AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಇಟಾಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

ರಾಜೇಂದರ್​ ಹುಜುರಾಬಾದ್​​ನ ಶಾಸಕರಾಗಿದ್ದು, ಇಂದು ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದರು. ಮೇ 31ರಂದು ಜೆಪಿ ನಡ್ಡಾರನ್ನು ಭೇಟಿ ಮಾಡಿದ ರಾಜೇಂದರ್​ ಗುರುವಾರ ತೆಲಂಗಾಣಕ್ಕೆ ಆಗಮಿಸಿದ್ದಾರೆ.

ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಇಟಾಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?
ಎಟೆಲಾ ರಾಜೇಂದರ್​
TV9 Web
| Edited By: |

Updated on:Jun 14, 2021 | 2:02 PM

Share

ತೆಲಂಗಾಣ ಮಾಜಿ ಆರೋಗ್ಯ ಸಚಿವ ಇಟಾಲಾ ರಾಜೇಂದರ್​ ಬಿಜೆಪಿ ಸೇರ್ಪಡೆಯ ಬಗ್ಗೆ ಈಗಾಗಲೇ ಊಹಾಪೋಹಗಳು ಎದ್ದಿದ್ದವು. ಸ್ವಲ್ಪದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಅವರು ಭೇಟಿಯಾಗಿದ್ದರು. ಅದಕ್ಕೆ ಪುಷ್ಟಿ ನೀಡುವಂತೆ ಅವರೀಗ ತೆಲಂಗಾಣ ರಾಷ್ಟ್ರ ಸಮಿತಿ (TRS)ಗೆ ರಾಜೀನಾಮೆ ನೀಡಿದ್ದಾರೆ. ರಾಜೇಂದರ್​ ಮೇದಕ್​ ಜಿಲ್ಲೆಯಲ್ಲಿ ಭೂಕಬಳಿಕೆ ಮಾಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದು, ಮೇ 1ರಂದು ಅವರನ್ನು ಟಿಆರ್​​​ಎಸ್​​ ಸಂಪುಟದಿಂದ ಉಚ್ಚಾಟಿಸಲಾಗಿತ್ತು. ಹಾಗೇ ಮೇ 31ರಂದು ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ಕುಮಾರ್ ಜತೆ ಹೋಗಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿದ್ದರು.

ನಾನು ಭೂಕಬಳಿಕೆ ಮಾಡಿದ್ದೇನೆ ಎಂಬ ಬಗ್ಗೆ ಅನಾಮಧೇಯ ಪತ್ರವೊಂದು ಬಂತು. ಅದರ ಆಧಾರದ ಮೇಲೆ ನನ್ನ ವಿರುದ್ಧ ತನಿಖೆ ಶುರುವಾಯಿತು. ಕೆಲವೇ ಗಂಟೆಗಳಲ್ಲಿ ನನ್ನನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಯಿತು. ವಿಚಾರಣೆ ಮುಗಿಯುವ ಮುನ್ನವೇ ನನ್ನನ್ನು ಸಂಪುಟದಿಂದ ಹೊರಹಾಕಲಾಗಿದೆ. ನನ್ನ ವಿರುದ್ಧ ಮಾಡಲಾದ ಭೂಕಬಳಿಕೆ ಆರೋಪ ಆಧಾರ ರಹಿತವಾಗಿದ್ದು. ಆದರೆ ಅದನ್ನು ಗಣನೆಗೆ ತೆಗೆದುಕೊಳ್ಳದೆ, ನನಗೆ ವಿವರಣೆ ನೀಡಲು ಅವಕಾಶವನ್ನೂ ನೀಡದೆ, ಗಮನಕ್ಕೂ ತರದೆ ಸಂಪುಟದಿಂದ ಕೈಬಿಟ್ಟಿದ್ದಾರೆ ಎಂದು ಎಟೆಲಾ ರಾಜೇಂದರ್​ ಟಿಆರ್​ಎಸ್​ ವಿರುದ್ಧ ಆರೋಪ ಮಾಡಿದ್ದಾರೆ.

ರಾಜೇಂದರ್​ ಹುಜುರಾಬಾದ್​​ನ ಶಾಸಕರಾಗಿದ್ದು, ಇಂದು ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದರು. ಮೇ 31ರಂದು ಜೆಪಿ ನಡ್ಡಾರನ್ನು ಭೇಟಿ ಮಾಡಿದ ರಾಜೇಂದರ್​ ಗುರುವಾರ ತೆಲಂಗಾಣಕ್ಕೆ ಆಗಮಿಸಿದ್ದಾರೆ. ಮೇದಕ್​ ಜಿಲ್ಲೆಯ ಹೊರವಲಯ ಅಚಾಂಪೇಟ್​​ನಲ್ಲಿರುವ ಭೂಮಿಯನ್ನು ಇಟೆಲಾ ರಾಜೇಂದರ್​ ಅವರ ಕುಟುಂಬಕ್ಕೆ ಸೇರಿದ ಜಮುನಾ ಹ್ಯಾಚರೀಸ್​ ಸಂಸ್ಥೆ ಕಬಳಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ, ಎಟೆಲಾರನ್ನು ಆರೋಗ್ಯ ಇಲಾಖೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇಟಾಲಾ ಮುದಿರಾಜ್​ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕನಾಗಿದ್ದು, ನಾಲ್ಕು ಬಾರಿ ಶಾಸಕರಾದವರಾಗಿದ್ದಾರೆ.

ಇದನ್ನೂ ಓದಿ:ಕೊವಿಡ್​ ಸಮಯದಲ್ಲಿ ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ ಫುಡ್​​ ಕಿಟ್​ ಕಳುಹಿಸಿಕೊಟ್ಟ ಶಾಸಕ ಪುಟ್ಟರಾಜು

Telangana former Health minister Etela Rajender resigns from TRS

Published On - 4:59 pm, Sat, 5 June 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?