AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಸ್​.ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿ, ನಮ್ಮ ರಾಜ್ಯದಲ್ಲಿ ಹೀಗೆಲ್ಲ ಆಗೋದಿಲ್ಲವೆಂದ ತೆಲಂಗಾಣ ಸಿಎಂ; ಹಿಜಾಬ್​ ವಿವಾದದ ಬಗ್ಗೆಯೂ ಟೀಕೆ

ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ್ದ ಕೆಸಿಆರ್​, ಹಿಜಾಬ್​ ವಿವಾದವನ್ನು ಎತ್ತಾಡುವ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.  ಯಾರೇನು ಉಡುಪು ಧರಿಸುತ್ತಾರೆ ಎಂಬುದಕ್ಕೂ, ಸರ್ಕಾರಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದರು.

ಕೆ.ಎಸ್​.ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿ, ನಮ್ಮ ರಾಜ್ಯದಲ್ಲಿ ಹೀಗೆಲ್ಲ ಆಗೋದಿಲ್ಲವೆಂದ ತೆಲಂಗಾಣ ಸಿಎಂ; ಹಿಜಾಬ್​ ವಿವಾದದ ಬಗ್ಗೆಯೂ ಟೀಕೆ
ಕೆ ಚಂದ್ರಶೇಖರ್ ರಾವ್
TV9 Web
| Edited By: |

Updated on:Apr 28, 2022 | 1:13 PM

Share

ಹೈದರಾಬಾದ್​: ಇತ್ತೀಚೆಗೆ ಕರ್ನಾಟಕದಲ್ಲಿ ಬಿಜೆಪಿ ನಾಯಕ ಈಶ್ವರಪ್ಪ ತಮ್ಮ ಸಚಿವ ಸ್ಥಾನ ಕಳೆದುಕೊಂಡಿದ್ದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಈಶ್ವರಪ್ಪನವೇ ಕಾರಣ ಎಂಬ ಆರೋಪ ಕೇಳಿಬಂದಿದ್ದೇ ಅವರು ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣ. ಹೀಗೆ ಈಶ್ವರಪ್ಪನವರು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ವಿಚಾರದ ಬಗ್ಗೆ  ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಪ್ರತಿಕ್ರಿಯೆ ನೀಡಿದ್ದಾರೆ.  ಕರ್ನಾಟಕದಲ್ಲಿ ಇತ್ತೀಚೆಗೆ ಒಬ್ಬರು ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅದಕ್ಕೆ ಕಾರಣವೇನು ಎಂಬುದನ್ನೂ ನಾವು ನೋಡಿದ್ದೇವೆ. ಆದರೆ ಇಂಥ ಘಟನೆಗಳು ತೆಲಂಗಾಣದಲ್ಲಿ ಯಾವತ್ತಿಗೂ ನಡೆಯುವುದಿಲ್ಲ ಎಂದಿದ್ದಾರೆ. 

ಕೆ.ಸಿ.ಚಂದ್ರಶೇಖರ್ ರಾವ್​ ಅವರು ಏಪ್ರಿಲ್​ 27ರಂದು ನಡೆದ ಟಿಆರ್​ಎಸ್ ಸಂಸ್ಥಾಪನಾ ದಿನದ ಸಮಗ್ರ ಸಭೆಯಲ್ಲಿ ಈ ಮಾತುಗಳನ್ನಾಡಿದ್ದಾರೆ. ಅದಕ್ಕೂ ಪೂರ್ವ ಮಂಗಳವಾರ ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ್ದ ಕೆಸಿಆರ್​, ಹಿಜಾಬ್​ ವಿವಾದವನ್ನು ಎತ್ತಾಡುವ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.  ಯಾರೇನು ಉಡುಪು ಧರಿಸುತ್ತಾರೆ ಎಂಬುದಕ್ಕೂ, ಸರ್ಕಾರಕ್ಕೂ ಏನು ಸಂಬಂಧ? ಈ ಹಿಜಾಬ್​ ವಿವಾದ ಯಾಕೆ ಬೇಕು? ಈಗಾಗಲೇ ಉಂಟಾಗಿರುವ ಸಂಘರ್ಷ, ವಿವಾದದ ವಾತಾವರಣವನ್ನು ಇನ್ನಷ್ಟು ಉತ್ತೇಜಿಸುವುದ ಯಾಕೆ ಎಂದು ಪ್ರಶ್ನಿಸಿದ್ದರು. ಅಷ್ಟೇ ಅಲ್ಲ, ಭಾರತೀಯ ಜನತಾ ಪಾರ್ಟಿ ಸಮಾಜದ ಸೌಹಾರ್ದತೆ ಕದಡುತ್ತಿದೆ ಎಂದೂ ಆರೋಪಿಸಿದ್ದರು.

ಕರ್ನಾಟಕದಲ್ಲಿ ಈ ವರ್ಷದ ಜನವರಿಯಿಂದ ಪ್ರಾರಂಭವಾಗಿರುವ ಹಿಜಾಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಇಸ್ಲಾಂನಲ್ಲಿ ಹಿಜಾಬ್​ ಅತ್ಯಗತ್ಯ ಅಂಶವಲ್ಲ. ಶಿಕ್ಷಣ ಸಂಸ್ಥೆಗಳು ನಿಗದಿ ಪಡಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು ಹೈಕೋರ್ಟ್​ ತೀರ್ಪು ನೀಡಿದ್ದರೂ, ಇನ್ನೂ ಕೂಡ ಕೆಲವು ವಿದ್ಯಾರ್ಥಿಗಳು ಹಿಜಾಬ್​ಗಾಗಿ ಪರೀಕ್ಷೆಯನ್ನು ಬಿಟ್ಟು ಹೋಗುತ್ತಿದ್ದಾರೆ. ಈ ಹಿಜಾಬ್​​ನಿಂದ ಶುರುವಾದ ಗಲಾಟೆ ಹಲಾಲ್, ಹಿಂದು-ಮುಸ್ಲಿಂ ವ್ಯಾಪಾರ ನಿಷೇಧ ಇತ್ಯಾದಿ ವಿವಿಧ ಕೋಮು ಸಂಘರ್ಷದವರೆಗೆ ಬಂದು ನಿಂತಿದೆ.  ಇನ್ನು ರಾಷ್ಟ್ರಾದ್ಯಂತ ವಿವಿಧ ರಾಜ್ಯಗಳಲ್ಲಿ ಈ ಹಿಂದು-ಮುಸ್ಲಿಂ ಜಟಾಪಟಿ ನಡೆಯುತ್ತಿದೆ.

ಇದನ್ನೂ ಓದಿ: ಖಾರಿಫ್ ಋತುವಿನಲ್ಲಿ ರಸಗೊಬ್ಬರಕ್ಕೆ ₹60,939 ಕೋಟಿ ಸಬ್ಸಿಡಿ; ಕೇಂದ್ರ ಸಂಪುಟ ಸಭೆ ಒಪ್ಪಿಗೆ

Published On - 1:13 pm, Thu, 28 April 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ