AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ‌ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ‌ ಕೆಲ ನಾಯಕರು ವಿಡಿಯೋ‌ ಶೇರ್ ಮಾಡಿದ್ದರು.

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ
ಅಮಿತ್ ಶಾ
ನಯನಾ ರಾಜೀವ್
|

Updated on: May 02, 2024 | 3:15 PM

Share

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ‌ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ‌ ಕೆಲ ನಾಯಕರು ವಿಡಿಯೋ‌ ಶೇರ್ ಮಾಡಿದ್ದರು. ಸಿಆರ್​ಪಿಸಿಯ ಸೆಕ್ಷನ್ 91ರ ಅಡಿಯಲ್ಲಿ ಸತೀಶ್​ ಮನ್ನೆ, ನವೀನ್ ಪೆಟ್ಟೆಮ್ ಮತ್ತು ಅಸ್ಮಾ ತಸ್ಲೀಮ್​ ವಿರುದ್ಧ ಪ್ರಕರಣ ದಾಖಲಾಗಿದೆ.

ಮೀಸಲಾತಿ ಹೇಳಿಕೆಯನ್ನು ತಿರುಚಿ ವಿಡಿಯೋ ಅಪ್ಲೋಡ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಈಗಾಗಲೇ ಸಮನ್ಸ್‌ ಜಾರಿ ಮಾಡಿದ್ದಾರೆ. ರೇವಂತ್‌ ರೆಡ್ಡಿ ಸೇರಿದಂತೆ ತೆಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿರುವ ರೇವಂತ್‌ ರೆಡ್ಡಿ, ಬಿಜೆಪಿ ಸಿಬಿಐ, ಜಾರಿ ನಿರ್ದೇಶನಾಲಯವನ್ನು ಬಳಸುತ್ತಿತ್ತು. ಈಗ ದೆಹಲಿ ಪೊಲೀಸರ ಮೂಲಕ ವಿರೋಧಿ ಪಕ್ಷಗಳನ್ನು ನಿಯಂತ್ರಿಸಲು ಮುಂದಾಗಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಟೀಕಿಸಿದರು.

ಮತ್ತಷ್ಟು ಓದಿ: ರಶ್ಮಿಕಾ ಡೀಪ್​ಫೇಕ್​ ವಿಡಿಯೋ: ಮುಖ್ಯ ಆರೋಪಿ ಬಂಧನ; ಕಿಡಿಗೇಡಿಯ ಹಿನ್ನೆಲೆ ಏನು ಗೊತ್ತಾ?

ದೂರಿನ ಬಳಿಕ ಪೊಲೀಸರು ಐಪಿಸಿ ಸೆಕ್ಷನ್ 153, 153 ಎ, 465, 469, 171 ಜಿ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವೀಡಿಯೊವನ್ನು ಅಪ್‌ಲೋಡ್ ಮಾಡಿದ ಮತ್ತು ಹಂಚಿಕೊಂಡ ಖಾತೆಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಎಕ್ಸ್ ಮತ್ತು ಫೇಸ್‌ಬುಕ್‌ಗೆ ನೋಟಿಸ್ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ