ತೆಲಂಗಾಣ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿಯ ಮನೆಗೆ ಬೆಂಕಿ

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ, ತೆಲಂಗಾಣದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.

ತೆಲಂಗಾಣ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿಯ ಮನೆಗೆ ಬೆಂಕಿ
ಮನೆ ಬೆಂಕಿImage Credit source: India Today
Follow us
|

Updated on: Sep 30, 2024 | 8:22 AM

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ, ತೆಲಂಗಾಣದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯು ಹುಡುಗಿಯ ಕುಟುಂಬ ಮತ್ತು ಸಂಬಂಧಿಕರಲ್ಲಿ ಆಕ್ರೋಶವನ್ನು ಉಂಟುಮಾಡಿತು, ಅವರು ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಪೊಲೀಸರ ಉಪಸ್ಥಿತಿಯ ಹೊರತಾಗಿಯೂ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು ಆರೋಪಿಯ ಮನೆಯನ್ನು ಸುಟ್ಟುಹಾಕಿದರು. ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಲು ಮತ್ತು ಶಾಂತಿ ಪುನಃಸ್ಥಾಪಿಸುವಲ್ಲಿ ಯಶಸ್ವಿಯಾದರು.

ಸಿದ್ದಿಪೇಟೆ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿ ಕಾಪಾಡಿದರು. ಇದೇ ವೇಳೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಮತ್ತಷ್ಟು ಓದಿ: ಬಂಗಾಳದಲ್ಲಿ 3 ವರ್ಷದ ಬಾಲಕಿ ಮೇಲೆ ಬಿಜೆಪಿ ನಾಯಕನ ತಂದೆಯಿಂದ ಅತ್ಯಾಚಾರ; ಟಿಎಂಸಿ ಪ್ರತಿಭಟನೆ

ತಾಯಿಯ ಮೇಲೆ ಅತ್ಯಾಚಾರವೆಸಗಿ ತನ್ನ ಹೆಂಡತಿಯಾಗಿರ್ತೀಯಾ ಎಂದು ಕೇಳಿದ್ದ ನೀಚ ಮಗ ಪತಿಯನ್ನು ಕಳೆದುಕೊಂಡು ಒಂಟಿಯಾಗಿದ್ದ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದ ನೀಚ ಮಗ ನನಗೆ ನೀನು ಹೆಂಡತಿಯಾಗಿರ್ತೀಯಾ ಎಂದು ಕೇಳಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ನಡೆದಿದೆ. ತಾಯಿಯ ಮೇಲೆ ಅತ್ಯಾಚಾರವೆಸಗಿದ್ದ 36 ವರ್ಷ ಮಗನಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು, ಜತೆಗೆ 51, 000 ರೂ. ದಂಡವನ್ನು ಕೂಡ ವಿಧಿಸಿತ್ತು

ಕಳೆದ ವರ್ಷ ಜನವರಿ 16 ರಂದು ಈ ಘಟನೆ ಸಂಭವಿಸಿದೆ, 60 ವರ್ಷದ ಮಹಿಳೆ ಮತ್ತು ಆರೋಪಿ ತಮ್ಮ ಮನೆಯ ಸಮೀಪವಿರುವ ಜಮೀನಿಗೆ ಪ್ರಾಣಿಗಳಿಂದ ಮೇವು ತರಲು ಹೋಗಿದ್ದರು. ಆಕೆ ಮೇವು ಕಡಿಯುತ್ತಿದ್ದಾಗ ಮಗ ಆಕೆಯ ಮೇಲೆ ದಾಳಿ ಮಾಡಿ ಬಾಯಿಗೆ ಬಟ್ಟೆ ತುಂಬಿಸಿ, ಅತ್ಯಾಚಾರವೆಸಗಿದ್ದ.

ಘಟನೆಯ ನಂತರ ಅಬಿದ್ ತನ್ನ ತಾಯಿಗೆ ತನ್ನ ಹೆಂಡತಿಯಂತೆ ಬದುಕಬೇಕೆಂದು ಬಯಸಿದ್ದಾಗಿ ಹೇಳಿದ್ದಾನೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದ್ದಾರೆ. ಅಲ್ಲದೇ ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ