AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ‌ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ‌ ಕೆಲ ನಾಯಕರು ವಿಡಿಯೋ‌ ಶೇರ್ ಮಾಡಿದ್ದರು.

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್‌ ಘಟಕದ ಐಟಿ ಸೆಲ್‌ನ ಮೂವರ ಬಂಧನ
ಅಮಿತ್ ಶಾ
ನಯನಾ ರಾಜೀವ್
|

Updated on: May 02, 2024 | 3:15 PM

Share

ಕೇಂದ್ರ ಸಚಿವ ಅಮಿತ್​ ಶಾ(Amit Shah) ವಿರುದ್ಧದ ಫೇಕ್​ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್​(Congress)ನ ಐಟಿ ಸೆಲ್​ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ‌ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ‌ ಕೆಲ ನಾಯಕರು ವಿಡಿಯೋ‌ ಶೇರ್ ಮಾಡಿದ್ದರು. ಸಿಆರ್​ಪಿಸಿಯ ಸೆಕ್ಷನ್ 91ರ ಅಡಿಯಲ್ಲಿ ಸತೀಶ್​ ಮನ್ನೆ, ನವೀನ್ ಪೆಟ್ಟೆಮ್ ಮತ್ತು ಅಸ್ಮಾ ತಸ್ಲೀಮ್​ ವಿರುದ್ಧ ಪ್ರಕರಣ ದಾಖಲಾಗಿದೆ.

ಮೀಸಲಾತಿ ಹೇಳಿಕೆಯನ್ನು ತಿರುಚಿ ವಿಡಿಯೋ ಅಪ್ಲೋಡ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಈಗಾಗಲೇ ಸಮನ್ಸ್‌ ಜಾರಿ ಮಾಡಿದ್ದಾರೆ. ರೇವಂತ್‌ ರೆಡ್ಡಿ ಸೇರಿದಂತೆ ತೆಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿರುವ ರೇವಂತ್‌ ರೆಡ್ಡಿ, ಬಿಜೆಪಿ ಸಿಬಿಐ, ಜಾರಿ ನಿರ್ದೇಶನಾಲಯವನ್ನು ಬಳಸುತ್ತಿತ್ತು. ಈಗ ದೆಹಲಿ ಪೊಲೀಸರ ಮೂಲಕ ವಿರೋಧಿ ಪಕ್ಷಗಳನ್ನು ನಿಯಂತ್ರಿಸಲು ಮುಂದಾಗಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಟೀಕಿಸಿದರು.

ಮತ್ತಷ್ಟು ಓದಿ: ರಶ್ಮಿಕಾ ಡೀಪ್​ಫೇಕ್​ ವಿಡಿಯೋ: ಮುಖ್ಯ ಆರೋಪಿ ಬಂಧನ; ಕಿಡಿಗೇಡಿಯ ಹಿನ್ನೆಲೆ ಏನು ಗೊತ್ತಾ?

ದೂರಿನ ಬಳಿಕ ಪೊಲೀಸರು ಐಪಿಸಿ ಸೆಕ್ಷನ್ 153, 153 ಎ, 465, 469, 171 ಜಿ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವೀಡಿಯೊವನ್ನು ಅಪ್‌ಲೋಡ್ ಮಾಡಿದ ಮತ್ತು ಹಂಚಿಕೊಂಡ ಖಾತೆಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಎಕ್ಸ್ ಮತ್ತು ಫೇಸ್‌ಬುಕ್‌ಗೆ ನೋಟಿಸ್ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​