AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಒಬ್ಬಂಟಿಯಾಗಿಲ್ಲ ಎಂದ ತೆಲಂಗಾಣ ಸಿಎಂ ಕೆಸಿಆರ್ ; 2024ರ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಬೆಂಬಲ?

ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್, ನಾವು ಯಾರೊಂದಿಗೂ ಇಲ್ಲ ಮತ್ತು ನಾವು ಯಾರೊಂದಿಗೂ ಇರಲು ಬಯಸುವುದಿಲ್ಲ. ನಾವು ಒಬ್ಬಂಟಿಯಾಗಿಲ್ಲ, ನಮಗೆ ಸ್ನೇಹಿತರಿದ್ದಾರೆ ಎಂದು ಹೇಳಿದ್ದಾರೆ.

ನಾವು ಒಬ್ಬಂಟಿಯಾಗಿಲ್ಲ ಎಂದ ತೆಲಂಗಾಣ ಸಿಎಂ ಕೆಸಿಆರ್ ; 2024ರ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಬೆಂಬಲ?
ಕೆ ಚಂದ್ರಶೇಖರ ರಾವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 02, 2023 | 4:33 PM

Share

ಹೈದರಾಬಾದ್ ಆಗಸ್ಟ್ 02: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ, ಭಾರತ್ ರಾಷ್ಟ್ರ ಸಮಿತಿ (BRS) ಬಿಜೆಪಿ ನೇತೃತ್ವದ  ಮೈತ್ರಿ ಅಥವಾ ಪ್ರತಿಪಕ್ಷಗಳು ಹೊಸದಾಗಿ ರಚಿಸಲಾದ ಐಎನ್‌ಡಿಐಎ (I.N.D.I.A) ಮೈತ್ರಿಕೂಟವನ್ನು ಬೆಂಬಲಿಸುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (K Chandrashekar Rao) ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್, ನಾವು ಯಾರೊಂದಿಗೂ ಇಲ್ಲ ಮತ್ತು ನಾವು ಯಾರೊಂದಿಗೂ ಇರಲು ಬಯಸುವುದಿಲ್ಲ. ನಾವು ಒಬ್ಬಂಟಿಯಾಗಿಲ್ಲ, ನಮಗೆ ಸ್ನೇಹಿತರಿದ್ದಾರೆ ಎಂದು ಹೇಳಿದ್ದಾರೆ. ಹೊಸ ಮೈತ್ರಿಕೂಟ ಬಗ್ಗೆ ಟೀಕಿಸಿದ ಕೆಸಿಆರ್, ಇಂಡಿಯಾ (ಮೈತ್ರಿಕೂಟ) ಬಿಜೆಪಿಗಿಂತ ಮೊದಲು ಅಧಿಕಾರದಲ್ಲಿದ್ದರು. ಅವರು ಯಾವುದೇ ಬದಲಾವಣೆಯನ್ನು ತರಲು ವಿಫಲರಾಗಿದ್ದಾರೆ ಎಂದು  ಹೇಳಿದ್ದಾರೆ.

ಎರಡು ಬಿಜೆಪಿಯೇತರ ಆಡಳಿತ ಪಕ್ಷಗಳಾದ ಬಿಜು ಜನತಾ ದಳ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷವು ದೆಹಲಿ ಸೇವಾ ಮಸೂದೆಗೆ ಕೇಂದ್ರಕ್ಕೆ ತಮ್ಮ ಬೆಂಬಲವನ್ನು ನೀಡುವುದರ ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ I.N.D.I.A ಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯವನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸಿಎಂ ಈ ಹೇಳಿಕೆ ನೀಡಿದ್ದಾರೆ.

ದೆಹಲಿ ಸೇವಾ ಮಸೂದೆ ವಿರುದ್ಧ ಬಿಆರ್​​ಎಸ್

ದೆಹಲಿ ಸೇವೆಗಳ ಮೇಲಿನ ಸುಗ್ರೀವಾಜ್ಞೆಯನ್ನು ಬದಲಿಸುವ ವಿವಾದಾತ್ಮಕ ಮಸೂದೆಯ ವಿರುದ್ಧ ಮತ ಚಲಾಯಿಸಲು ಬಿಆರ್​​ಎಸ್ ಎಲ್ಲಾ ರಾಜ್ಯಸಭಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮೇಲ್ಮನೆಯಲ್ಲಿ ಬಿಆರ್‌ಎಸ್ ಏಳು ಸಂಸದರನ್ನು ಹೊಂದಿದೆ. ಆದಾಗ್ಯೂ, ಬಿಆರ್‌ಎಸ್ ಮೈತ್ರಿ ಕದನದ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ. ಇದುವರೆಗೆ ನಡೆದ I.N.D.I.A ಮೈತ್ರಿಕೂಟದ ಎರಡು ರಾಷ್ಟ್ರೀಯ ಮಟ್ಟದ ಸಭೆಗಳಲ್ಲಿ ಪಕ್ಷವು ಭಾಗವಹಿಸಿಲ್ಲ. ಜುಲೈ ಮಧ್ಯದಲ್ಲಿ ನವದೆಹಲಿಯಲ್ಲಿ ನಡೆದ ಬಿಜೆಪಿ ನೇತೃತ್ವದ 38 ಪಕ್ಷಗಳ ಮೆಗಾ ಮೀಟ್‌ನಲ್ಲಿಯೂ ಇದು ಭಾಗಿಯಾಗಿಲ್ಲ.

ಆದರೆ I.N.D.I.A ರಚನೆಯಾದ ನಂತರ ತೆಲಂಗಾಣ ಸಿಎಂ ಇದೇ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. ಈ ಹಿಂದೆ, ವಿರೋಧ ಪಕ್ಷದ ಮೈತ್ರಿಕೂಟ ಅಥವಾ ಎನ್‌ಡಿಎ ಪ್ರಯತ್ನಗಳಿಗೆ ತಾವು ಪಕ್ಷವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಕೇಂದ್ರದಲ್ಲಿ ಮತ್ತೊಂದು ಪಕ್ಷವನ್ನು ಅಧಿಕಾರಕ್ಕೆ ತರಲು ಒಂದು ಪಕ್ಷವನ್ನು ಕೆಳಗಿಳಿಸಲು ಬಿಆರ್‌ಎಸ್‌ಗೆ ಆಸಕ್ತಿ ಇಲ್ಲ ಎಂದಿದ್ದರು ಅವರು.

ಇದನ್ನೂ ಓದಿ: ನುಹ್ ಹಿಂಸಾಚಾರ ಖಂಡಿಸಿ ಪ್ರತಿಭಟನೆ: ಉತ್ತರ ಪ್ರದೇಶ, ಹರ್ಯಾಣ ಮತ್ತು ದೆಹಲಿಗೆ ಸುಪ್ರೀಂ ನೋಟಿಸ್; ಆಗಸ್ಟ್ 4ಕ್ಕೆ ಮುಂದಿನ ವಿಚಾರಣೆ

ಕೆಸಿಆರ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಆರ್‌ಎಸ್, ಹಿಂದಿನ ಟಿಆರ್‌ಎಸ್ ಅಥವಾ ತೆಲಂಗಾಣ ರಾಷ್ಟ್ರ ಸಮಿತಿಯ ಪುನರುಜ್ಜೀವನದೊಂದಿಗೆ ರಾಷ್ಟ್ರೀಯ ರಾಜಕೀಯಕ್ಕೆ ಪ್ರವೇಶ ಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​