AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಿತಾಂಶ ಪ್ರಕಟಕ್ಕೂ ಮುನ್ನವೇ ಅಭ್ಯರ್ಥಿಯನ್ನು ಭೇಟಿ ಮಾಡಿದ ಡಿಜಿ ಐಜಿಪಿ; ಅಂಜನಿ ಕುಮಾರ್ ಅಮಾನತುಗೊಳಿಸಿದ ಚುನಾವಣಾ ಆಯೋಗ

Telangana DGP Anjani Kumar Suspended: ಚುನಾವಣಾ ಪ್ರಕ್ರಿಯೆ ಮುಗಿಯದಿದ್ದರೂ ಮತ್ತು ಫಲಿತಾಂಶ ಇನ್ನೂ ಪ್ರಕಟವಾಗದಿದ್ದರೂ ಒಂದು ಪಕ್ಷದ ವ್ಯಕ್ತಿಯನ್ನು ಭೇಟಿ ಮಾಡಿ ಶುಭ ಕೋರಿದ ಡಿಜಿಪಿ ಅಂಜನಿ ಕುಮಾರ್ ಅವರನ್ನು ಚುನಾವಣಾ ಆಯೋಗ ಆಮಾನತು ಮಾಡಿದೆ. ಅಂಜನಿ ಕುಮಾರ್ ಹಾಗೂ ಇತರ ಇಬ್ಬರು ಅಧಿಕಾರಿಗಳು ಇಂದು ಕಾಂಗ್ರೆಸ್ ಪಕ್ಷದ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿದೆ ಎಂಬುದು ಆರೋಪ.

ಫಲಿತಾಂಶ ಪ್ರಕಟಕ್ಕೂ ಮುನ್ನವೇ ಅಭ್ಯರ್ಥಿಯನ್ನು ಭೇಟಿ ಮಾಡಿದ ಡಿಜಿ ಐಜಿಪಿ; ಅಂಜನಿ ಕುಮಾರ್ ಅಮಾನತುಗೊಳಿಸಿದ ಚುನಾವಣಾ ಆಯೋಗ
ಅಂಜನಿ ಕುಮಾರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 03, 2023 | 7:59 PM

ಹೈದರಾಬಾದ್, ಡಿಸೆಂಬರ್ 3: ಚುನಾವಣಾ ನೀತಿ ಸಂಹಿತೆಯ (election code of conduct) ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ತೆಲಂಗಾಣದ ಪೊಲೀಸ್ ಮಹಾ ನಿರ್ದೇಶಕ ಅಂಜನಿ ಕುಮಾರ್ (Telangana DG & IGP Anjani Kumar) ಅವರನ್ನು ಚುನಾವಣಾ ಆಯೋಗ ಇಂದು ಭಾನುವಾರ (ಡಿ. 3) ಅಮಾನತುಗೊಳಿಸಿದೆ ಎಂದು ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ತೆಲಂಗಾಣದ ಡಿಜಿ ಮತ್ತು ಐಜಿ ಆಗಿರುವ ಅಂಜನಿ ಕುಮಾರ್ ಹಾಗು ಪೊಲೀಸ್ ಅಧಿಕಾರಿಗಳಾದ ಸಂಜಯ್ ಜೈನ್ ಮತ್ತು ಮಹೇಶ್ ಭಗವತ್ ಈ ಮೂವರುಗಳು ತೆಲಂಗಾಣ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹಾಗೂ ಚುನಾವಣೆ ಅಭ್ಯರ್ಥಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಶುಭಾಶಯ ಹೇಳಿದ್ದರು. ರೆಡ್ಡಿ ಮನೆಗೆ ಹೋಗಿ ಹೂಗುಚ್ಛ ನೀಡಿ ಶುಭಕೋರಿದ್ದರು. ಇನ್ನೂ ಕೂಡ ಚುನಾವಣಾ ಫಲಿತಾಂಶ ಪ್ರಕಟವಾಗದಿದ್ದರೂ ಅಭ್ಯರ್ಥಿಯನ್ನು ಡಿಜಿ ಐಜಿಪಿ ಭೇಟಿ ಮಾಡಿ ಶುಭ ಕೋರಿದ್ದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಹೇಳಲಾಗುತ್ತಿದೆ. ಸದ್ಯ ಅಂಜನಿ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಯಾಕೆ ಇದು ನೀತಿ ಸಂಹಿತೆ ಉಲ್ಲಂಘನೆ?

ಚುನಾವಣೆಯಲ್ಲಿ 2,290 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅವರ ಪೈಕಿ ಒಬ್ಬ ಅಭ್ಯರ್ಥಿಯನ್ನು ಮಾತ್ರವೇ ಡಿಜಿಪಿ ಭೇಟಿ ಮಾಡಿದ್ದಾರೆ. 16 ರಾಜಕೀಯ ಪಕ್ಷಗಳ ಪೈಕಿ ಒಂದು ಪಕ್ಷದ ಸ್ಟಾರ್ ಪ್ರಚಾರಕನನ್ನು ಮಾತ್ರ ಅವರು ಭೇಟಿ ಮಾಡಿದ್ದಾರೆ. ಇದು ಯಾವುದೋ ದುರುದ್ದೇಶಕ್ಕೆ ಮಾಡಿದಂತಹ ಕೆಲಸದಂತಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಭಾವಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ಕೂಡ ವರದಿ ಮಾಡಿದೆ.

ಇದನ್ನೂ ಓದಿ: Telangana Election 2023 Results: ತೆಲಂಗಾಣದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್; ಮುಖಭಂಗ ಅನುಭವಿಸಿದ ಕೆಸಿಆರ್ ಅಂಡ್ ಟೀಮ್

‘ಡಿಜಿಪಿಯಾದವರು ರಾಜ್ಯದಲ್ಲಿ ಇಡೀ ಪೊಲೀಸ್ ಪಡೆಯನ್ನು ಮುನ್ನಡೆಸುತ್ತಾರೆ. ತಾರತಮ್ಯತೆ ಇಲ್ಲದ ತಮ್ಮ ವೈಯಕ್ತಿಕ ನಡವಳಿಕೆಯಿಂದ ಅವರು ಇನ್ನೊಬ್ಬರಿಗೆ ಮಾದರಿಯಾಗಿರಬೇಕು. ಅವರಿಂದ ತಪ್ಪು ನಡತೆ ಬಂದರೆ ಚುನಾವಣಾ ಪ್ರಕ್ರಿಯೆಯಲ್ಲಿರುವ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ಈ ಪ್ರಕ್ರಿಯೆಯಲ್ಲಿರುವ ಕೆಳಗಿನ ಪೊಲೀಸ್ ಅಧಿಕಾರಿಗಳು ತಮ್ಮ ಹಿರಿಯರ ಹಾದಿಯನ್ನು ಅನುಸರಿಸಲು ತೊಡಗುತ್ತಾರೆ. ಮತ ಎಣಿಕೆ ಕಾರ್ಯದಲ್ಲಿ ಭದ್ರತೆ ಒದಗಿಸುವುದನ್ನು ಬಿಟ್ಟು ಅಭ್ಯರ್ಥಿಗಳನ್ನು ಅಭಿನಂದಿಸಲು ಮುಂದಾಗಬಹುದು. ಇದರ ಪರಿಣಾಮ ನಿಜಕ್ಕೂ ಊಹಾತೀತವಾದುದು,’ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ಹೇಳಿವೆ.

ಸದ್ಯ, ಡಿಜಿ ಐಜಿಪಿ ಅಂಜನಿ ಕುಮಾರ್ ಅವರನ್ನು ಚುನಾವಣಾ ಆಯೋಗ ಅಮಾನತು ಮಾಡಿದೆ. ಅವರ ಜೊತೆ ರೇವಂತ್ ರೆಡ್ಡಿ ಅವರನ್ನು ಭೇಟಿಯಾದ ಸಂಜಯ್ ಕುಮಾರ್ ಜೈನ್ ಮತ್ತು ಮಹೇಶ್ ಭಗವತ್ ಅವರಿಂದ ಆಯೋಗ ವಿವರಣೆ ಕೋರಿದೆ.

ಇದನ್ನೂ ಓದಿ: ತೆಲಂಗಾಣ: ಕೆಸಿಆರ್, ರೇವಂತ್ ರೆಡ್ಡಿಯನ್ನು ಸೋಲಿಸಿದ ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ! ಯಾರಿವರು?

ಈಗ ಅಂಜನಿ ಕುಮಾರ್ ಅಮಾನತುಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಇನ್ನೊಬ್ಬ ಹಿರಿಯ ಅಧಿಕಾರಿಯನ್ನು ಕೂರಿಸಲಾಗುತ್ತದೆ. ಸೇವೆಯಲ್ಲಿರುವ ಅತ್ಯಂತ ಹಿರಿಯ ವ್ಯಕ್ತಿ ಡಿಜಿ ಐಜಿಪಿ ಆಗಲಿದ್ದಾರೆ.

ತೆಲಂಗಾಣದಲ್ಲಿ ಇಷ್ಟು ವರ್ಷ ಅಧಿಕಾರದಲ್ಲಿದ್ದ ಕೆ ಚಂದ್ರಶೇಖರ್ ರಾವ್ ಸರ್ಕಾರ ಸೋಲುಂಡು ಕಾಂಗ್ರೆಸ್ ಮೊದಲ ಬಾರಿಗೆ ಅಧಿಕಾರ ಹಿಡಿದಿದೆ. ರೇವಂತ್ ರೆಡ್ಡಿ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದವರು.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Sun, 3 December 23

ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್