AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ, 73 ಬಾರಿ ಇರಿದು ಉದ್ಯಮಿಯನ್ನು ಕೊಂದ ಮೊಮ್ಮಗ, ತಾಯಿಯ ಮೇಲೂ ಹಲ್ಲೆ

ಆಸ್ತಿಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ, 28 ವರ್ಷದ ವ್ಯಕ್ತಿಯೊಬ್ಬ ತನ್ನ ಅಜ್ಜನಿಗೆ 73 ಬಾರಿ ಇರಿದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಆತ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಮೃತ ಉದ್ಯಮಿ ವಿಸಿ ಜನಾರ್ದನ ರಾವ್ 460 ಕೋಟಿ ರೂ. ಮೌಲ್ಯದ ವೆಲ್ಜನ್ ಗ್ರೂಪ್ ಆಫ್ ಕಂಪನಿಗಳ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇದು ಹೈಡ್ರಾಲಿಕ್ಸ್ ಉಪಕರಣಗಳು, ಹಡಗು ನಿರ್ಮಾಣ, ಇಂಧನ ಇನ್ನೂ ಹಲವು ಉದ್ಯಮಗಳಿವೆ.

ಆಸ್ತಿ ವಿವಾದ, 73 ಬಾರಿ ಇರಿದು ಉದ್ಯಮಿಯನ್ನು ಕೊಂದ ಮೊಮ್ಮಗ, ತಾಯಿಯ ಮೇಲೂ ಹಲ್ಲೆ
ಜನಾರ್ಧನ್ Image Credit source: NDTV
ನಯನಾ ರಾಜೀವ್
|

Updated on: Feb 10, 2025 | 3:00 PM

Share

ಆಸ್ತಿಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ, 28 ವರ್ಷದ ವ್ಯಕ್ತಿಯೊಬ್ಬ ತನ್ನ ಅಜ್ಜನಿಗೆ 73 ಬಾರಿ ಇರಿದು ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಆತ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಮೃತ ಉದ್ಯಮಿ ವಿಸಿ ಜನಾರ್ದನ ರಾವ್ 460 ಕೋಟಿ ರೂ. ಮೌಲ್ಯದ ವೆಲ್ಜನ್ ಗ್ರೂಪ್ ಆಫ್ ಕಂಪನಿಗಳ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇದು ಹೈಡ್ರಾಲಿಕ್ಸ್ ಉಪಕರಣಗಳು, ಹಡಗು ನಿರ್ಮಾಣ, ಇಂಧನ ಇನ್ನೂ ಹಲವು ಉದ್ಯಮಗಳಿವೆ.

86 ವರ್ಷದ ಅಜ್ಜನನ್ನು ಕೊಲೆ ಮಾಡಿದ ಆರೋಪದ ಮೇಲೆ ಕೀರ್ತಿ ತೇಜ ಎಂಬುವವನನ್ನು ಬಂಧಿಸಲಾಗಿದೆ, ಆತ ಸ್ನಾತಕೋತ್ತರ ಕೋರ್ಸ್​ ಮುಗಿಸಿ ಅಮೆರಿಕದಿಂದ ಹಿಂದಿರುಗಿದ್ದ. ಗುರುವಾರ ರಾತ್ರಿ, ಅವರು ಮತ್ತು ಅವರ ತಾಯಿ ಸರೋಜಿನಿ ದೇವಿ ಹೈದರಾಬಾದ್‌ನಲ್ಲಿರುವ ತಮ್ಮ ಅಜ್ಜನ ಮನೆಗೆ ಭೇಟಿ ನೀಡಿದರು. ತೇಜ ಅವರ ಅಜ್ಜನೊಂದಿಗೆ ಮಾತನಾಡುತ್ತಿದ್ದಂತೆ, ಅವರ ತಾಯಿ ಚಹಾ ಮಾಡಲು ಅಡುಗೆಮನೆಗೆ ಹೋದರು.

ಇಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ರಾವ್ ಇತ್ತೀಚೆಗೆ ತಮ್ಮ ಹಿರಿಯ ಮಗಳ ಮಗ ಶ್ರೀಕೃಷ್ಣ ಅವರನ್ನು ವೆಲ್ಜನ್ ಗ್ರೂಪ್‌ನ ನಿರ್ದೇಶಕರನ್ನಾಗಿ ನೇಮಿಸಿದ್ದರು. ಅವರು ತಮ್ಮ ಎರಡನೇ ಮಗಳು ಸರೋಜಿನಿಯ ಮಗ ತೇಜ ಅವರಿಗೆ 4 ಕೋಟಿ ರೂ. ಮೌಲ್ಯದ ಷೇರುಗಳನ್ನು ವರ್ಗಾಯಿಸಿದ್ದರು.

ಮತ್ತಷ್ಟು ಓದಿ: ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ

ತನ್ನ ಅಜ್ಜ ಬಾಲ್ಯದಿಂದಲೂ ತನ್ನನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದ, ತೇಜ ತಾಳ್ಮೆ ಕಳೆದುಕೊಂಡು ತನ್ನ ಪಕ್ಕದಲ್ಲಿದ್ದ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಆತನ ತಾಯಿ ಮಧ್ಯ ಪ್ರವೇಶಿಸಲು ಬಂದಾಗ ಆಕೆಯ ಮೇಲೂ ತೇಜ ಹಲ್ಲೆ ನಡೆಸಿದ್ದಾನೆ.

ತೇಜ ಕೊಲೆ ಮಾಡಿದ್ದನ್ನು ಕಂಡಿದ್ದ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಆತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್