AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ರಾಜ್ಯಪಾಲರ ‘ಮನೆಯಲ್ಲಿ ಔತಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಕರ ರಾವ್ ಮತ್ತೆ ಚಕ್ಕರ್!

ದೇಶಾದ್ಯಂತ ಮುಖ್ಯಮಂತ್ರಿಗಳಾದವರು ತಮ್ಮ ಆಯ್ಕೆಯ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ ಮತ್ತು ತದನಂತರ ರಾಜ್ಯಪಾಲರು ತಮ್ಮ ನಿವಾಸಗಳಲ್ಲಿ ಆಯೋಜಿಸುವ 'ಅಟ್ ಹೋಮ್' ಕಾರ್ಯಕ್ರಮದಲ್ಲಿ ಆಯಾ ಮುಖ್ಯಮಂತ್ರಿಗಳು ಭಾಗವಹಿಸುತ್ತಾರೆ.

ತೆಲಂಗಾಣ: ರಾಜ್ಯಪಾಲರ 'ಮನೆಯಲ್ಲಿ ಔತಣ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಕರ ರಾವ್ ಮತ್ತೆ ಚಕ್ಕರ್!
ತೆಲಂಗಾಣ: ರಾಜ್ಯಪಾಲರ 'ಮನೆಯಲ್ಲಿ ಔತಣ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಕರ ರಾವ್ ಮತ್ತೆ ಚಕ್ಕರ್!
TV9 Web
| Edited By: |

Updated on: Aug 15, 2022 | 10:02 PM

Share

ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರು (K Chandrashekar Rao) ಕಳೆದ ಎರಡು ವರ್ಷಗಳಿಂದ ರಾಜಭವನದಲ್ಲಿ ಆಯೋಜಿಸಿದ್ದ “ಅಟ್ ಹೋಮ್” ಕಾರ್ಯಕ್ರಮದಲ್ಲಿ (Governor ‘At home’ ) ಪಾಲ್ಗೊಳ್ಳದೆ, ತಪ್ಪಿಸಿದ್ದಾರೆ. ಮೂರನೆಯ ಬಾರಿಗೆ ಈ ವರ್ಷವೂ ಚಕ್ಕರ್ ಹೊಡೆದಿದ್ದಾರೆ. ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಹೊರತುಪಡಿಸಿ, ಟಿಆರ್‌ಎಸ್ ಶಾಸಕರು, ಸಚಿವರು, ಎಂಎಲ್‌ಸಿಗಳು ಸಹ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು.

ಆಗ ರಾಜಭವನ ಮತ್ತು ಪ್ರಗತಿ ಭವನದ ನಡುವಿನ ಸಂಬಂಧಗಳು ಹೆಚ್ಚು ಸೌಹಾರ್ದಯುತವಾಗಿದ್ದ ಕಾರಣ 2020 ರವರೆಗೆ ಸಿಎಂ ಕೆಸಿಆರ್ ಭಾಗವಹಿಸಿದ್ದರು. ಟಿಆರ್‌ಎಸ್ ನಾಯಕರು ಕೂಡ ಕಳೆದ ಕೆಲವು ದಿನಗಳಿಂದ ರಾಜ್ಯಪಾಲರ ವಿರುದ್ಧ ಟೀಕೆ ಮಾಡುತ್ತಿದ್ದಾರೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಿಎಂ ಕೆಸಿಆರ್ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಆಯ್ಕೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.

ದೇಶಾದ್ಯಂತ ಮುಖ್ಯಮಂತ್ರಿಗಳಾದವರು ತಮ್ಮ ಆಯ್ಕೆಯ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ ಮತ್ತು ತದನಂತರ ರಾಜ್ಯಪಾಲರು ತಮ್ಮ ನಿವಾಸಗಳಲ್ಲಿ ಆಯೋಜಿಸುವ ‘ಅಟ್ ಹೋಮ್’ ಕಾರ್ಯಕ್ರಮದಲ್ಲಿ ಆಯಾ ಮುಖ್ಯಮಂತ್ರಿಗಳು ಭಾಗವಹಿಸುತ್ತಾರೆ. ದೆಹಲಿಯಲ್ಲಿ, ಪ್ರಧಾನಿ ತಮ್ಮ ಕಾರ್ಯಕ್ರಮಗಳ ಬಳಿಕ, ರಾಷ್ಟ್ರಪತಿ ಆಯೋಜಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಶಿಷ್ಟಾಚಾರ.

ವರದಿಗಳ ಪ್ರಕಾರ, ಪ್ರೋಟೋಕಾಲ್ ಸಮಸ್ಯೆಗಳ ಕುರಿತು ರಾಜಭವನ ಮತ್ತು ಪ್ರಗತಿ ಭವನದ ನಡುವೆ ವಿಷಯಗಳು ಬಗೆಹರಿಯದೆ ಉಳಿದಿವೆ. ಆದಾಗ್ಯೂ, ಜೂನ್‌ನಲ್ಲಿ ರಾಜಭವನದಲ್ಲಿ ನಡೆದ ಉಜ್ಜಲ್ ಭುಯಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು. ಯುಗಾದಿ ಆಚರಣೆ ವೇಳೆ ಮುಖ್ಯಮಂತ್ರಿ ಮತ್ತು ಟಿಆರ್‌ಎಸ್ ಮುಖಂಡರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು, ರಾಜ್ಯಪಾಲರ ಆಕ್ರೋಶಕ್ಕೆ ಕಾರಣವಾಗಿತ್ತು.

ರಾಜ್ಯಪಾಲರು ಹೆಚ್ಚಿನ ಸಂಖ್ಯೆಯ ಅತಿಥಿಗಳನ್ನು ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ, ಇದರಲ್ಲಿ ವಿವಿಧ ಕ್ಷೇತ್ರಗಳ ತಜ್ಞರು ಸೇರಿದ್ದಾರೆ.

To read more in English click here  

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ