ತೆಲಂಗಾಣದಲ್ಲಿ ನಾಳೆಯಿಂದಲೇ ಸಂಪೂರ್ಣ ಅನ್​ಲಾಕ್​; ಯಾವುದಕ್ಕೂ ನಿರ್ಬಂಧ ಇಲ್ಲ

ಕೊರೊನಾ ತೀವ್ರವಾಗಿ ಬಾಧಿಸಿದ ರಾಜ್ಯಗಳಲ್ಲಿ ತೆಲಂಗಾಣವೂ ಒಂದಾಗಿತ್ತು. ಶುಕ್ರವಾರ ಒಂದೇ ದಿನ ಅಲ್ಲಿ 1400 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.1.14ರಷ್ಟಿದೆ.

ತೆಲಂಗಾಣದಲ್ಲಿ ನಾಳೆಯಿಂದಲೇ ಸಂಪೂರ್ಣ ಅನ್​ಲಾಕ್​; ಯಾವುದಕ್ಕೂ ನಿರ್ಬಂಧ ಇಲ್ಲ
ಸಾಂದರ್ಭಿಕ ಚಿತ್ರ
Follow us
| Updated By: Lakshmi Hegde

Updated on:Jun 19, 2021 | 6:21 PM

ಹೈದರಾಬಾದ್: ಕೊರೊನಾ ಸೋಂಕಿನ ಪ್ರಮಾಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಸಂಪೂರ್ಣವಾಗಿ ಲಾಕ್​ಡೌನ್​ ನಿರ್ಬಂಧ ತೆರವುಗೊಳಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಇನ್ನು ಕೊರೊನಾ ನಿಯಂತ್ರಣ ಲಾಕ್​ಡೌನ್​ ಬೇಡ ಎಂದು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರಂತೆ ಭಾನುವಾರದಿಂದಲೇ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಕೊರೊನಾ ತೀವ್ರವಾಗಿ ಬಾಧಿಸಿದ ರಾಜ್ಯಗಳಲ್ಲಿ ತೆಲಂಗಾಣವೂ ಒಂದಾಗಿತ್ತು. ಶುಕ್ರವಾರ ಒಂದೇ ದಿನ ಅಲ್ಲಿ 1400 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.1.14ರಷ್ಟಿದೆ. ಪ್ರತಿದಿನವೂ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ, ವೈದ್ಯಕೀಯ ಉನ್ನತ ಅಧಿಕಾರಿಗಳ ತಂಡ ನೀಡಿದ ವರದಿಯ ಅನ್ವಯ ಈ ನಿರ್ಬಂಧ ತೆರವುಗೊಳಿಸಲಾಗುತ್ತಿದೆ. ಕೊರೊನಾ ನಮ್ಮ ರಾಜ್ಯದಲ್ಲಿ ಅಪಾಯಕಾರಿಯಲ್ಲದ ಮಟ್ಟದಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂದೂ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಲಾಕ್​ಡೌನ್​ ತೆರವು ಮಾಡುವ ಸಂಬಂಧ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಲಾಗಿದೆ ಎಂದೂ ಹೇಳಿದೆ.

ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆಯ ಅಬ್ಬರ ಇಳಿಮುಖವಾಗುತ್ತಿರುವ ಬೆನ್ನಲ್ಲೇ ಹಲವು ರಾಜ್ಯಗಳು ನಿರ್ಬಂಧ ತೆರವುಗೊಳಿಸುತ್ತಿವೆ. ಆದರೆ ಒಂದೇ ಸಲಕ್ಕೆ ಯಾವುದೇ ರಾಜ್ಯದಲ್ಲೂ ಎಲ್ಲ ನಿರ್ಬಂದವನ್ನೂ ತೆಗೆದಿಲ್ಲ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂದಂತ, ಅರ್ಧ ಅನ್​ಲಾಕ್​ದಂತಹ ಕ್ರಮಗಳು ಇನ್ನೂ ಇವೆ. ಕೇಂದ್ರ ಸರ್ಕಾರವೂ ಕೂಡ ಒಮ್ಮಲೇ ಲಾಕ್​ಡೌನ್​ ತೆಗೆಯಬೇಡಿ ಎಂದೇ ಹೇಳಿದೆ. ಇಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್​ ಕುಮಾರ್​ ಬಲ್ಲಾ ಅವರು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು, ಟೆಸ್ಟ್​-ಟ್ರ್ಯಾಕ್​-ಟ್ರೀಟ್​-ವ್ಯಾಕ್ಸಿನೇಶನ್​ಗಳನ್ನು ಒಳಗೊಂಡ ಅನ್​ಲಾಕ್​ ಮಾಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Sanchari Vijay : ನಟಿ ಕಂಗನಾ sanchari Vijay ಕರೆದು ಪಕ್ಕದಲ್ಲಿ ಕೂರುಸ್ಕೋಂಡ್ರಂತೆ!

Published On - 6:19 pm, Sat, 19 June 21

ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ