AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Formation Day 2022: ಇಂದು ತೆಲಂಗಾಣ ಸಂಸ್ಥಾಪನಾ ದಿನ; ಭಾರತದ ಕಿರಿಯ ರಾಜ್ಯದ ಬಗ್ಗೆ ನಿಮಗೆಷ್ಟು ಗೊತ್ತು?

ಆಂಧ್ರಪ್ರದೇಶ ರಾಜ್ಯ ಮರುಸಂಘಟನೆ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ನಂತರ ತೆಲಂಗಾಣ ರಾಜ್ಯ ರಚನೆಯಾಯಿತು. ಪ್ರತ್ಯೇಕ ರಾಜ್ಯಕ್ಕಾಗಿ ದಶಕಗಳಿಂದ ಇದ್ದ ಬೇಡಿಕೆಯನ್ನು ಕೊನೆಗೂ ನೆರವೇರಿಸಲಾಯಿತು.

Telangana Formation Day 2022: ಇಂದು ತೆಲಂಗಾಣ ಸಂಸ್ಥಾಪನಾ ದಿನ; ಭಾರತದ ಕಿರಿಯ ರಾಜ್ಯದ ಬಗ್ಗೆ ನಿಮಗೆಷ್ಟು ಗೊತ್ತು?
ತೆಲಂಗಾಣImage Credit source: CareerIndia.com
TV9 Web
| Edited By: |

Updated on:Jun 02, 2022 | 10:25 AM

Share

ಹೈದರಾಬಾದ್: ಪ್ರತಿ ವರ್ಷ ಜೂನ್ 2ರಂದು ತೆಲಂಗಾಣ ರಾಜ್ಯವು ತನ್ನ ಸಂಸ್ಥಾಪನಾ ದಿನವನ್ನು (Telangana Formation Day) ಅದ್ದೂರಿಯಾಗಿ ಆಚರಿಸುತ್ತದೆ. ಈ ದಿನ ಹಲವಾರು ಕಾರ್ಯಕ್ರಮಗಳು, ಸಾಂಸ್ಕೃತಿಕ ಚಟುವಟಿಕೆಗಳು ಇತ್ಯಾದಿಗಳನ್ನು ನಡೆಸಲಾಗುತ್ತದೆ. ತೆಲಂಗಾಣವು ಸುಮಾರು 2,500 ವರ್ಷಗಳಷ್ಟು ಸುದೀರ್ಘವಾದ ಮತ್ತು ಪ್ರಸಿದ್ಧ ಇತಿಹಾಸವನ್ನು ಹೊಂದಿದೆ. 2014ರ ಜೂನ್ 2ರಂದು ತೆಲಂಗಾಣವನ್ನು ಭೌಗೋಳಿಕ ಮತ್ತು ರಾಜಕೀಯ ಘಟಕವಾಗಿ ಯೂನಿಯನ್ ಆಫ್ ಇಂಡಿಯಾದ 29 ನೇ ಮತ್ತು ಕಿರಿಯ ರಾಜ್ಯವಾಗಿ ಸ್ಥಾಪಿಸಲಾಯಿತು.

ತೆಲಂಗಾಣ ರಾಜ್ಯವು 1,12,077 ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಹಾಗೇ, 3,50,03,674 ಜನಸಂಖ್ಯೆಯನ್ನು ಹೊಂದಿದೆ. 1948ರ ಸೆಪ್ಟೆಂಬರ್ 17ರಿಂದ 1956ರ ನವೆಂಬರ್ 1ರವರೆಗೆ ಆಂಧ್ರಪ್ರದೇಶವನ್ನು ರಾಜ್ಯವನ್ನಾಗಿ ಸ್ಥಾಪಿಸಲು ಆಂಧ್ರ ರಾಜ್ಯದೊಂದಿಗೆ ತೆಲಂಗಾಣವನ್ನು ಸೇರಿಸುವವರೆಗೂ ತೆಲಂಗಾಣವು ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

ತೆಲಂಗಾಣ ಸಂಸ್ಥಾಪನಾ ದಿನ: ತೆಲಂಗಾಣವು ಭಾರತದ ಅತಿ ಕಿರಿಯ ರಾಜ್ಯವಾಗಿದೆ. ಈ ರಾಜ್ಯ ಭಾರತದ ಉತ್ತರ ಮತ್ತು ದಕ್ಷಿಣದ ನಡುವಿನ ಕೊಂಡಿಯಾಗಿದ್ದು, ಡೆಕ್ಕನ್ ಪ್ರಸ್ಥಭೂಮಿಯ ಮಲೆನಾಡಿನಲ್ಲಿ ಈ ರಾಜ್ಯವಿದೆ. ಆಗಿನ ಅಖಂಡ ಆಂಧ್ರಪ್ರದೇಶದ ವಿಭಜನೆಗೆ ಕಾರಣವಾದ ತೆಲಂಗಾಣ ಚಳವಳಿಯ ಯಶಸ್ಸು ತೆಲಂಗಾಣ ರಚನೆಯಿಂದ ಗುರುತಿಸಲ್ಪಟ್ಟಿದೆ. 2014ರ ಜೂನ್ 2ರಂದು 57 ವರ್ಷಗಳ ಚಳುವಳಿಯ ಪ್ರತಿಫಲವಾಗಿ ತೆಲಂಗಾಣ ರಾಜ್ಯ ತಲೆ ಎತ್ತಿತು.

ಇದನ್ನೂ ಓದಿ: ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ

ತೆಲಂಗಾಣದ ಜನಸಂಖ್ಯೆಯ ಸುಮಾರು ಶೇ.70ರಷ್ಟು ಜನರು 15 ಮತ್ತು 59ರ ನಡುವಿನ ವಯಸ್ಸಿನವರಾಗಿದ್ದಾರೆ. ತೆಲಂಗಾಣದ 35 ಮಿಲಿಯನ್ ಜನಸಂಖ್ಯೆಯು ಮೊರಾಕೊದಂತೆಯೇ ಇದೆ. ದೇಶದ ಜನಸಂಖ್ಯೆಯ ಸುಮಾರು ಶೇ. 2.7ರಷ್ಟು ಜನರು ತೆಲಂಗಾಣ ರಾಜ್ಯದಲ್ಲಿ ವಾಸಿಸುತ್ತಿದ್ದಾರೆ. ಹೈದರಾಬಾದ್, ನಿಜಾಮಾಬಾದ್, ವಾರಂಗಲ್, ನಲ್ಗೊಂಡ, ಕರೀಂನಗರ ಮತ್ತು ಖಮ್ಮಂ ತೆಲಂಗಾಣದ ಪ್ರಮುಖ ನಗರಗಳಾಗಿವೆ.

ಆಂಧ್ರಪ್ರದೇಶ ರಾಜ್ಯ ಮರುಸಂಘಟನೆ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ನಂತರ ತೆಲಂಗಾಣ ರಾಜ್ಯ ರಚನೆಯಾಯಿತು. ಪ್ರತ್ಯೇಕ ರಾಜ್ಯಕ್ಕಾಗಿ ದಶಕಗಳಿಂದ ಇದ್ದ ಬೇಡಿಕೆಯನ್ನು ಕೊನೆಗೂ ನೆರವೇರಿಸಲಾಯಿತು. ತೆಲಂಗಾಣದ ರಾಜಧಾನಿ ಹೈದರಾಬಾದ್ ಮಾಹಿತಿ ತಂತ್ರಜ್ಞಾನ (IT) ಮತ್ತು ಔಷಧೀಯ ಉದ್ಯಮಗಳಿಗೆ ಪ್ರಮುಖ ಕೇಂದ್ರವಾಗಿದೆ. ಅಗ್ರ 20 ಜಾಗತಿಕ ನಗರಗಳಲ್ಲಿ ಹೈದರಾಬಾದ್ 2ನೇ ಸ್ಥಾನದಲ್ಲಿದೆ. ಹೈದರಾಬಾದ್‌ನಲ್ಲಿ ಪ್ರಮುಖ ಐಟಿ ಸಂಸ್ಥೆಗಳಾದ ಫೇಸ್‌ಬುಕ್, ಗೂಗಲ್, ಐಬಿಎಂ ಮತ್ತು ಮೈಕ್ರೋಸಾಫ್ಟ್ ಗಣನೀಯ ಅಸ್ತಿತ್ವವನ್ನು ಹೊಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Thu, 2 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ