AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಬಿಜೆಪಿಯಿಂದ ಟಿಆರ್​​ಎಸ್ ಶಾಸಕರ ಖರೀದಿ ಯತ್ನ ಆರೋಪದ ತನಿಖೆ ನಡೆಸಲು ತೆಲಂಗಾಣ ಹೈಕೋರ್ಟ್ ಅನುಮತಿ

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷ ಟಿಆರ್‌ಎಸ್ ಆರೋಪದ ಕುರಿತು ಪೊಲೀಸರು ತನಿಖೆ ಮುಂದುವರಿಸಬಹುದು ಎಂದು ತೆಲಂಗಾಣ ಹೈಕೋರ್ಟ್

Breaking News ಬಿಜೆಪಿಯಿಂದ ಟಿಆರ್​​ಎಸ್ ಶಾಸಕರ ಖರೀದಿ ಯತ್ನ ಆರೋಪದ ತನಿಖೆ ನಡೆಸಲು ತೆಲಂಗಾಣ ಹೈಕೋರ್ಟ್ ಅನುಮತಿ
TV9 Web
| Edited By: |

Updated on:Nov 08, 2022 | 6:26 PM

Share

ತಮ್ಮ ನಾಲ್ವರು ಶಾಸಕರನ್ನು ಪಕ್ಷ ಬದಲಾಯಿಸಲು ದಲ್ಲಾಳಿಗಳು ಸಂಪರ್ಕಿಸಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (KCR) ಅವರ ಪಕ್ಷ ಟಿಆರ್‌ಎಸ್(TRS) ಆರೋಪದ ಕುರಿತು ಪೊಲೀಸರು ತನಿಖೆ ಮುಂದುವರಿಸಬಹುದು ಎಂದು ತೆಲಂಗಾಣ ಹೈಕೋರ್ಟ್(Telangana High Court)  ಹೇಳಿದೆ. ಪ್ರತಿಸ್ಪರ್ಧಿ ಬಿಜೆಪಿ ತೆಲಂಗಾಣ ಹೈಕೋರ್ಟ್‌ನಲ್ಲಿ ಕೇಂದ್ರೀಯ ತನಿಖಾ ದಳದಂತಹ ನಿಷ್ಪಕ್ಷ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿತ್ತು. ಇದಾದ ನಂತರ ನ್ಯಾಯಾಲಯವು ಬಿಜೆಪಿ ಅರ್ಜಿಯ ವಿಚಾರಣೆಯ ಬಾಕಿ ಇದ್ದುದರಿಂದ ರಾಜ್ಯ ಪೊಲೀಸ್ ತನಿಖೆಯನ್ನು ತಡೆಹಿಡಿದಿತ್ತು. ಇದೀಗ ನ್ಯಾಯಾಲಯವು ಪೊಲೀಸ್ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ತೆಗೆದುಹಾಕಿದೆ.

ನವೆಂಬರ್ 18 ರಂದು ನಿಷ್ಪಕ್ಷಪಾತ ತನಿಖೆಯ ಅಗತ್ಯತೆಯ ಬಗ್ಗೆ ಬಿಜೆಪಿಯ ಕಳವಳಕ್ಕೆ ಪ್ರತಿಕ್ರಿಯಿಸುವಂತೆ ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್ಎಸ್ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್ ನೀಡಿದೆ. ಕೆ.ಚಂದ್ರಶೇಖರ ರಾವ್, ಅಥವಾ ಕೆಸಿಆರ್, 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿಟಿಆರ್‌ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಿದ್ದಾರೆ.

ಕಳೆದ ವಾರ, ಕೆಸಿಆರ್ ಅನಿರೀಕ್ಷಿತ ಸುದ್ದಿಗೋಷ್ಠಿ ಕರೆದಿದ್ದು ಬಿಜೆಪಿ ವಿರುದ್ಧ ತಮ್ಮ ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸಿದರು ಎಂಬ ಆರೋಪವನ್ನು ಸಾಬೀತುಪಡಿಸುವ ವಿಡಿಯೊಗಳ ಸರಣಿಯನ್ನು ಪ್ರದರ್ಶಿಸಿದರು. ಸುದ್ದಿಗೋಷ್ಠಿಯಲ್ಲಿ ಐದು ನಿಮಿಷಗಳ ವಿಡಿಯೊವನ್ನು ಅವರು ಪ್ರದರ್ಶಿಸಿದರು. “ದೆಹಲಿ ದಲ್ಲಾಳಿಗಳು” ತಮ್ಮ ಪಕ್ಷದ ನಾಲ್ವರು ಶಾಸಕರಿಗೆ ಲಂಚ ನೀಡಲು ಯತ್ನಿಸಿದ್ದಾರೆ ಎಂದು ಕೆಸಿಆರ್ ಆರೋಪಿಸಿದ್ದಾರೆ.

ಆಪರೇಷನ್ ಯತ್ನದ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ, ಇದು ಮುಖ್ಯಮಂತ್ರಿಯವರದ್ದೇ ಚಿತ್ರಕಥೆ, ನಿರ್ದೇಶನ ಮತ್ತು ನಿರ್ಮಾಣದ” ನಾಟಕ ಎಂದು ಹೇಳಿದೆ.

Published On - 5:52 pm, Tue, 8 November 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು