Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಇಟಾಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

ರಾಜೇಂದರ್​ ಹುಜುರಾಬಾದ್​​ನ ಶಾಸಕರಾಗಿದ್ದು, ಇಂದು ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದರು. ಮೇ 31ರಂದು ಜೆಪಿ ನಡ್ಡಾರನ್ನು ಭೇಟಿ ಮಾಡಿದ ರಾಜೇಂದರ್​ ಗುರುವಾರ ತೆಲಂಗಾಣಕ್ಕೆ ಆಗಮಿಸಿದ್ದಾರೆ.

ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಇಟಾಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?
ಎಟೆಲಾ ರಾಜೇಂದರ್​
Follow us
TV9 Web
| Updated By: Lakshmi Hegde

Updated on:Jun 14, 2021 | 2:02 PM

ತೆಲಂಗಾಣ ಮಾಜಿ ಆರೋಗ್ಯ ಸಚಿವ ಇಟಾಲಾ ರಾಜೇಂದರ್​ ಬಿಜೆಪಿ ಸೇರ್ಪಡೆಯ ಬಗ್ಗೆ ಈಗಾಗಲೇ ಊಹಾಪೋಹಗಳು ಎದ್ದಿದ್ದವು. ಸ್ವಲ್ಪದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಅವರು ಭೇಟಿಯಾಗಿದ್ದರು. ಅದಕ್ಕೆ ಪುಷ್ಟಿ ನೀಡುವಂತೆ ಅವರೀಗ ತೆಲಂಗಾಣ ರಾಷ್ಟ್ರ ಸಮಿತಿ (TRS)ಗೆ ರಾಜೀನಾಮೆ ನೀಡಿದ್ದಾರೆ. ರಾಜೇಂದರ್​ ಮೇದಕ್​ ಜಿಲ್ಲೆಯಲ್ಲಿ ಭೂಕಬಳಿಕೆ ಮಾಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದು, ಮೇ 1ರಂದು ಅವರನ್ನು ಟಿಆರ್​​​ಎಸ್​​ ಸಂಪುಟದಿಂದ ಉಚ್ಚಾಟಿಸಲಾಗಿತ್ತು. ಹಾಗೇ ಮೇ 31ರಂದು ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ಕುಮಾರ್ ಜತೆ ಹೋಗಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿದ್ದರು.

ನಾನು ಭೂಕಬಳಿಕೆ ಮಾಡಿದ್ದೇನೆ ಎಂಬ ಬಗ್ಗೆ ಅನಾಮಧೇಯ ಪತ್ರವೊಂದು ಬಂತು. ಅದರ ಆಧಾರದ ಮೇಲೆ ನನ್ನ ವಿರುದ್ಧ ತನಿಖೆ ಶುರುವಾಯಿತು. ಕೆಲವೇ ಗಂಟೆಗಳಲ್ಲಿ ನನ್ನನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಯಿತು. ವಿಚಾರಣೆ ಮುಗಿಯುವ ಮುನ್ನವೇ ನನ್ನನ್ನು ಸಂಪುಟದಿಂದ ಹೊರಹಾಕಲಾಗಿದೆ. ನನ್ನ ವಿರುದ್ಧ ಮಾಡಲಾದ ಭೂಕಬಳಿಕೆ ಆರೋಪ ಆಧಾರ ರಹಿತವಾಗಿದ್ದು. ಆದರೆ ಅದನ್ನು ಗಣನೆಗೆ ತೆಗೆದುಕೊಳ್ಳದೆ, ನನಗೆ ವಿವರಣೆ ನೀಡಲು ಅವಕಾಶವನ್ನೂ ನೀಡದೆ, ಗಮನಕ್ಕೂ ತರದೆ ಸಂಪುಟದಿಂದ ಕೈಬಿಟ್ಟಿದ್ದಾರೆ ಎಂದು ಎಟೆಲಾ ರಾಜೇಂದರ್​ ಟಿಆರ್​ಎಸ್​ ವಿರುದ್ಧ ಆರೋಪ ಮಾಡಿದ್ದಾರೆ.

ರಾಜೇಂದರ್​ ಹುಜುರಾಬಾದ್​​ನ ಶಾಸಕರಾಗಿದ್ದು, ಇಂದು ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದರು. ಮೇ 31ರಂದು ಜೆಪಿ ನಡ್ಡಾರನ್ನು ಭೇಟಿ ಮಾಡಿದ ರಾಜೇಂದರ್​ ಗುರುವಾರ ತೆಲಂಗಾಣಕ್ಕೆ ಆಗಮಿಸಿದ್ದಾರೆ. ಮೇದಕ್​ ಜಿಲ್ಲೆಯ ಹೊರವಲಯ ಅಚಾಂಪೇಟ್​​ನಲ್ಲಿರುವ ಭೂಮಿಯನ್ನು ಇಟೆಲಾ ರಾಜೇಂದರ್​ ಅವರ ಕುಟುಂಬಕ್ಕೆ ಸೇರಿದ ಜಮುನಾ ಹ್ಯಾಚರೀಸ್​ ಸಂಸ್ಥೆ ಕಬಳಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ, ಎಟೆಲಾರನ್ನು ಆರೋಗ್ಯ ಇಲಾಖೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇಟಾಲಾ ಮುದಿರಾಜ್​ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕನಾಗಿದ್ದು, ನಾಲ್ಕು ಬಾರಿ ಶಾಸಕರಾದವರಾಗಿದ್ದಾರೆ.

ಇದನ್ನೂ ಓದಿ:ಕೊವಿಡ್​ ಸಮಯದಲ್ಲಿ ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ ಫುಡ್​​ ಕಿಟ್​ ಕಳುಹಿಸಿಕೊಟ್ಟ ಶಾಸಕ ಪುಟ್ಟರಾಜು

Telangana former Health minister Etela Rajender resigns from TRS

Published On - 4:59 pm, Sat, 5 June 21

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು