‘ರೈತರು ಸರ್ಕಾರ ಉರುಳಿಸಬಹುದು’: ಪ್ರಧಾನಿ ಮೋದಿಗೆ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಎಚ್ಚರಿಕೆ

| Updated By: ರಶ್ಮಿ ಕಲ್ಲಕಟ್ಟ

Updated on: Apr 11, 2022 | 3:43 PM

ಕೇಂದ್ರವು ರಾಜ್ಯದಿಂದ ಭತ್ತ ಖರೀದಿಸಿದರೆ ಪ್ರತಿಕ್ರಿಯಿಸಬೇಕು. ಸರಕಾರ ಸ್ಪಂದಿಸದಿದ್ದಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಸಿಆರ್ ಹೇಳಿದರು.

ರೈತರು ಸರ್ಕಾರ ಉರುಳಿಸಬಹುದು: ಪ್ರಧಾನಿ ಮೋದಿಗೆ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಎಚ್ಚರಿಕೆ
ತೆಲಂಗಾಣ ಸಿಎಂ ಕೆಸಿಆರ್
Follow us on

ದೆಹಲಿ: ‘ಒಂದು ರಾಷ್ಟ್ರ-ಒಂದು ಆಹಾರಧಾನ್ಯ ಖರೀದಿ ನೀತಿ’ ಜಾರಿಗೊಳಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಟಿಆರ್‌ಎಸ್ (TRS)  ನಾಯಕರೊಂದಿಗೆ ಧರಣಿ ನಡೆಸುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (KCR) ಸೋಮವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ 24 ಗಂಟೆಗಳ ಗಡುವು ನೀಡಿದರು. ಕೇಂದ್ರವು ರಾಜ್ಯದಿಂದ ಭತ್ತ ಖರೀದಿಸಿದರೆ ಪ್ರತಿಕ್ರಿಯಿಸಬೇಕು. ಸರಕಾರ ಸ್ಪಂದಿಸದಿದ್ದಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಸಿಆರ್ ಹೇಳಿದರು. ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಮೋದಿಗೆ ಎಚ್ಚರಿಕೆ ನೀಡಿದರು. “ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರ ಅತ್ತರೆ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಕೆಸಿಆರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.  “ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರ ಅತ್ತರೆ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಕೆಸಿಆರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತಿದೆ. ಹೊಸ ಕೃಷಿ ನೀತಿಯನ್ನು ರೂಪಿಸುವಂತೆ ನಾನು ಪ್ರಧಾನಿಯವರಿಗೆ ಹೇಳುತ್ತೇೆನೆ, ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ನೀವು ಅದನ್ನು ಮಾಡದಿದ್ದರೆ ನಿಮ್ಮನ್ನು ಕೆಳಗಿಳಿಸಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ. ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಪಡೆಯುವ ಹಕ್ಕಿದೆ ಎಂದು ಕೆಸಿಆರ್ ಹೇಳಿದರು.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಾಬಿ ಋತುವಿನಲ್ಲಿ ಕುಚ್ಚಲಕ್ಕಿ ಖರೀದಿಸಲು ತೆಲಂಗಾಣ ಮಾಡಿದ ಮನವಿಯನ್ನು ಕೇಂದ್ರ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದೆ ಮತ್ತು ದೆಹಲಿ ತಲುಪಿದೆ. ಭಾರತದಲ್ಲಿ ಹೆಚ್ಚಾಗಿ ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಮತ್ತು ಕುಚ್ಚಲಕ್ಕಿ ಅಲ್ಲ ಎಂದು ಸರ್ಕಾರ ಹೇಳಿದೆ.

” 24 ಗಂಟೆಗಳ ಒಳಗೆ ಭತ್ತ ಸಂಗ್ರಹಣೆಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಮೋದಿಜಿ ಮತ್ತು (ಪಿಯೂಷ್) ಗೋಯಲ್ ಜೀ ಅವರಲ್ಲಿ ಕೈ ಜೋಡಿಸಿ ಒತ್ತಾಯಿಸುತ್ತೇನೆ. ನಂತರ ನಾವು ನಿರ್ಧರಿಸುತ್ತೇವೆ” ಎಂದು ರಾವ್ ಹೇಳಿದರು.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ  ಧರಣಿಯಲ್ಲಿ ಕೆಸಿಆರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. 2014 ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್ಯಾಲಿ ಇದಾಗಿದೆ.

ಏತನ್ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ. ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆಸಿಆರ್, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಏಕೆ ಈ ಧರಣಿ? ಇದು ರಾಜಕೀಯಕ್ಕಾಗಿಯೇ? ಅಥವಾ ರೈತರಿಗಾಗಿಯೇ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಕೆಳಗಿಳಿಯಿರಿ” ಎಂದು ಬರೆಯಲಾಗಿದೆ.
‘ಒಂದು ರಾಷ್ಟ್ರ-ಒಂದು ಆಹಾರಧಾನ್ಯ ಸಂಗ್ರಹ ನೀತಿ’ ಎಂಬ ತನ್ನ ಬೇಡಿಕೆಯನ್ನು ರಾಷ್ಟ್ರವ್ಯಾಪಿ ವಿಷಯವನ್ನಾಗಿ ಮಾಡಿರುವ ಟಿಆರ್‌ಎಸ್, ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಇತ್ತೀಚೆಗೆ ಟಿಆರ್​​ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದರು. ಮಾರ್ಚ್ 24 ರಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ತೆಲಂಗಾಣದ ರೈತರಿಗೆ ವಿವಿಧ ರಾಜ್ಯಗಳ ರೈತರಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಭರವಸೆ ನೀಡಿದರು ಮತ್ತು ತೆಲಂಗಾಣದ ಕೆಲವು ರಾಜಕಾರಣಿಗಳು ರಾಜ್ಯದ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Ram Navami: ಈ ನಾಲ್ಕು ರಾಜ್ಯಗಳಲ್ಲಿ ರಾಮನವಮಿ ಮೆರವಣಿಗೆ ವೇಳೆ ಕೋಮು ಘರ್ಷಣೆ; ಗುಜರಾತ್​ನಲ್ಲಿ ವ್ಯಕ್ತಿಯೊಬ್ಬ ಸಾವು

Published On - 3:01 pm, Mon, 11 April 22