AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ. ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ […]

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 12, 2020 | 4:28 PM

Share

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ.

ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ ಇದೆ. ಹೀಗಾಗಿ ಪಟಾಕಿ‌ ಹೊಡೆಯುವದರಿಂದ ಜನರು‌ ಶ್ವಾಸಕೋಶದ ಸಮಸ್ಯೆಗೆ ಈಡಾಗುತ್ತಾರೆ. ಆದ್ದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಪಟಾಕಿ ಹೊಡೆಯುವುದು ಸರಿ ಅಲ್ಲ ಎಂದು ನ್ಯಾಯವಾದಿ ಇಂದ್ರಪ್ರಕಾಶ ವಾದ ಮಂಡಿಸಿದರು. ಜೊತೆಗೆ ಪಟಾಕಿ‌‌ಯನ್ನು ಬ್ಯಾನ್‌ ಮಾಡುವಂತೆ ಮನವಿ ಮಾಡಿದ್ದರು. ವಾದವನ್ನು ಪುರಸ್ಕರಿಸಿದ ಹೈಕೋರ್ಟ್​ ಪಟಾಕಿ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಿದೆ.

ಅಲ್ಲದೆ ಮಾಧ್ಯಮಗಳ ಮೂಲಕ ಈ ಬಗ್ಗೆ ಪ್ರಚಾರ ಮಾಡಿ ಪಟಾಕಿ‌ ಹೊಡೆಯದಂತೆ ಪ್ರಜೆಗಳಲ್ಲಿ‌ ಜಾಗೃತಿ ಮೂಡಿಸಲು ಸರಕಾರಕ್ಕೆ ಆದೇಶ ನೀಡಿದೆ. ಜೊತೆಗೆ ಪಟಾಕಿ ಹೊಡೆದವರ ಮೇಲೆ ಪ್ರಕರಣ ದಾಖಲಿಸಲು ಸಹ ಸೂಚನೆ ನೀಡಿದೆ. ಹಾಗೂ ಇದೇ 19 ರಂದು ಈ‌ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡಲು ಹೇಳಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ