Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಸ್​.ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿ, ನಮ್ಮ ರಾಜ್ಯದಲ್ಲಿ ಹೀಗೆಲ್ಲ ಆಗೋದಿಲ್ಲವೆಂದ ತೆಲಂಗಾಣ ಸಿಎಂ; ಹಿಜಾಬ್​ ವಿವಾದದ ಬಗ್ಗೆಯೂ ಟೀಕೆ

ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ್ದ ಕೆಸಿಆರ್​, ಹಿಜಾಬ್​ ವಿವಾದವನ್ನು ಎತ್ತಾಡುವ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.  ಯಾರೇನು ಉಡುಪು ಧರಿಸುತ್ತಾರೆ ಎಂಬುದಕ್ಕೂ, ಸರ್ಕಾರಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದರು.

ಕೆ.ಎಸ್​.ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿ, ನಮ್ಮ ರಾಜ್ಯದಲ್ಲಿ ಹೀಗೆಲ್ಲ ಆಗೋದಿಲ್ಲವೆಂದ ತೆಲಂಗಾಣ ಸಿಎಂ; ಹಿಜಾಬ್​ ವಿವಾದದ ಬಗ್ಗೆಯೂ ಟೀಕೆ
ಕೆ ಚಂದ್ರಶೇಖರ್ ರಾವ್
Follow us
TV9 Web
| Updated By: Lakshmi Hegde

Updated on:Apr 28, 2022 | 1:13 PM

ಹೈದರಾಬಾದ್​: ಇತ್ತೀಚೆಗೆ ಕರ್ನಾಟಕದಲ್ಲಿ ಬಿಜೆಪಿ ನಾಯಕ ಈಶ್ವರಪ್ಪ ತಮ್ಮ ಸಚಿವ ಸ್ಥಾನ ಕಳೆದುಕೊಂಡಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಈಶ್ವರಪ್ಪನವೇ ಕಾರಣ ಎಂಬ ಆರೋಪ ಕೇಳಿಬಂದಿದ್ದೇ ಅವರು ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣ. ಹೀಗೆ ಈಶ್ವರಪ್ಪನವರು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ವಿಚಾರದ ಬಗ್ಗೆ  ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಪ್ರತಿಕ್ರಿಯೆ ನೀಡಿದ್ದಾರೆ.  ಕರ್ನಾಟಕದಲ್ಲಿ ಇತ್ತೀಚೆಗೆ ಒಬ್ಬರು ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅದಕ್ಕೆ ಕಾರಣವೇನು ಎಂಬುದನ್ನೂ ನಾವು ನೋಡಿದ್ದೇವೆ. ಆದರೆ ಇಂಥ ಘಟನೆಗಳು ತೆಲಂಗಾಣದಲ್ಲಿ ಯಾವತ್ತಿಗೂ ನಡೆಯುವುದಿಲ್ಲ ಎಂದಿದ್ದಾರೆ. 

ಕೆ.ಸಿ.ಚಂದ್ರಶೇಖರ್ ರಾವ್​ ಅವರು ಏಪ್ರಿಲ್​ 27ರಂದು ನಡೆದ ಟಿಆರ್​ಎಸ್ ಸಂಸ್ಥಾಪನಾ ದಿನದ ಸಮಗ್ರ ಸಭೆಯಲ್ಲಿ ಈ ಮಾತುಗಳನ್ನಾಡಿದ್ದಾರೆ. ಅದಕ್ಕೂ ಪೂರ್ವ ಮಂಗಳವಾರ ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ್ದ ಕೆಸಿಆರ್​, ಹಿಜಾಬ್​ ವಿವಾದವನ್ನು ಎತ್ತಾಡುವ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.  ಯಾರೇನು ಉಡುಪು ಧರಿಸುತ್ತಾರೆ ಎಂಬುದಕ್ಕೂ, ಸರ್ಕಾರಕ್ಕೂ ಏನು ಸಂಬಂಧ? ಈ ಹಿಜಾಬ್​ ವಿವಾದ ಯಾಕೆ ಬೇಕು? ಈಗಾಗಲೇ ಉಂಟಾಗಿರುವ ಸಂಘರ್ಷ, ವಿವಾದದ ವಾತಾವರಣವನ್ನು ಇನ್ನಷ್ಟು ಉತ್ತೇಜಿಸುವುದ ಯಾಕೆ ಎಂದು ಪ್ರಶ್ನಿಸಿದ್ದರು. ಅಷ್ಟೇ ಅಲ್ಲ, ಭಾರತೀಯ ಜನತಾ ಪಾರ್ಟಿ ಸಮಾಜದ ಸೌಹಾರ್ದತೆ ಕದಡುತ್ತಿದೆ ಎಂದೂ ಆರೋಪಿಸಿದ್ದರು.

ಕರ್ನಾಟಕದಲ್ಲಿ ಈ ವರ್ಷದ ಜನವರಿಯಿಂದ ಪ್ರಾರಂಭವಾಗಿರುವ ಹಿಜಾಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಇಸ್ಲಾಂನಲ್ಲಿ ಹಿಜಾಬ್​ ಅತ್ಯಗತ್ಯ ಅಂಶವಲ್ಲ. ಶಿಕ್ಷಣ ಸಂಸ್ಥೆಗಳು ನಿಗದಿ ಪಡಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು ಹೈಕೋರ್ಟ್​ ತೀರ್ಪು ನೀಡಿದ್ದರೂ, ಇನ್ನೂ ಕೂಡ ಕೆಲವು ವಿದ್ಯಾರ್ಥಿಗಳು ಹಿಜಾಬ್​ಗಾಗಿ ಪರೀಕ್ಷೆಯನ್ನು ಬಿಟ್ಟು ಹೋಗುತ್ತಿದ್ದಾರೆ. ಈ ಹಿಜಾಬ್​​ನಿಂದ ಶುರುವಾದ ಗಲಾಟೆ ಹಲಾಲ್, ಹಿಂದು-ಮುಸ್ಲಿಂ ವ್ಯಾಪಾರ ನಿಷೇಧ ಇತ್ಯಾದಿ ವಿವಿಧ ಕೋಮು ಸಂಘರ್ಷದವರೆಗೆ ಬಂದು ನಿಂತಿದೆ.  ಇನ್ನು ರಾಷ್ಟ್ರಾದ್ಯಂತ ವಿವಿಧ ರಾಜ್ಯಗಳಲ್ಲಿ ಈ ಹಿಂದು-ಮುಸ್ಲಿಂ ಜಟಾಪಟಿ ನಡೆಯುತ್ತಿದೆ.

ಇದನ್ನೂ ಓದಿ: ಖಾರಿಫ್ ಋತುವಿನಲ್ಲಿ ರಸಗೊಬ್ಬರಕ್ಕೆ ₹60,939 ಕೋಟಿ ಸಬ್ಸಿಡಿ; ಕೇಂದ್ರ ಸಂಪುಟ ಸಭೆ ಒಪ್ಪಿಗೆ

Published On - 1:13 pm, Thu, 28 April 22

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ