AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ರಾಜ್ಯಪಾಲರ ‘ಮನೆಯಲ್ಲಿ ಔತಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಕರ ರಾವ್ ಮತ್ತೆ ಚಕ್ಕರ್!

ದೇಶಾದ್ಯಂತ ಮುಖ್ಯಮಂತ್ರಿಗಳಾದವರು ತಮ್ಮ ಆಯ್ಕೆಯ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ ಮತ್ತು ತದನಂತರ ರಾಜ್ಯಪಾಲರು ತಮ್ಮ ನಿವಾಸಗಳಲ್ಲಿ ಆಯೋಜಿಸುವ 'ಅಟ್ ಹೋಮ್' ಕಾರ್ಯಕ್ರಮದಲ್ಲಿ ಆಯಾ ಮುಖ್ಯಮಂತ್ರಿಗಳು ಭಾಗವಹಿಸುತ್ತಾರೆ.

ತೆಲಂಗಾಣ: ರಾಜ್ಯಪಾಲರ 'ಮನೆಯಲ್ಲಿ ಔತಣ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಕರ ರಾವ್ ಮತ್ತೆ ಚಕ್ಕರ್!
ತೆಲಂಗಾಣ: ರಾಜ್ಯಪಾಲರ 'ಮನೆಯಲ್ಲಿ ಔತಣ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಕರ ರಾವ್ ಮತ್ತೆ ಚಕ್ಕರ್!
TV9 Web
| Updated By: ಸಾಧು ಶ್ರೀನಾಥ್​|

Updated on: Aug 15, 2022 | 10:02 PM

Share

ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರು (K Chandrashekar Rao) ಕಳೆದ ಎರಡು ವರ್ಷಗಳಿಂದ ರಾಜಭವನದಲ್ಲಿ ಆಯೋಜಿಸಿದ್ದ “ಅಟ್ ಹೋಮ್” ಕಾರ್ಯಕ್ರಮದಲ್ಲಿ (Governor ‘At home’ ) ಪಾಲ್ಗೊಳ್ಳದೆ, ತಪ್ಪಿಸಿದ್ದಾರೆ. ಮೂರನೆಯ ಬಾರಿಗೆ ಈ ವರ್ಷವೂ ಚಕ್ಕರ್ ಹೊಡೆದಿದ್ದಾರೆ. ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಹೊರತುಪಡಿಸಿ, ಟಿಆರ್‌ಎಸ್ ಶಾಸಕರು, ಸಚಿವರು, ಎಂಎಲ್‌ಸಿಗಳು ಸಹ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು.

ಆಗ ರಾಜಭವನ ಮತ್ತು ಪ್ರಗತಿ ಭವನದ ನಡುವಿನ ಸಂಬಂಧಗಳು ಹೆಚ್ಚು ಸೌಹಾರ್ದಯುತವಾಗಿದ್ದ ಕಾರಣ 2020 ರವರೆಗೆ ಸಿಎಂ ಕೆಸಿಆರ್ ಭಾಗವಹಿಸಿದ್ದರು. ಟಿಆರ್‌ಎಸ್ ನಾಯಕರು ಕೂಡ ಕಳೆದ ಕೆಲವು ದಿನಗಳಿಂದ ರಾಜ್ಯಪಾಲರ ವಿರುದ್ಧ ಟೀಕೆ ಮಾಡುತ್ತಿದ್ದಾರೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಿಎಂ ಕೆಸಿಆರ್ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಆಯ್ಕೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.

ದೇಶಾದ್ಯಂತ ಮುಖ್ಯಮಂತ್ರಿಗಳಾದವರು ತಮ್ಮ ಆಯ್ಕೆಯ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ ಮತ್ತು ತದನಂತರ ರಾಜ್ಯಪಾಲರು ತಮ್ಮ ನಿವಾಸಗಳಲ್ಲಿ ಆಯೋಜಿಸುವ ‘ಅಟ್ ಹೋಮ್’ ಕಾರ್ಯಕ್ರಮದಲ್ಲಿ ಆಯಾ ಮುಖ್ಯಮಂತ್ರಿಗಳು ಭಾಗವಹಿಸುತ್ತಾರೆ. ದೆಹಲಿಯಲ್ಲಿ, ಪ್ರಧಾನಿ ತಮ್ಮ ಕಾರ್ಯಕ್ರಮಗಳ ಬಳಿಕ, ರಾಷ್ಟ್ರಪತಿ ಆಯೋಜಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಶಿಷ್ಟಾಚಾರ.

ವರದಿಗಳ ಪ್ರಕಾರ, ಪ್ರೋಟೋಕಾಲ್ ಸಮಸ್ಯೆಗಳ ಕುರಿತು ರಾಜಭವನ ಮತ್ತು ಪ್ರಗತಿ ಭವನದ ನಡುವೆ ವಿಷಯಗಳು ಬಗೆಹರಿಯದೆ ಉಳಿದಿವೆ. ಆದಾಗ್ಯೂ, ಜೂನ್‌ನಲ್ಲಿ ರಾಜಭವನದಲ್ಲಿ ನಡೆದ ಉಜ್ಜಲ್ ಭುಯಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು. ಯುಗಾದಿ ಆಚರಣೆ ವೇಳೆ ಮುಖ್ಯಮಂತ್ರಿ ಮತ್ತು ಟಿಆರ್‌ಎಸ್ ಮುಖಂಡರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು, ರಾಜ್ಯಪಾಲರ ಆಕ್ರೋಶಕ್ಕೆ ಕಾರಣವಾಗಿತ್ತು.

ರಾಜ್ಯಪಾಲರು ಹೆಚ್ಚಿನ ಸಂಖ್ಯೆಯ ಅತಿಥಿಗಳನ್ನು ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ, ಇದರಲ್ಲಿ ವಿವಿಧ ಕ್ಷೇತ್ರಗಳ ತಜ್ಞರು ಸೇರಿದ್ದಾರೆ.

To read more in English click here  

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ