ರಕುಲ್ ಪ್ರೀತ್ ಸಿಂಗ್​ಗೆ(Rakul Preet Singh) ಜಾರಿ ನಿರ್ದೇಶನಾಲಯ(Enforcement Directorate)ಇಂದು(ಡಿಸೆ.16) ನೋಟಿಸ್ ನೀಡಿದ್ದು, ಡಿಸೆಂಬರ್ 19ರಂದು ವಿಚಾರಣೆಗೆ ಹೈದರಾಬಾದ್​​ನ ಇಡಿ ಕಚೇರಿಗೆ  ಹಾಜರಾಗುವಂತೆ ಸೂಚಿಸಿದೆ.

2021 ರಲ್ಲಿ ಬೆಂಗಳೂರಿನ ಗೋವಿಂದಪುರ ಪೊಲೀಸರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನಲ್ಲಿ ಉದ್ಯಮಿ ಕಲಹರ್ ರೆಡ್ಡಿ ಜೊತೆಗೆ ಚಲನಚಿತ್ರ ನಿರ್ಮಾಪಕ ಶಂಕರ್ ಗೌಡ ಆಯೋಜಿಸಿದ್ದ ಪಾರ್ಟಿಯಲ್ಲಿ 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದರು. ಅಲ್ಲದೇ ಡ್ರಗ್ಸ್ ಸೇವಿಸಿದ್ದ ಶಂಕರಗೌಡನನ್ನು ಬಂಧಿಸಿದ್ದರು. ಜೊತೆಗೆ. ನಟ ತನಿಶ್ ಅವರನ್ನೂ ಬೆಂಗಳೂರು ಪೊಲೀಸರು ವಿಚಾರಣೆ ನಡೆಸಿದ್ದರು. ಈ ಪಾರ್ಟಿಯಲ್ಲಿ ಬಿಆರ್‌ಎಸ್ ಶಾಸಕ ರೋಹಿತ್ ರೆಡ್ಡಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಇಡಿ ಶಾಸಕ ರೋಹಿತ್ ರೆಡ್ಡಿಗೂ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಇವರ ಜೊತೆಗೆ ನಟಿ ರಾಕುಲ್ ಪ್ರೀತ್​ ಸಿಂಗ್​ಗೂ ಇಡಿ ನೋಟಿಸ್​ ಜಾರಿ ಮಾಡಿದೆ.

ಇನ್ನು ಈ ಬಗ್ಗೆ ಟಿವಿ9 ತೆಲುಗು ಜೊತೆ ಮಾತನಾಡಿದ ಶಾಸಕ ರೆಡ್ಡಿ, ತಮಗೆ ಇಡಿ ನೋಟಿಸ್ ಬಂದಿರುವುದನ್ನು ಖಚಿತಪಡಿಸಿದ್ದಾರೆ. ಆದ್ರೆ, ನೋಟಿಸ್‌ನಲ್ಲಿ ಪ್ರಕರಣದ ವಿವರಗಳನ್ನು ನೀಡಿಲ್ಲ. ಆಧಾರ್ ಮತ್ತು ವೋಟರ್ ಐಡಿ ಸೇರಿದಂತೆ ಹಣಕಾಸಿನ ವಹಿವಾಟಿನ ದಾಖಲೆಗಳನ್ನು ತರಲು ಹೇಳಿದ್ದಾರೆ. ಪ್ರಕರಣದ ವಿವರಗಳಿಲ್ಲದೆ ನೋಟಿಸ್‌ಗಳನ್ನು ನೀಡಲಾಗಿದ್ದು, ನೋಟಿಸ್‌ಗಳಿಗೆ ಉತ್ತರಿಸುವ ಮುನ್ನ ನನ್ನ ಕಾನೂನು ತಂಡದೊಂದಿಗೆ ಸಮಾಲೋಚಿಸುತ್ತೇನೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:13 pm, Fri, 16 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ