AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ, ಭುಗಿಲೆದ್ದ ರಾಜಕೀಯ ವಿವಾದ

Video: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ, ಭುಗಿಲೆದ್ದ ರಾಜಕೀಯ ವಿವಾದ

ನಯನಾ ರಾಜೀವ್
|

Updated on: Dec 03, 2025 | 8:21 AM

Share

ಹಿಂದೂ ದೇವತೆಗಳ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೀಡಿರುವ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮೂರು ಕೋಟಿ ಹಿಂದೂ ದೇವತೆಗಳಿದ್ದಾರೆ, ಪ್ರತಿಯೊಂದು ಸಂದರ್ಭಕ್ಕೂ ಒಬ್ಬ ದೇವರು ಎಂದು ಹಗುರವಾಗಿ ಮಾತನಾಡಿದ್ದರು. ಹಿಂದೂಗಳು ಎಷ್ಟು ದೇವರುಗಳನ್ನು ನಂಬುತ್ತಾರೆ? ಮೂರು ಕೋಟಿ? ಇಷ್ಟೊಂದು ದೇವರುಗಳು ಏಕೆ? ಅವಿವಾಹಿತರು ಹನುಮಂತನನ್ನು ದೇವರಾಗಿ ನಂಬುತ್ತಾರೆ. ಎರಡು ಬಾರಿ ಮದುವೆಯಾಗುವವರಿಗೆ ಬೇರೆ ದೇವರು ಇರುತ್ತಾರೆ.

ಹೈದರಾಬಾದ್, ಡಿಸೆಂಬರ್ 03: ಹಿಂದೂ ದೇವತೆಗಳ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೀಡಿರುವ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮೂರು ಕೋಟಿ ಹಿಂದೂ ದೇವತೆಗಳಿದ್ದಾರೆ, ಪ್ರತಿಯೊಂದು ಸಂದರ್ಭಕ್ಕೂ ಒಬ್ಬ ದೇವರು ಎಂದು ಹಗುರವಾಗಿ ಮಾತನಾಡಿದ್ದರು. ಹಿಂದೂಗಳು ಎಷ್ಟು ದೇವರುಗಳನ್ನು ನಂಬುತ್ತಾರೆ? ಮೂರು ಕೋಟಿ? ಇಷ್ಟೊಂದು ದೇವರುಗಳು ಏಕೆ? ಅವಿವಾಹಿತರು ಹನುಮಂತನನ್ನು ದೇವರಾಗಿ ನಂಬುತ್ತಾರೆ. ಎರಡು ಬಾರಿ ಮದುವೆಯಾಗುವವರಿಗೆ ಬೇರೆ ದೇವರು ಇರುತ್ತಾರೆ.

ಮದ್ಯಪಾನ ಮಾಡುವವರಿಗೆ ಬೇರೆ ದೇವರು ಇರುತ್ತಾರೆ. ಕೋಳಿ ಬಲಿ ನೀಡುವವರಿಗೆ ಬೇರೆ ದೇವರು ಇರುತ್ತಾರೆ. ಬೇಳೆ ಮತ್ತು ಅನ್ನ ತಿನ್ನುವವರಿಗೆ ಬೇರೆ ದೇವರು ಇರುತ್ತಾರೆ. ಪ್ರತಿಯೊಂದು ಗುಂಪಿಗೂ ತನ್ನದೇ ಆದ ದೇವರು ಇರುತ್ತದೆ ಎಂದು ಹೇಳಿದ್ದರು.ದೇವರು ದೇವಾಲಯದಲ್ಲಿ ವಾಸಿಸಬೇಕು, ಮತ್ತು ನಂಬಿಕೆ ಮನುಷ್ಯನ ಹೃದಯದಲ್ಲಿ ಇರಬೇಕು. ಅಂತಹ ಜನರು ನಿಜವಾದ ಹಿಂದೂಗಳು. ಆದರೆ ಬಿಜೆಪಿ ನಾಯಕರು ಮತ ಯಾಚಿಸಲು ಬೀದಿಗಳಲ್ಲಿ ದೇವರುಗಳ ಚಿತ್ರಗಳನ್ನು ಹಾಕುತ್ತಾರೆ ಎಂದು ಈ ಮೊದಲು ರೇವಂತ್ ರೆಡ್ಡಿ ಹೇಳಿಕೆ ನೀಡಿದ್ದರು.

ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾಡಿದ ವಿವಾದಾತ್ಮಕ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಬಿಆರ್‌ಎಸ್ ತಕ್ಷಣದ ಮತ್ತು ತೀಕ್ಷ್ಣವಾಗಿ ಖಂಡಿಸಿವೆ. ಅವರು ಹಿಂದೂ ಭಾವನೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿಯ ವಿರುದ್ಧ ವಾಗ್ದಾಳಿ ನಡೆಸುತ್ತಾ, ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಮಾಜಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ಕಟುವಾದ ಹೇಳಿಕೆಯನ್ನು ನೀಡಿ, ಕಾಂಗ್ರೆಸ್ ಪಕ್ಷವು ಹಿಂದೂಗಳ ವಿರುದ್ಧ ಆಳವಾದ ದ್ವೇಷವನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ ಜತೆಗೆ ರೇವಂತ್ ರೆಡ್ಡಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ