AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ ಆಸ್ಪತ್ರೆಗೆ ದಾಖಲು; ಕೆಲವೇ ಹೊತ್ತಲ್ಲಿ ಎಂಆರ್​ಐ, ಸಿಟಿ ಸ್ಕ್ಯಾನ್​

68 ವರ್ಷದ ಕೆಸಿಆರ್​ ಅವರು ಕಳೆದ ಕೆಲವು ದಿನಗಳಿಂದ ಒಂದರ ಬೆನ್ನಿಗೆ ಒಂದು ಕೆಲಸದಲ್ಲಿ ತೊಡಗಿಕೊಂಡಿದ್ದರು. ಫೆಡರಲ್​ ಫ್ರಂಟ್​ ರಚನೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಂಬೈ, ದೆಹಲಿ, ಜಾರ್ಖಂಡಗಳಿಗೆ ಪ್ರವಾಸ ಮಾಡಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ ಆಸ್ಪತ್ರೆಗೆ ದಾಖಲು; ಕೆಲವೇ ಹೊತ್ತಲ್ಲಿ ಎಂಆರ್​ಐ, ಸಿಟಿ ಸ್ಕ್ಯಾನ್​
ಆಸ್ಪತ್ರೆಗೆ ದಾಖಲಾದ ಸಿಎಂ ಕೆಸಿಆರ್​
TV9 Web
| Updated By: Lakshmi Hegde|

Updated on:Mar 11, 2022 | 1:07 PM

Share

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್ (K Chandrashekhar Rao)​ ಅವರ ಎಡಗೈನಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್​ನ ಯಶೋದಾ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ. ಕೆಸಿಆರ್​ ಹೃದಯದಲ್ಲಿ ಯಾವುದೇ ಬ್ಲಾಕ್​ಗಳು ಕಂಡು ಬಂದಿಲ್ಲ. ಸಿಎಂಗೆ ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್​ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನೂ ಮಾಡಲಾಗುವುದು ಎಂದು ಕೆಸಿಆರ್​ ವೈಯಕ್ತಿಕ ಡಾಕ್ಟರ್​ ಎಂ.ವಿ.ರಾವ್ ತಿಳಿಸಿದ್ದಾರೆ. ಪ್ರತಿವರ್ಷ ಫೆಬ್ರವರಿಯಲ್ಲಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ನಾವು ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನೂ ಮಾಡುತ್ತೇವೆ. ಸದ್ಯ ಅವರ ಎಡ ಕೈ ಮತ್ತು ಕಾಲುಗಳಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಹೀಗಾಗಿ ಇನ್ನಷ್ಟು ತಪಾಸಣೆಯ ಅಗತ್ಯವಿದೆ. ಸದ್ಯ ಅವರ ಆರೋಗ್ಯದಲ್ಲಿ ದೊಡ್ಡ ಸಮಸ್ಯೆಯೇನೂ ಕಾಣಿಸಿಕೊಂಡಿಲ್ಲ. ವರದಿಯನ್ನು ಆಧರಿಸಿ ಚಿಕಿತ್ಸೆ ಶುರು ಮಾಡುತ್ತೇವೆ ಎಂದು ತಿಳಿಸಿದ್ದಾರೆ. 

ಇನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಯಶೋದಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಮುಖ್ಯಮಂತ್ರಿ ಕಚೇರಿ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. ಎಡಗೈಯಲ್ಲಿ ತೀವ್ರ ನೋವಿರುವ ಕಾರಣ ವೈದ್ಯರು ಹೃದಯಕ್ಕೆ ಸಂಬಂಧಪಟ್ಟ ಕೆಲವು ಪರೀಕ್ಷೆಗಳನ್ನೂ ನಡೆಸುತ್ತಿದ್ದಾರೆ. ಕೆಸಿಆರ್ ಜತೆ ಅವರ ಕುಟುಂಬದವರು ಇದ್ದಾರೆ. ಇಂದು ಅವರು ಯಾದಾದ್ರಿ ದೇವಾಲಯಕ್ಕೆ ಭೇಟಿ ಕೊಡಬೇಕಿತ್ತು. ಆದರೆ ಸ್ವಲ್ಪ ಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಅದನ್ನು ರದ್ದುಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

68 ವರ್ಷದ ಕೆಸಿಆರ್​ ಅವರು ಕಳೆದ ಕೆಲವು ದಿನಗಳಿಂದ ಒಂದರ ಬೆನ್ನಿಗೆ ಒಂದು ಕೆಲಸದಲ್ಲಿ ತೊಡಗಿಕೊಂಡಿದ್ದರು. ಫೆಡರಲ್​ ಫ್ರಂಟ್​ ರಚನೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಂಬೈ, ದೆಹಲಿ, ಜಾರ್ಖಂಡಗಳಿಗೆ ಪ್ರವಾಸ ಮಾಡಿದ್ದರು. ದೆಹಲಿಗೆ ಹೋಗುವುದಕ್ಕೆ ಮೊದಲು ಕಣ್ಣಿನ ತಪಾಸಣೆಗೆ ಒಳಗಾಗಿದ್ದರು. ಹೀಗೆ ಒಂದರ ಬೆನ್ನಿಗೆ ಮತ್ತೊಂದು ಪ್ರವಾಸ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಆರೋಗ್ಯದಲ್ಲೂ ಏರುಪೇರಾಗಿದೆ. ಹೆಚ್ಚಿನ ಒತ್ತಡದಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದೂ ಹೇಳಲಾಗಿದೆ.

KCR Hospital

ಆಸ್ಪತ್ರೆಗೆ ಧಾವಿಸಿದ ಕೆಸಿಆರ್

ಇದನ್ನೂ ಓದಿ: ನಿಮ್ಮ ನಾಯಕರು ಯಾರು ಸ್ವಾಮಿ? ಕರ್ನಾಟಕದಲ್ಲಿ ಮಾತ್ರ ಸ್ವಲ್ಪ ಉಸಿರಾಡುತ್ತಿದ್ದೀರಿ: ಸಿದ್ದರಾಮಯ್ಯಗೆ ಯಡಿಯೂರಪ್ಪ ಟಾಂಗ್

Published On - 12:55 pm, Fri, 11 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ