AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

White Paper: ತೆಲಂಗಾಣ ಸರ್ಕಾರದ ಮೇಲಿದೆ 5 ಲಕ್ಷ 60 ಸಾವಿ ಕೋಟಿ ಸಾಲದ ಹೊರೆ! ಹಣಕಾಸು ಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆಗೆ ಸಿದ್ಧತೆ

Deputy CM, Finance Minister Mallu Bhatti Vikramarka: ತೆಲಂಗಾಣ 5 ಲಕ್ಷ 59 ​​ಸಾವಿರ ಕೋಟಿ ಸಾಲ ಹೊಂದಿದೆ ಎಂದು ಉಪ ಮುಖ್ಯಮಂತ್ರಿ, ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ ಹೇಳಿದ್ದಾರೆ. 2014ರ ಜೂನ್ 2ರಿಂದ ರಾಜ್ಯದ ಆದಾಯ, ವೆಚ್ಚ ಮತ್ತು ಸವಲತ್ತುಗಳ ಕುರಿತು ಶ್ವೇತಪತ್ರ ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

White Paper: ತೆಲಂಗಾಣ ಸರ್ಕಾರದ ಮೇಲಿದೆ 5 ಲಕ್ಷ 60 ಸಾವಿ ಕೋಟಿ ಸಾಲದ ಹೊರೆ! ಹಣಕಾಸು ಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆಗೆ ಸಿದ್ಧತೆ
ತೆಲಂಗಾಣ ಸರ್ಕಾರದ ಮೇಲಿದೆ 5 ಲಕ್ಷ 60 ಸಾವಿ ಕೋಟಿ ಸಾಲದ ಹೊರೆ!
ಸಾಧು ಶ್ರೀನಾಥ್​
|

Updated on: Dec 10, 2023 | 11:18 AM

Share

ತೆಲಂಗಾಣದ (Telangana) ಹಣಕಾಸು ಸಚಿವರೂ ಆದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ (Mallu Bhatti Vikramarka) ಅವರು ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ (White Paper) ಬಿಡುಗಡೆ ಮಾಡಲು ಸರ್ಕಾರ ಸಿದ್ಧವಾಗುತ್ತಿದೆ ಎಂದು ಹೇಳಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸದ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿಗತಿ, ಆದಾಯ, ಖರ್ಚು ಮತ್ತಿತರ ವಿವರಗಳನ್ನು (Debt) ಅಧಿಕಾರಿಗಳ ಬಳಿ ಅವರು ವಿಚಾರಿಸಿದರು. ಇದಕ್ಕೂ ಮುನ್ನ 2014ರ ಜೂನ್ 2ರಿಂದ ರಾಜ್ಯದ ಆದಾಯ, ವೆಚ್ಚ ಮತ್ತು ಸವಲತ್ತುಗಳ ಕುರಿತು ಶ್ವೇತಪತ್ರ ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದ ಮೇಲೆ 5.5 ಲಕ್ಷ ಕೋಟಿ ರೂ. ಸಾಲ ಇದೆ, ಆದರೂ ಆರ್ಥಿಕ ಇಲಾಖೆ ಜವಾಬ್ದಾರಿಯಿಂದ ರಾಜ್ಯವನ್ನು ಮುನ್ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಹೇಳಿದರು. ಕಾಂಗ್ರೆಸ್ ಪಕ್ಷ ಘೋಷಿಸಿರುವ ಮತ್ತು ‘ಅಭಯ ಹಸ್ತಂ’ ಪ್ರಣಾಳಿಕೆಯಲ್ಲಿ ಸೇರಿಸಿರುವ ಆರು ಭರವಸೆಗಳನ್ನು ಈಡೇರಿಸಲು ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡುವಂತೆ ಅವರು ತಿಳಿಸಿದರು.

ಇದನ್ನೂಓದಿ: ಸಾಲವೆಂಬ ಶೂಲಕ್ಕೆ ಏರಿಬಿಟ್ಟೀರಿ ಜೋಕೆ..! ಇಲ್ಲಿದೆ ಸಾಲಮುಕ್ತರನ್ನಾಗಿಸುವ ಟಿಪ್ಸ್

ಸರ್ಕಾರದ ಯಶಸ್ಸು ಆರ್ಥಿಕ ಇಲಾಖೆಯ ಮೇಲೆ ಅವಲಂಬಿತವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಶ್ರಮಿಸುವವರು ಕೇವಲ ಸೇವಕರಾಗದೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಸರ್ಕಾರದ ಗುರಿಗಳು ಈಡೇರುತ್ತವೆ ಎಂದು ವಿಕ್ರಮಾರ್ಕ ಸಲಹೆ ನೀಡಿದರು.

ಇದನ್ನೂಓದಿ: ರಾತ್ರೋರಾತ್ರಿ ತೆಲಂಗಾಣ ಮಾಜಿ ಮಂತ್ರಿಗಳಿಬ್ಬರ ಕಚೇರಿಯಿಂದ ಕಡತಗಳು ಮಾಯ!

ಅನೇಕ ಸವಾಲುಗಳನ್ನು ಮೆಟ್ಟಿನಿಂತು ರಾಜ್ಯದ ಆರ್ಥಿಕ ಪ್ರಗತಿ ಸಾಧಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಸಚಿವ ವಿಕ್ರಮಾರ್ಕ ಕರೆ ನೀಡಿದರು. ಪಾದಯಾತ್ರೆಯಲ್ಲಿ ಎಲ್ಲಾ ವರ್ಗದ ಜನರು ವ್ಯಕ್ತಪಡಿಸಿದ ನೋವುಗಳನ್ನು ಆಲಿಸಿದ್ದೇನೆ. ಕಾಂಗ್ರೆಸ್​ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅವರ ಸಮಸ್ಯೆಗಳನ್ನು ಪರಿಹರಿಸಲು ಆರು ಗ್ಯಾರಂಟಿ ಭರವಸೆಗಳನ್ನು ನೀಡಲಾಗಿದೆ. ಈ ಭರವಸೆಗಳನ್ನು ಈಡೇರಿಸಲು, ಆದಾಯದ ಮೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಯಂತ್ರ ಸಜ್ಜಾಗುವಂತೆ ಅಧಿಕಾರಿಗಳಿಗೆ ಭಟ್ಟಿ ವಿಕ್ರಮಾರ್ಕ ಆದೇಶಿಸಿದರು.

ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್