AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಡಿಎಂಕೆ ಸಂಸದರ ಹೇಳಿಕೆಗೆ ತೆಲಂಗಾಣ ಗವರ್ನರ್ ಕಿಡಿ

ಇದರಲ್ಲಿ ರಾಜಕೀಯ ಮಾಡುತ್ತಿರುವವರು ಯಾರು? ಅದಕ್ಕೆ ಯಾರು ಹಾಜರಾಗುತ್ತಿದ್ದಾರೆ (ಪ್ರಾಣಪ್ರತಿಷ್ಠೆ) ಅಥವಾ ಯಾರು ಹಾಜರಾಗುತ್ತಿಲ್ಲ? ಅವರೇಕೆ ಹಾಜರಾಗುತ್ತಿಲ್ಲ? ಯಾಕೆಂದರೆ ಇದು ರಾಜಕೀಯ ಹಬ್ಬ ಎಂದು ಅವರು ಭಾವಿಸುತ್ತಾರೆ. ದೇವರ ಹಬ್ಬ ಎಂಬ ಕಾರಣಕ್ಕೆ ಆಹ್ವಾನ ನೀಡಿದರೂ ಬರುತ್ತಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ಬಹುದಿನದ ಕನಸು ಇದು ಎಂದು ಗವರ್ನರ್ ಸೌಂದರರಾಜನ್ ಹೇಳಿದ್ದಾರೆ.

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಡಿಎಂಕೆ ಸಂಸದರ ಹೇಳಿಕೆಗೆ ತೆಲಂಗಾಣ ಗವರ್ನರ್ ಕಿಡಿ
ತಮಿಳಿಸೈ ಸೌಂದರರಾಜನ್
ರಶ್ಮಿ ಕಲ್ಲಕಟ್ಟ
|

Updated on: Jan 15, 2024 | 3:18 PM

Share

ಹೈದರಾಬಾದ್ ಜನವರಿ  15: ತೆಲಂಗಾಣ ಗವರ್ನರ್ ತಮಿಳಿಸೈ ಸೌಂದರರಾಜನ್ (Tamilisai Soundararajan) ಅವರು  ಅಯೋಧ್ಯೆಯ ರಾಮಮಂದಿರದಲ್ಲಿ (Ram Mandir) ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ‘ರಾಜಕೀಯ ಕಾರ್ಯಕ್ರಮ’ ಎಂದು ಕರೆದಿದ್ದಕ್ಕಾಗಿ ಡಿಎಂಕೆ ಸಂಸದ ಟಿಆರ್ ಬಾಲು (TR Balu )ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಕಾರ್ಯಕ್ರಮಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿರುವುದರ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಗವರ್ನರ್ರು, ‘ಪವಿತ್ರ ಹಬ್ಬ’ದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದರಲ್ಲಿ ರಾಜಕೀಯ ಮಾಡುತ್ತಿರುವವರು ಯಾರು? ಅದಕ್ಕೆ ಯಾರು ಹಾಜರಾಗುತ್ತಿದ್ದಾರೆ (ಪ್ರಾಣಪ್ರತಿಷ್ಠೆ) ಅಥವಾ ಯಾರು ಹಾಜರಾಗುತ್ತಿಲ್ಲ? ಅವರೇಕೆ ಹಾಜರಾಗುತ್ತಿಲ್ಲ? ಯಾಕೆಂದರೆ ಇದು ರಾಜಕೀಯ ಹಬ್ಬ ಎಂದು ಅವರು ಭಾವಿಸುತ್ತಾರೆ. ದೇವರ ಹಬ್ಬ ಎಂಬ ಕಾರಣಕ್ಕೆ ಆಹ್ವಾನ ನೀಡಿದರೂ ಬರುತ್ತಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ಬಹುದಿನದ ಕನಸು ಇದು ಎಂದು ಗವರ್ನರ್ ಸೌಂದರರಾಜನ್ ಹೇಳಿದ್ದಾರೆ.

ತೆಲಂಗಾಣ ಗವರ್ನರ್ರು ದೇವಾಲಯಗಳ ನಿರ್ಮಾಣ ಮತ್ತು ಆಚರಣೆಯಲ್ಲಿ ತಮಿಳು ರಾಜರು ಮತ್ತು ಚಕ್ರವರ್ತಿಗಳ ಪಾಲ್ಗೊಳ್ಳುವಿಕೆ ಸೇರಿದಂತೆ ಐತಿಹಾಸಿಕ ಉದಾಹರಣೆಗಳನ್ನು ಉಲ್ಲೇಖಿಸಿದರು.

“ನಮ್ಮ ಪ್ರಧಾನಿ, ನಾನು ಉಲ್ಲೇಖಿಸಿದಂತೆ, ಎಲ್ಲಾ ತಮಿಳು ರಾಜರು ಮತ್ತು ಚಕ್ರವರ್ತಿಗಳು ದೇವಾಲಯಗಳನ್ನು ನಿರ್ಮಿಸಿದರು, ದೇವಾಲಯವನ್ನು ಅರ್ಚಕರು ನಿರ್ಮಿಸಿದರೂ, ಅದನ್ನು ಆಚರಿಸುವವರು ರಾಜರು, ಅವರು ಉತ್ಸವವನ್ನು ಮೊದಲು ಪ್ರಾರಂಭಿಸಿದ್ದು. ಅವರು ‘ಕುಂಭಾಭಿಷೇಕ’ವನ್ನು ಪ್ರಾರಂಭಿಸಿದರು. ತಮಿಳು ಸಂಸ್ಕೃತಿ ಹೀಗಿದೆ, ಹಾಗಾದರೆ ಪ್ರಧಾನಿ ಕಾರ್ಯಕ್ರಮಕ್ಕೆ ಹಾಜರಾಗುವುದನ್ನು ಅವರು ಯಾಕೆ ವಿರೋಧಿಸುತ್ತಾರೆ?

ಜನವರಿ 22 ರಂದು ನಡೆಯಲಿರುವ ಪ್ರಾಣಪ್ರತಿಷ್ಠಾ ಸಮಾರಂಭವನ್ನ ಇದನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂದ ಡಿಎಂಕೆ ಸಂಸದ ಟಿಆರ್ ಬಾಲು ಹೇಳಿದ್ದಾರೆ.

“ಅಯೋಧ್ಯೆ ರಾಮಮಂದಿರ ಉದ್ಘಾಟನೆ ಆಧ್ಯಾತ್ಮಿಕ ಕಾರ್ಯಕ್ರಮವಲ್ಲ, ಬದಲಿಗೆ ರಾಜಕೀಯವಾಗಿದೆ. ಬಿಜೆಪಿ 2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ತಮ್ಮ ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ. ಪಕ್ಷವು ತನ್ನನ್ನು ಈಡೇರಿಸದೆ ಇರುವುದಕ್ಕೆ ಯಾವುದೇ ಸಂಕೋಚವಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ತಮ್ಮ ಸಾಧನೆ ಎಂದು ತೋರಿಸಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಬಾಲು ಹೇಳಿದರು.

ಇದನ್ನೂ ಓದಿ: ಆಹ್ವಾನಿತರು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಬೇಕು: ಸಂಜಯ್ ರಾವತ್

“ರಾಜಕೀಯ ಕಾರಣಗಳಿಗಾಗಿ ಭಕ್ತಿಯನ್ನು ಬಳಸುವುದು ಮತ್ತು ಮತಬ್ಯಾಂಕ್ ಭಾರತದ ಸಾರ್ವಭೌಮತ್ವ ಮತ್ತು ಸಂವಿಧಾನದ ವಿರುದ್ಧವಾಗಿದೆ, ಇದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ, ಬಿಜೆಪಿಯು ಈ ರೀತಿಯ ದೇವಾಲಯದ ಕಾರ್ಯಕ್ರಮವನ್ನು ಬಳಸುತ್ತಿರುವುದು ಖಂಡನೀಯ ಎಂದಿದ್ದರು ಅವರು .

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್