AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ ಆಸ್ಪತ್ರೆಗೆ ದಾಖಲು; ಕೆಲವೇ ಹೊತ್ತಲ್ಲಿ ಎಂಆರ್​ಐ, ಸಿಟಿ ಸ್ಕ್ಯಾನ್​

68 ವರ್ಷದ ಕೆಸಿಆರ್​ ಅವರು ಕಳೆದ ಕೆಲವು ದಿನಗಳಿಂದ ಒಂದರ ಬೆನ್ನಿಗೆ ಒಂದು ಕೆಲಸದಲ್ಲಿ ತೊಡಗಿಕೊಂಡಿದ್ದರು. ಫೆಡರಲ್​ ಫ್ರಂಟ್​ ರಚನೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಂಬೈ, ದೆಹಲಿ, ಜಾರ್ಖಂಡಗಳಿಗೆ ಪ್ರವಾಸ ಮಾಡಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ ಆಸ್ಪತ್ರೆಗೆ ದಾಖಲು; ಕೆಲವೇ ಹೊತ್ತಲ್ಲಿ ಎಂಆರ್​ಐ, ಸಿಟಿ ಸ್ಕ್ಯಾನ್​
ಆಸ್ಪತ್ರೆಗೆ ದಾಖಲಾದ ಸಿಎಂ ಕೆಸಿಆರ್​
TV9 Web
| Edited By: |

Updated on:Mar 11, 2022 | 1:07 PM

Share

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್ (K Chandrashekhar Rao)​ ಅವರ ಎಡಗೈನಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್​ನ ಯಶೋದಾ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ. ಕೆಸಿಆರ್​ ಹೃದಯದಲ್ಲಿ ಯಾವುದೇ ಬ್ಲಾಕ್​ಗಳು ಕಂಡು ಬಂದಿಲ್ಲ. ಸಿಎಂಗೆ ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್​ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನೂ ಮಾಡಲಾಗುವುದು ಎಂದು ಕೆಸಿಆರ್​ ವೈಯಕ್ತಿಕ ಡಾಕ್ಟರ್​ ಎಂ.ವಿ.ರಾವ್ ತಿಳಿಸಿದ್ದಾರೆ. ಪ್ರತಿವರ್ಷ ಫೆಬ್ರವರಿಯಲ್ಲಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ನಾವು ಎಲ್ಲ ರೀತಿಯ ಆರೋಗ್ಯ ತಪಾಸಣೆಯನ್ನೂ ಮಾಡುತ್ತೇವೆ. ಸದ್ಯ ಅವರ ಎಡ ಕೈ ಮತ್ತು ಕಾಲುಗಳಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಹೀಗಾಗಿ ಇನ್ನಷ್ಟು ತಪಾಸಣೆಯ ಅಗತ್ಯವಿದೆ. ಸದ್ಯ ಅವರ ಆರೋಗ್ಯದಲ್ಲಿ ದೊಡ್ಡ ಸಮಸ್ಯೆಯೇನೂ ಕಾಣಿಸಿಕೊಂಡಿಲ್ಲ. ವರದಿಯನ್ನು ಆಧರಿಸಿ ಚಿಕಿತ್ಸೆ ಶುರು ಮಾಡುತ್ತೇವೆ ಎಂದು ತಿಳಿಸಿದ್ದಾರೆ. 

ಇನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಯಶೋದಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಮುಖ್ಯಮಂತ್ರಿ ಕಚೇರಿ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. ಎಡಗೈಯಲ್ಲಿ ತೀವ್ರ ನೋವಿರುವ ಕಾರಣ ವೈದ್ಯರು ಹೃದಯಕ್ಕೆ ಸಂಬಂಧಪಟ್ಟ ಕೆಲವು ಪರೀಕ್ಷೆಗಳನ್ನೂ ನಡೆಸುತ್ತಿದ್ದಾರೆ. ಕೆಸಿಆರ್ ಜತೆ ಅವರ ಕುಟುಂಬದವರು ಇದ್ದಾರೆ. ಇಂದು ಅವರು ಯಾದಾದ್ರಿ ದೇವಾಲಯಕ್ಕೆ ಭೇಟಿ ಕೊಡಬೇಕಿತ್ತು. ಆದರೆ ಸ್ವಲ್ಪ ಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಅದನ್ನು ರದ್ದುಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

68 ವರ್ಷದ ಕೆಸಿಆರ್​ ಅವರು ಕಳೆದ ಕೆಲವು ದಿನಗಳಿಂದ ಒಂದರ ಬೆನ್ನಿಗೆ ಒಂದು ಕೆಲಸದಲ್ಲಿ ತೊಡಗಿಕೊಂಡಿದ್ದರು. ಫೆಡರಲ್​ ಫ್ರಂಟ್​ ರಚನೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಂಬೈ, ದೆಹಲಿ, ಜಾರ್ಖಂಡಗಳಿಗೆ ಪ್ರವಾಸ ಮಾಡಿದ್ದರು. ದೆಹಲಿಗೆ ಹೋಗುವುದಕ್ಕೆ ಮೊದಲು ಕಣ್ಣಿನ ತಪಾಸಣೆಗೆ ಒಳಗಾಗಿದ್ದರು. ಹೀಗೆ ಒಂದರ ಬೆನ್ನಿಗೆ ಮತ್ತೊಂದು ಪ್ರವಾಸ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಆರೋಗ್ಯದಲ್ಲೂ ಏರುಪೇರಾಗಿದೆ. ಹೆಚ್ಚಿನ ಒತ್ತಡದಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದೂ ಹೇಳಲಾಗಿದೆ.

KCR Hospital

ಆಸ್ಪತ್ರೆಗೆ ಧಾವಿಸಿದ ಕೆಸಿಆರ್

ಇದನ್ನೂ ಓದಿ: ನಿಮ್ಮ ನಾಯಕರು ಯಾರು ಸ್ವಾಮಿ? ಕರ್ನಾಟಕದಲ್ಲಿ ಮಾತ್ರ ಸ್ವಲ್ಪ ಉಸಿರಾಡುತ್ತಿದ್ದೀರಿ: ಸಿದ್ದರಾಮಯ್ಯಗೆ ಯಡಿಯೂರಪ್ಪ ಟಾಂಗ್

Published On - 12:55 pm, Fri, 11 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ