AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahila Shakti canteens: ರಾಜ್ಯದಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ

ರಾಜ್ಯದಲ್ಲಿ ಮಹಿಳಾ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ ಎಂದು ತಿಳಿಸಿದ ಮುಖ್ಯ ಕಾರ್ಯದರ್ಶಿ, ಎಲ್ಲಾ ಸರ್ಕಾರಿ ಕಚೇರಿಗಳು, ಜಿಲ್ಲಾಧಿಕಾರಿಗಳು, ಪ್ರವಾಸಿ ತಾಣಗಳು, ವಿವಿಧ ದೇವಸ್ಥಾನಗಳು, ಬಸ್ ನಿಲ್ದಾಣಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಮಹಿಳೆಯರ ನೆರವಿನೊಂದಿಗೆ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

Mahila Shakti canteens: ರಾಜ್ಯದಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ
ಶಾಂತಿ ಕುಮಾರಿ
ರಶ್ಮಿ ಕಲ್ಲಕಟ್ಟ
|

Updated on:Jun 14, 2024 | 11:06 AM

Share

ಹೈದರಾಬಾದ್ ಜೂನ್ 14: ತೆಲಂಗಾಣದಾದ್ಯಂತ (Telangana) ಕನಿಷ್ಠ 150 “ಮಹಿಳಾ ಶಕ್ತಿ” ಕ್ಯಾಂಟೀನ್‌ಗಳನ್ನು (Mahila Shakti canteen) ಸ್ಥಾಪಿಸಲು ಮತ್ತು ಆಹಾರ ತಿನಿಸುಗಳ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳಾ ಸಂಘಟನೆಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ (A Revanth Reddy) ಅವರ ನಿರ್ದೇಶನದಂತೆ ಮುಖ್ಯ ಕಾರ್ಯದರ್ಶಿ ಶಾಂತಿ ಕುಮಾರಿ ಅವರು ಗುರುವಾರ ಸಚಿವಾಲಯದಲ್ಲಿ “ಮಹಿಳಾ ಶಕ್ತಿ – ಕ್ಯಾಂಟೀನ್ ಸೇವೆಗಳು” ಕುರಿತು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, ಕ್ಯಾಂಟೀನ್‌ಗಳ ಕಾರ್ಯನಿರ್ವಹಣೆ, ವ್ಯವಸ್ಥೆ ಮತ್ತು ಅವುಗಳನ್ನು ಸ್ಥಾಪಿಸಲು ಅಗತ್ಯವಿರುವ ಸ್ಥಳಾವಕಾಶದ ಕುರಿತು ವಿವರವಾದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಆಯುಕ್ತರಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮಹಿಳಾ ಸಂಘಟನೆಗಳನ್ನು ಬಲಪಡಿಸುವ ಉದ್ದೇಶವನ್ನು ಮುಖ್ಯಮಂತ್ರಿಗಳು ಹೊಂದಿದ್ದಾರೆ ಎಂದು ತಿಳಿಸಿದ ಮುಖ್ಯ ಕಾರ್ಯದರ್ಶಿ, ಎಲ್ಲಾ ಸರ್ಕಾರಿ ಕಚೇರಿಗಳು, ಜಿಲ್ಲಾಧಿಕಾರಿಗಳು, ಪ್ರವಾಸಿ ತಾಣಗಳು, ವಿವಿಧ ದೇವಸ್ಥಾನಗಳು, ಬಸ್ ನಿಲ್ದಾಣಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಮಹಿಳೆಯರ ನೆರವಿನೊಂದಿಗೆ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ನಡೆಯುತ್ತಿರುವ ಕ್ಯಾಂಟೀನ್‌ಗಳು ಮತ್ತು ಪಶ್ಚಿಮ ಬಂಗಾಳದಲ್ಲಿ “ದೀದಿ ಕಿ ರಸೋಯಿ” ಯಶಸ್ವಿ ನಿರ್ವಹಣೆ ಕುರಿತು ಅಧ್ಯಯನವನ್ನು ಮಾಡಲಾಗಿದೆ. ಇನ್ನೆರಡು ವರ್ಷಗಳಲ್ಲಿ ಕನಿಷ್ಠ 150 ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಈ ಕ್ಯಾಂಟೀನ್‌ಗಳ ನಿರ್ವಹಣೆಯನ್ನು ಗ್ರಾಮೀಣ ಮಹಿಳಾ ಗುಂಪುಗಳಿಗೆ ವಹಿಸಲಾಗುವುದು. ಈ ಗುಂಪುಗಳಿಗೆ ಕ್ಯಾಂಟೀನ್‌ಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ವಿಶೇಷ ತರಬೇತಿಯನ್ನು ನೀಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

ಪ್ರಧಾನ ಕಂದಾಯ ಕಾರ್ಯದರ್ಶಿ ನವೀನ್ ಮಿತ್ತಲ್, ಪಂಚಾಯತ್ ರಾಜ್ ಆಯುಕ್ತೆ ಅನಿತಾ ರಾಮಚಂದ್ರನ್, ಆರೋಗ್ಯ ಆಯುಕ್ತ ಆರ್.ವಿ.ಕರ್ಣನ್, ದತ್ತಿ ಆಯುಕ್ತ ಹನುಮಂತ ರಾವ್, ಪ್ರವಾಸೋದ್ಯಮ ನಿರ್ದೇಶಕಿ ನಿಖಿಲಾ, ಪ್ರವಾಸೋದ್ಯಮ ನಿಗಮದ ಎಂಡಿ ರಮೇಶ್ ನಾಯ್ಡು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Parliament Monsoon Session 2024: ಜುಲೈ 22 ರಿಂದ ಆಗಸ್ಟ್​ 9ರವರೆಗೆ ಸಂಸತ್ ಮುಂಗಾರು ಅಧಿವೇಶನ

ಸರ್ಕಾರಿ ಕಚೇರಿಗಳು, ಜಿಲ್ಲಾಧಿಕಾರಿ ಕಚೇರಿಗಳು, ಪ್ರವಾಸಿ ತಾಣಗಳು, ದೇವಸ್ಥಾನಗಳು ಇತ್ಯಾದಿಗಳಲ್ಲಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು. ಈ ಕ್ಯಾಂಟೀನ್‌ಗಳ ನಿರ್ವಹಣೆ ಗ್ರಾಮೀಣ ಮಹಿಳಾ ಗುಂಪುಗಳದ್ದು. ಈ ಮಹಿಳಾ ಗುಂಪುಗಳ ಸದಸ್ಯರಿಗೆ ಕ್ಯಾಂಟೀನ್‌ಗಳ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Fri, 14 June 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ