AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ತಂಬಾಕು, ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್​ ಮಸಾಲ ನಿಷೇಧ

ತೆಲಂಗಾಣದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್​ ಮಸಾಲ ನಿಷೇಧಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಮೇ 24, 2024 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನಿಷೇಧವನ್ನು ವಿಧಿಸಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ತೆಲಂಗಾಣದಲ್ಲಿ ತಂಬಾಕು, ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್​ ಮಸಾಲ ನಿಷೇಧ
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ
ನಯನಾ ರಾಜೀವ್
|

Updated on: May 27, 2024 | 10:20 AM

Share

ತೆಲಂಗಾಣ ಸರ್ಕಾರ(Telangana Government)ವು ರಾಜ್ಯದಲ್ಲಿ ತಂಬಾಕು(Tobacco)  ಮತ್ತು ನಿಕೋಟಿನ್( Nicotine) ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಮೇ 24, 2024 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನಿಷೇಧವನ್ನು ವಿಧಿಸಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಆಹಾರ ಸುರಕ್ಷತಾ ಆಯುಕ್ತರ ಆದೇಶದ ಪ್ರಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಅಡಿಯಲ್ಲಿ ನಿಷೇಧವನ್ನು ಜಾರಿಗೊಳಿಸಲಾಗುವುದು.

ಗುಟ್ಕಾ ಹಾಗೂ ಪಾನ್​ ಮಸಾಲ ಸೇವನೆಗೆ ಸಂಬಂಧಿಸಿದ ಗಂಭೀರ ಆರೋಗ್ಯ ಅಪಾಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಉತ್ಪನ್ನಗಳು ಸಾಮಾನ್ಯವಾಗಿ ಕ್ಯಾನ್ಸರ್​, ಬಾಯಿಯ ಸಬ್​ಮ್ಯೂಕಸ್​ ಫೈಬ್ರೋಸಿಸ್ ಮತ್ತು ಇತರೆ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದೆ.

2014ರಲ್ಲಿ ತೆಲಂಗಾಣ ಸ್ಥಾಪನೆಯಾದ ನಂತರ ರಾಜ್ಯದಲ್ಲಿ ಗುಟ್ಖಾ ನಿಷೇಧಿಸಲಾಗಿತ್ತು. ನವೆಂಬರ್ 2021 ರಲ್ಲಿ, ತೆಲಂಗಾಣ ಹೈಕೋರ್ಟ್ ನಿಷೇಧವನ್ನು ಎತ್ತಿ ಹಿಡಿದಿತ್ತು. ನಿಷೇಧವನ್ನು ಗುಟ್ಖಾ ತಯಾರಕರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದರು, ಇದು ಮಾರ್ಚ್ 2022 ರಲ್ಲಿ ನಿಷೇಧವನ್ನು ವಿಧಿಸುವ ಅಧಿಸೂಚನೆಯನ್ನು ತಡೆಹಿಡಿಯಿತು.

ಮತ್ತಷ್ಟು ಓದಿ: ಶಾಲೆ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ: ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಪ್ರಕರಣ ಪತ್ತೆ

ಸೆಪ್ಟೆಂಬರ್ 2022 ರಲ್ಲಿ, ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆ ಜಾರಿಯಲ್ಲಿರುವವರೆಗೆ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳದಂತೆ ತೆಲಂಗಾಣ ಹೈಕೋರ್ಟ್ ಅಧಿಕಾರಿಗಳನ್ನು ನಿರ್ಬಂಧಿಸಿತು.

2023ರ ಜನವರಿಯಲ್ಲಿ ಗುಟ್ಖಾ ನಿಷೇಧಕ್ಕೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಇದಕ್ಕೂ ನಿಷೇಧ ಹೇರಿದೆ. ಹೀಗಿರುವಾಗ ಹೊಸ ನಿಷೇಧ ಯಾವ ರೀತಿ ಜಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ