AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಯನ್ನು ಕಟಿಂಗ್ ಶಾಪ್​ಗೆ ಕರೆದೊಯ್ದು ತಲೆ ಬೋಳಿಸಿದ ಕಾಲೇಜು ಶಿಕ್ಷಕ!

ವಿದ್ಯಾರ್ಥಿಯ ತಲೆ ಬೋಳಿಸಿದ್ದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಕ್ಷೌರದ ಅಂಗಡಿಗೆ ಕರೆದೊಯ್ದು ತಲೆ ಬೋಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿಯನ್ನು ಕಟಿಂಗ್ ಶಾಪ್​ಗೆ ಕರೆದೊಯ್ದು ತಲೆ ಬೋಳಿಸಿದ ಕಾಲೇಜು ಶಿಕ್ಷಕ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Nov 18, 2024 | 4:37 PM

Share

ಹೈದರಾಬಾದ್: ತೆಲಂಗಾಣದ ಸರ್ಕಾರಿ ವೈದ್ಯಕೀಯ ಕಾಲೇಜು ಉಪನ್ಯಾಸಕರೊಬ್ಬರು ವಿದ್ಯಾರ್ಥಿಯನ್ನು ಕ್ಷೌರಿಕನ ಅಂಗಡಿಗೆ ಕರೆದೊಯ್ದು, ಅವನ ತಲೆ ಬೋಳಿಸಿದ್ದಾರೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಯ ತಲೆ ಬೋಳಿಸಿದ್ದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ನವೆಂಬರ್ 12ರಂದು ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಆರೋಗ್ಯ ಸಚಿವ ದಾಮೋದರ್ ರಾಜ ನರಸಿಂಹ ಅವರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಇದು ರ್ಯಾಗಿಂಗ್ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Train Derails: ತೆಲಂಗಾಣದಲ್ಲಿ ಹಳಿ ತಪ್ಪಿದ 11 ರೈಲ್ವೆ ಬೋಗಿಗಳು, ದೆಹಲಿ-ಚೆನ್ನೈ ಮಾರ್ಗದಲ್ಲಿ ಸಂಚಾರ ಸ್ಥಗಿತ

ತೆಲಂಗಾಣ ಸರ್ಕಾರದ ಅಧಿಕಾರಿಗಳ ಪ್ರಕಾರ, ಆರಂಭದಲ್ಲಿ ಸಂಸ್ಥೆಯ ಹಾಸ್ಟೆಲ್‌ನಲ್ಲಿರುವ ಕೆಲವು ಸೀನಿಯರ್​ಗಳು ಮೊದಲ ವರ್ಷದ ವಿದ್ಯಾರ್ಥಿಯ ಹೇರ್​ಸ್ಟೈಲ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗೆ ಇರಬೇಕಾದ ಹಾಗಿಲ್ಲ ಎಂದು ಹೇಳಿದರು. ಆತನಿಗೆ ಕೂದಲು ಟ್ರಿಮ್ ಮಾಡಲು ಸೂಚಿಸಿದರು.

ವಿದ್ಯಾರ್ಥಿಯು ತನ್ನ ಕೂದಲನ್ನು ಟ್ರಿಮ್ ಮಾಡಿದ ನಂತರ ಹಾಸ್ಟೆಲ್ ಉಸ್ತುವಾರಿಯಾಗಿದ್ದ ಆ ಕಾಲೇಜಿನ ಉಪನ್ಯಾಸಕ ಈ ಹೇರ್​ಸ್ಟೈಲ್ ವಿಚಿತ್ರವಾಗಿದೆ ಎಂದು ಹೇಳಿ ಆತನನ್ನು ಸಲೂನ್‌ಗೆ ಕರೆದೊಯ್ದು ತಲೆ ಬೋಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ವಿಷಯ ಪ್ರಾಂಶುಪಾಲರ ಗಮನಕ್ಕೆ ಬಂದ ನಂತರ, ಶನಿವಾರ ಆ ಉಪನ್ಯಾಸಕರನ್ನು ಹಾಸ್ಟೆಲ್‌ನಿಂದ ತೆಗೆದುಹಾಕಲು ಆದೇಶಿಸಿದರು. ಈ ಘಟನೆಯ ಕುರಿತು ತನಿಖೆಗಾಗಿ ಸಮಿತಿಯನ್ನು ಸಹ ರಚಿಸಿದರು.

ಇದನ್ನೂ ಓದಿ: Viral Video: ಟೆರೇಸ್‌ನಲ್ಲಿ ಕಾರಿನಂತೆ ಕಾಣುವ ನೀರಿನ ಟ್ಯಾಂಕ್, ವಿಡಿಯೋ ವೈರಲ್

ಸಹಾಯಕ ಪ್ರಾಧ್ಯಾಪಕರು ಇಂತಹ ಚಟುವಟಿಕೆಯಲ್ಲಿ ತೊಡಗುವುದು ಒಳ್ಳೆಯದಲ್ಲ ಎಂದು ಪ್ರಾಂಶುಪಾಲರು ಹೇಳಿದರು. ಆದರೆ, ಆ ಉಪನ್ಯಾಸಕರ ಪ್ರಕಾರ, ಆ ವಿದ್ಯಾರ್ಥಿಯನ್ನು ಶಿಸ್ತುಬದ್ಧಗೊಳಿಸುವುದು ಮಾತ್ರ ಅವರ ಉದ್ದೇಶವಾಗಿತ್ತು. ಹೀಗಾಗಿ, ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್