AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ‌ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ‌ ಕೆಲ ನಾಯಕರು ವಿಡಿಯೋ‌ ಶೇರ್ ಮಾಡಿದ್ದರು.

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ
ಅಮಿತ್ ಶಾ
ನಯನಾ ರಾಜೀವ್
|

Updated on: May 02, 2024 | 3:15 PM

Share

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ‌ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ‌ ಕೆಲ ನಾಯಕರು ವಿಡಿಯೋ‌ ಶೇರ್ ಮಾಡಿದ್ದರು. ಸಿಆರ್​ಪಿಸಿಯ ಸೆಕ್ಷನ್ 91ರ ಅಡಿಯಲ್ಲಿ ಸತೀಶ್​ ಮನ್ನೆ, ನವೀನ್ ಪೆಟ್ಟೆಮ್ ಮತ್ತು ಅಸ್ಮಾ ತಸ್ಲೀಮ್​ ವಿರುದ್ಧ ಪ್ರಕರಣ ದಾಖಲಾಗಿದೆ.

ಮೀಸಲಾತಿ ಹೇಳಿಕೆಯನ್ನು ತಿರುಚಿ ವಿಡಿಯೋ ಅಪ್ಲೋಡ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಈಗಾಗಲೇ ಸಮನ್ಸ್‌ ಜಾರಿ ಮಾಡಿದ್ದಾರೆ. ರೇವಂತ್‌ ರೆಡ್ಡಿ ಸೇರಿದಂತೆ ತೆಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿರುವ ರೇವಂತ್‌ ರೆಡ್ಡಿ, ಬಿಜೆಪಿ ಸಿಬಿಐ, ಜಾರಿ ನಿರ್ದೇಶನಾಲಯವನ್ನು ಬಳಸುತ್ತಿತ್ತು. ಈಗ ದೆಹಲಿ ಪೊಲೀಸರ ಮೂಲಕ ವಿರೋಧಿ ಪಕ್ಷಗಳನ್ನು ನಿಯಂತ್ರಿಸಲು ಮುಂದಾಗಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಟೀಕಿಸಿದರು.

ಮತ್ತಷ್ಟು ಓದಿ: ರಶ್ಮಿಕಾ ಡೀಪ್​ಫೇಕ್​ ವಿಡಿಯೋ: ಮುಖ್ಯ ಆರೋಪಿ ಬಂಧನ; ಕಿಡಿಗೇಡಿಯ ಹಿನ್ನೆಲೆ ಏನು ಗೊತ್ತಾ?

ದೂರಿನ ಬಳಿಕ ಪೊಲೀಸರು ಐಪಿಸಿ ಸೆಕ್ಷನ್ 153, 153 ಎ, 465, 469, 171 ಜಿ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವೀಡಿಯೊವನ್ನು ಅಪ್‌ಲೋಡ್ ಮಾಡಿದ ಮತ್ತು ಹಂಚಿಕೊಂಡ ಖಾತೆಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಎಕ್ಸ್ ಮತ್ತು ಫೇಸ್‌ಬುಕ್‌ಗೆ ನೋಟಿಸ್ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ